ಸರ್ಕಾರಿ ನೌಕರರಿಗೆ 4ನೇ ಶನಿವಾರವೂ ರಜೆ ನೀಡಿ


Team Udayavani, May 1, 2018, 3:48 PM IST

yad-1.jpg

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆರನೇ ರಾಜ್ಯ ವೇತನ ಆಯೋಗ ತನ್ನ ಅಂತಿಮ ವರದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡುವಂತೆ ಶಿಫಾರಸು ಮಾಡಿದೆ.

ವೇತನ ಆಯೋಗದ ಅಧ್ಯಕ್ಷ ಎಂ.ಆರ್‌. ಶ್ರೀನಿವಾಸಮೂರ್ತಿ ಮತ್ತು ಸದಸ್ಯರು ಸೋಮವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ಸುಮಾರು 500 ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವರದಿಯ ಅಂಶಗಳನ್ನು ಬಹಿರಂಗಪಡಿಸಲು ಆಯೋಗ ಮತ್ತು ಸರ್ಕಾರ ನಿರಾಕರಿಸಿದೆ. 

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಮತ್ತು ಪಿಂಚಣಿಗಳನ್ನು ಪರಿಷ್ಕರಿಸುವ ಕುರಿತು ಆಯೋಗ ಜ.31ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಶೇ. 30ರಷ್ಟು ವೇತನ ಪರಿಷ್ಕರಣೆಗೆ ಸೂಚಿಸಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿದೆ. ಇದೀಗ ಆಯೋಗದ ಅವಧಿ ಸೋಮವಾರಕ್ಕೆ ಕೊನೆಗೊಳ್ಳುತ್ತಿರುವುದರಿಂದ ತನ್ನ ಅಂತಿಮ ವರದಿ ಸಲ್ಲಿಸಿದ್ದು, ಕೆಲವು ಇಲಾಖೆಗಳಲ್ಲಿ ವೇತನ ನಿಗದಿ ಕುರಿತಂತೆ ಇರುವ ವ್ಯತ್ಯಾಸ, ಒಂದೇ ಹುದ್ದೆಯಲ್ಲಿರುವ ನೌಕರರ ಮಧ್ಯೆ ಇರುವ ವೇತನ ಅಸಮಾನತೆ ನಿವಾರಣೆ, ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಶಿಫಾರಸುಗಳನ್ನು ಮಾಡಿದೆ. 

ಹಿರಿಯ ನೌಕರರಿಗೆ ವೇತನ ಬಡ್ತಿ ಮತ್ತು ಫಿಟ್‌ ಮೆಂಟ್‌ ಕಡ್ಡಾಯವಾಗಿ ನೀಡಬೇಕು. ರಾಜ್ಯ ಸರಕಾರಿ ನೌಕರರಿಗೆ ಉಚಿತ ಆರೋಗ್ಯ ಭದ್ರತೆ ಒದಗಿಸುವ ‘ಜ್ಯೋತಿ ಸಂಜೀವಿನಿ’ (ನಗದು ರಹಿತ ಚಿಕಿತ್ಸಾ ಸೌಲಭ್ಯ) ಅನುದಾನಿತ ಸಂಸ್ಥೆಗಳ ನೌಕರರಿಗೂ ನೀಡಬೇಕು ಮತ್ತು ಎಲ್ಲಾ ಕಾಯಿಲೆಗಳಿಗೂ ಅನ್ವಯ ಮಾಡಬೇಕು. ಸ್ವಯಂ ನಿವೃತ್ತಿ ಪಡೆಯಲು ಇರುವ ಗರಿಷ್ಠ ಸೇವಾವಧಿಯನ್ನು 33 ವರ್ಷದಿಂದ 30 ವರ್ಷಕ್ಕೆ ಇಳಿಸಬೇಕು ಎಂದು ಆಯೋಗ ತನ್ನ ಶಿಫಾರಸಿನಲ್ಲಿ ಹೇಳಿದೆ ಎಂದು ತಿಳಿದುಬಂದಿದೆ.

ನೌಕರರ ವೇತನದಲ್ಲಿ ಅಸಮಾನತೆ ಹೋಗಲಾಡಿಸಲು ಕೆಲ ಭತ್ಯೆಗಳನ್ನು ನೀಡುವಂತೆ ಮತ್ತು ತರ್ಕಬದ್ಧವಾಗಿ ವೇತನ ನಿಗದಿಪಡಿಸಬೇಕು ಎಂದು ಹೇಳಿದೆ. ಅಲ್ಲದೆ, ವೇತನ ಬಡ್ತಿ ನೀಡುವ ಸಂದರ್ಭದಲ್ಲಿ ನೌಕರರ ಕಾರ್ಯಕ್ಷಮತೆ ಪರಿಗಣಿಸಬೇಕು. ಈ ಮೂಲಕ ಸರ್ಕಾರಿ ನೌಕರರಲ್ಲೇ ಸ್ಪರ್ಧಾತ್ಮಕ ಮನೋಭಾವ ಬೆಳೆಯಲು ಅವಕಾಶ ಕಲ್ಪಿಸಬೇಕು. ಇದರಿಂದ ಅವರ ಕಾರ್ಯಕ್ಷಮತೆ ಸುಧಾರಣೆಯಾಗಿ ಕೆಲಸಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಆಯೋಗ ಶಿಫಾರಸು ಮಾಡಿದೆ.

ಇದಲ್ಲದೆ, ರಾಜ್ಯ ಸರ್ಕಾರ ಅಳವಡಿಸಿಕೊಂಡಿರುವ ತುಟ್ಟಿ ಭತ್ಯೆ ಸೂತ್ರದಲ್ಲಿ ಕೆಲವೊಂದು ಮಾರ್ಪಾಟುಗಳನ್ನು ಮಾಡಿಕೊಳ್ಳಬೇಕು. ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆ, ರಜೆ ಪ್ರಯಾಯಿತಿ, ವೈದ್ಯಕೀಯ ಮರುಪಾವತಿ ಪ್ರಮಾಣವನ್ನು ಪ್ರಸ್ತುತ ಹಣದುಬ್ಬರ ಪ್ರಮಾಣಕ್ಕೆ ತಕ್ಕಂತೆ ಹೆಚ್ಚಿಸಬೇಕು ಎಂದೂ ಆಯೋಗವು ತನ್ನ ಶಿಫಾರಸಿನಲ್ಲಿ ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆಯೂ ಆಯೋಗ ಕೆಲವು ಶಿಫಾರಸುಗಳನ್ನು ಮಾಡಿದ್ದು, ಪ್ರಸ್ತುತ ಇರುವ ಖಾಲಿ ಹುದ್ದೆಗಳ ಪೈಕಿ ಅಗತ್ಯವಿರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ನೌಕರರಿಗೆ ಆಗಾಗೆ ತರಬೇತಿ ನೀಡಬೇಕು ಎಂದು ಹೇಳಿದೆ. ಅಲ್ಲದೆ, ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರೊಂದಿಗೆ ಅವರಿಗೆ ನೀಡುವ ನಗದು ಪುರಸ್ಕಾರದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದೂ ಹೇಳಿರುವುದಾಗಿ ತಿಳಿದುಬಂದಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.