ಬರಿದಾಯ್ತು ಭದ್ರೆ ಒಡಲು


Team Udayavani, May 1, 2018, 4:18 PM IST

dvg-0.jpg

ದಾವಣಗೆರೆ: ಭದ್ರಾ ಜಲಾಶಯದ ಒಡಲು ಇದೀಗ ಬರಿದಾಗಿದೆ. ಅಚ್ಚುಕಟ್ಟು ಭಾಗದ ಜಿಲ್ಲೆಯ ರೈತರು ಆತಂಕಕ್ಕೆ ಈಡಾಗಿದ್ದಾರೆ. ಸತತ 5 ಅವಧಿಗೆ ಏನೂ ಬೆಳೆಯದೆ ಈ ಬಾರಿಯಾದರೂ ಒಂದು ಬೆಳೆ ಕೈಗೆ ಸಿಗಲಿದೆ ಎಂಬ ಭರವಸೆ ಇಟ್ಟುಕೊಂಡವರಿಗೆ ಇದೀಗ ಭದ್ರೆಯ ಒಡಲು ಖಾಲಿಯಾಗಿರುವುದು ಬರಸಿಡಿಲು ಬಡಿದಂತಾಗಿದೆ.

ಜಿಲ್ಲೆಯ 60 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಕಳೆದ ಜನವರಿ 5ರಂದು ನಾಲೆಗೆ ನೀರು ಬಿಡಲಾಯಿತು. 120 ದಿನಗಳ ಕಾಲ ಸತತ ನೀರು ಹರಿಸಲು ವೇಳಾಪಟ್ಟಿ ಸಿದ್ಧಪಡಿಸಿದ ಕಾಡಾ ರೈತರಿಗೆ ಭತ್ತ ಬೆಳೆಯಲು ಪ್ರೋತ್ಸಾಹಿಸಿತು. ಇದನ್ನು ನಂಬಿಕೊಂಡ ರೈತರು ಭತ್ತ ನಾಟಿಗೆ ಮುಂದಾದರು.

ಮೇಲ್ಭಾಗದಲ್ಲಿ ನೀರಿನ ಹರಿವು ಹೆಚ್ಚಾದ್ದರಿಂದ ಕೆಳಭಾಗಕ್ಕೆ ನೀರು ಹರಿಯುವ ಪ್ರಮಾಣ ಇಳಿಕೆಯಾಯಿತು. ಇದೇ ಕಾರಣಕ್ಕೆ ನೀರು ಬಿಟ್ಟ 20 ದಿನದ ನಂತರ ಈ ಭಾಗದಲ್ಲಿ ಭತ್ತ ನಾಟಿ ಆರಂಭ ಆಗಿತ್ತು. ನೀರು ಹರಿದು ಬಂದಂತೆ ರೈತರು ನಾಟಿ ಮಾಡಿದರು. ಜಿಲ್ಲೆಯಲ್ಲಿನ ಅಚ್ಚುಕಟ್ಟು ಪ್ರದೇಶದ ಕೊನೆಭಾಗದ ರೈತರು ನೀರು ಹರಿದ ತಿಂಗಳ ನಂತರ ನಾಟಿ ಮಾಡಿದರು. 

ಇದೀಗ ಈ ಎಲ್ಲಾ ಭತ್ತದ ಬೆಳೆ ವಿಫಲ ಆಗುವ ಭೀತಿಯಲ್ಲಿದೆ. ಮೂರು ಹಂತದಲ್ಲಿ ಭತ್ತ ನಾಟಿ ಮಾಡಲಾಗಿದೆ. ರೈತರ ಪೈಕಿ
ಮೊದಲ ಕಂತಲ್ಲಿ ನಾಟಿ ಮಾಡಿದ ಗದ್ದೆಗಳಿಗೆ ಈಗಿನ ಲೆಕ್ಕಾಚಾರದಂತೆ ಕನಿಷ್ಠ ಇನ್ನೂ 20 ದಿನ ನೀರು ಬೇಕು. ಉಳಿದ ಭಾಗಕ್ಕೆ 1 ತಿಂಗಳಾದರೂ ನೀರು ಬೇಕಿದೆ.

ಆದರೆ, ಜಲಾಶಯದ ನೀರಿನ ಮಟ್ಟ ಇದೀಗ 115 ಅಡಿ ಎತ್ತರದ ಆಸುಪಾಸಿನಲ್ಲಿದೆ. ಹಾಗಾಗಿಯೇ ಗೇಟ್‌ ತೆರೆದಿದ್ದರೂ ಸಹ ನಾಲೆಯಲ್ಲಿ ಹರಿಯುವ ನೀರಿನ ಪ್ರಮಾಣ ಈಗಾಗಲೇ 2-3 ಅಡಿ ಇಳಿಕೆ ಕಂಡಿದೆ. ಅಲ್ಲಿಗೆ ಜಲಾಶಯದ ಮಟ್ಟ ಇದೀಗ ಬಳಕೆ ಮಾಡಲು ಬಾರದ ಮಟ್ಟಕ್ಕೆ ಬಂದು ತಲುಪಿದೆ ಎಂದು ಅಚ್ಚುಕಟ್ಟು ಭಾಗದ ತಜ್ಞ ರೈತರು ಹೇಳುತ್ತಿದ್ದಾರೆ.

ಜಲಾಶಯ ಒಟ್ಟು 32ಟಿಎಂಸಿ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಇದರಲ್ಲಿ 13ಟಿಎಂಸಿ ನೀರು ಬಳಕೆಗೆ ಸಿಗುವುದಿಲ್ಲ. ಉಳಿದ ನೀರನ್ನು ಬಳಸಬಹುದು. ಆದರೆ, ಇಂದಿನ ಜಲಾಶಯದ ಮಟ್ಟ ಗಮನಿಸಿದರೆ 14 ಟಿಎಂಸಿ ಇದೆ. ಅಲ್ಲಿಗೆ ಇನ್ನೊಂದು ಟಿಎಂಸಿಯಲ್ಲಿ ಕೊನೆಭಾಗದವರೆಗೆ ನೀರು ತಲುಪುವುದು ಸಾಧ್ಯವಿಲ್ಲವಾಗಿದೆ ಎಂದು ಕಾಡಾದ ಮಾಜಿ ಸದಸ್ಯರೊಬ್ಬರು ಹೇಳುತ್ತಾರೆ.

ಈ ಎಲ್ಲಾ ಅಂಶ ಗಮನಿಸಿದರೆ ಜಿಲ್ಲೆಯ ಅಚ್ಚುಕಟ್ಟು ಭಾಗದ ರೈತರು ಇದುವರೆಗೆ ಕಳೆದುಕೊಂಡು 5 ಬೆಳೆಯ ಜೊತೆಗೆ
ಈ ಬೆಳೆ ಸಹ ಕೈಗೆ ಬಂದರೂ ಜೇಬಿಗೆ ಹಣ ತಂದುಕೊಡಲಾಗದ ಬೆಳೆ ಆಗಲಿದೆ ಎನ್ನುವಂತಾಗಿದೆ. 

ಕುಡಿಯುವ ನೀರಿಗೂ ಸಮಸ್ಯೆ?
ಸದ್ಯ ಜಲಾಶಯ ಸಂಪೂರ್ಣ ಖಾಲಿ ಆಗುವುದರಿಂದ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವುದು ಖಚಿತ. ಹಾಲಿ ಈಗಾಗಲೇ ಜಾತ್ರೆ, ಕುಡಿಯಲು ಎಂದು ನದಿಗೆ 6 ಟಿಎಂಸಿ ನೀರು ಹರಿಸಲಾಗಿದೆ. ಅದು ಈಗ ಖಾಲಿ ಸಹ ಆಗಿಹೋಗಿದೆ. ಮುಂದೆ ಕುಡಿಯುವುದಕ್ಕೂ ಜಲಾಶಯದಲ್ಲಿ ನೀರಿಲ್ಲ. ಇದು ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ ಜಿಲ್ಲೆಯ ಭಾಗಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗಲು ಕಾರಣವಾಗಲಿದೆ.

ಪಾಟೀಲ ವೀರನಗೌಡ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.