ಜೀವ ಬೆದರಿಕೆ ಇದ್ದ ಕಾರಣ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಿಲ್ಲ! ;ಶೋಭಾ
Team Udayavani, May 2, 2018, 12:16 PM IST
ಬೆಂಗಳೂರು: ‘ಜೀವ ಬೆದರಿಕೆ ಇದ್ದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಬುಧವಾರ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಠಕ್ಕೆ ಭೇಟಿ ನೀಡುವುದು ಬೇಡ ಎಂಬ ವಿಶೇಷ ಭದ್ರತಾ ಪಡೆಯ ಸಲಹೆಯಂತೆ ಅವರು ಭೇಟಿ ನೀಡಿಲ್ಲ. ಪ್ರಧಾನಿ ಅವರಿಗೂ ಈ ಬಗ್ಗೆ ಹೋಗಲು ಸಾಧ್ಯವಾಗಿಲ್ಲ ಎಂಬ ಬೇಸರವಿದೆ’ ಎಂದರು.
ಮಾಧ್ಯಮವೊಂದರಲ್ಲಿ ಪ್ರಶ್ನೆಗೆ ಉತ್ತರಿಸಿದ ಅವರು ‘ಎಸ್ಪಿಜಿ ಯಾವ ಕಾರಣಕ್ಕೆ ಮಠಕ್ಕೆ ಭೇಟಿ ನೀಡುವುದು ಬೇಡ ಎಂದಿದೆ ಎಂದು ನನಗೆ ಗೊತ್ತಿಲ್ಲ’ ಎಂದರು.
ಪ್ರಧಾನಿ ಮಂಗಳವಾರ ಮಧ್ಯಾಹ್ನ ನಗರದ ಎಂಜಿಎಂ ಮೈದಾನದಲ್ಲಿ ನಡೆದ ಬೃಹತ್ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಕೃಷ್ಣ ಮಠಕ್ಕೆ ತೆರಳಿರಲಿಲ್ಲ. ಅವರು ಕೃಷ್ಣ ಮಠಕ್ಕೆ ತೆರಳುವ ಬಗ್ಗೆ ಕೆಲ ದಿನಗಳಿಂದ ಗೊಂದಲಗಳು ಇದ್ದವು.
ಮಠದ ಸ್ಪಷ್ಟನೆ
ಪರ್ಯಾಯ ಪಲಿಮಾರು ಮಠದ ವೆಂಕಟರಮಣ ಆಚಾರ್ಯ ಅವರು ಮಾದ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, ‘ಮಠದಲ್ಲಿ ಯಾವುದೇ ಭದ್ರತಾ ಲೋಪವಿರಲಿಲ್ಲ. ಪೊಲೀಸರು ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಿದ್ದರು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ