ಭಯೋತ್ಪಾದಕರೊಂದಿಗೆ ಕಾಂಗ್ರೆಸ್ ನಂಟು: ಶೋಭಾ
Team Udayavani, May 1, 2018, 11:49 AM IST
ಬೆಂಗಳೂರು: ಅಧಿಕಾರಕ್ಕಾಗಿ ಯಾವ ಮಟ್ಟಕ್ಕಾದರೂ ಇಳಿಯುವ ಕಾಂಗ್ರೆಸ್ ಪಕ್ಷ ಕೋಮುವಾದಿ, ಭಯೋತ್ಪಾದಕರೊಂದಿಗೆ ನಂಟು ಹೊಂದಿರುವವರ ಜತೆ ಕೈಜೋಡಿಸಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿ ಸೇರಿ ಯಾವುದೇ ವಿಷಯದಲ್ಲಿ ರಾಜಿಗೂ ಹಿಂಜರಿಯುವುದಿಲ್ಲ. ಭಯೋತ್ಪಾದಕ ನಂಟು ಹೊಂದಿದ ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರ ಮೇಲೆ ರಾಷ್ಟ್ರೀಯ ತನಿಖಾ ದಳ ಪ್ರಕರಣ ದಾಖಲಿಸಿ ಹಲವರನ್ನು ವಶಕ್ಕೆ ಪಡೆದಿತ್ತು.
ಇಷ್ಟಾದರೂ ಅಲ್ಪಸಂಖ್ಯಾತರ ಓಲೈಕೆಗಾಗಿ ಇಂತಹ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿದೆ. ಇವರ ಮೈತ್ರಿ ಎಷ್ಟರ ಮಟ್ಟಿಗಿದೆ ಎಂದರೆ ಚುನಾವಣೆಯಲ್ಲಿ ಎಸ್ಟಿಪಿಐ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಇದನ್ನೆಲ್ಲಾ ಜನ ಗಮನಿಸುತ್ತಿದ್ದು, ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಬಿಬಿಎಂಪಿಯಲ್ಲಿ ಲೂಟಿ: ಜೆಡಿಎಸ್ನೊಂದಿಗೆ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡಿದೆ. ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ ಅಧಿಕಾರಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದೆ. ಎರಡೂ ಪಕ್ಷಗಳು ಸೇರಿ ಲೂಟಿ ಮಾಡುತ್ತಿವೆ. ವಸ್ತುಸ್ಥಿತಿ ಹೀಗಿದ್ದರೂ ಅಲ್ಪಸಂಖ್ಯಾತರ ಮತ ಧ್ರುವೀಕರಣಕ್ಕಾಗಿ ಬಿಜೆಪಿ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಇನ್ನು 2- 3 ದಿನದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಪೂರ್ವ ನಿಗದಿಯಂತೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರ ಪ್ರವಾಸ ಕಾರ್ಯಕ್ರಮಗಳು ನಡೆಯಲಿವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ