ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ
Team Udayavani, May 2, 2018, 5:51 PM IST
ಗೋಕಾಕ: ಕಾರ್ಮಿಕರು ತಮ್ಮ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿಸದೆ, ಸರ್ಕಾರ ನೀಡುವ ಶೈಕ್ಷಣಿಕ ಸವಲತ್ತುಗಳ ಸದ್ಬಳಕೆ ಮಾಡಿಕೊಳ್ಳುವ ಮೂಲಕ ದೇಶದ ಉನ್ನತ ನಾಗರಿಕರನ್ನಾಗಿ ಬೆಳೆಸುವಂತೆ ಇಲ್ಲಿಯ 2ನೇ ಹೆಚ್ಚುವರಿ ಜೆಎಂಎಫ್ಸಿ ಹಾಗೂ ಸಿವಿಲ್ ನ್ಯಾಯಾಧೀಶ ಮೋಹನ ಎಸ್.ಪೋಳ ಕರೆ ನೀಡಿದರು.
ಮಂಗಳವಾರ ತಾಪಂ ಸಭಾಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಪಂಚಾಯತ್ ರಾಜ್ಯ ಇಲಾಖೆ
ಸಹಯೋಗದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾನೂನು ಸಾಕ್ಷರತಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರು ವೇತನ ತಾರತಮ್ಯ ನಿವಾರಣೆಗೆ, ಪರಿಶ್ರಮಕ್ಕೆ ತಕ್ಕ ವೇತನ, ಸರ್ಕಾರದ ಯೋಜನೆಗಳ ಅನುಷ್ಠಾನ ಇತ್ಯಾದಿ ಹಕ್ಕುಗಳಿಗಾಗಿ
ಕಾರ್ಮಿಕರ ಬಾಂಧವರು, ತಮ್ಮ ಹೋರಾಟವನ್ನು ಮುಂದುವರೆಸಿಕೊಂಡು ಬಂದಿರುವುದು ಅತಂತ್ಯ ವಿಷಾದಕರ ಸಂಗತಿ ಎಂದರು.
ಹಿರಿಯ ವಕೀಲ ಆರ್.ಎಚ್. ಇಟ್ನಾಳ ಕಾರ್ಮಿಕರಿಗೆ ಇರುವ ಕಾನೂನು ಮತ್ತು ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ವಕೀಲರ ಸಂಘದ ಅಧ್ಯಕ್ಷ ಎಸ್.ವಿ. ದೇಮಶೆಟ್ಟಿ, ಕಾರ್ಮಿಕರ ಹಿತ ರಕ್ಷಣೆಗಾಗಿ ಸರ್ಕಾರದ ಕಾರ್ಮಿಕರ ಪರ ನೀತಿ ಜಾರಿಗೊಳ್ಳಬೇಕಿದೆ ಎಂದರು. ವೇದಿಕೆಯಲ್ಲಿ ಸಮೃದ್ಧಿ ಸಂಘದ ಅಧ್ಯಕ್ಷ ನಿಂಗಪ್ಪ ಕಟ್ಟಿಕಾರ ಹಾಗೂ ಗೋಕಾಕ ತಾಲೂಕು ಹಮಾಲರ ಸಂಘದ ಅಧ್ಯಕ್ಷ ಬಸವರಾಜ ಆರ್ಯನ್ನವರ ಉಪಸ್ಥಿತರಿದ್ದರು. ಜಿ.ಬಿ. ಪೋಟಿ ಸ್ವಾಗತಿಸಿ, ನಿರೂಪಿಸಿದರು. ಆರ್.ಎಸ್. ಹಿರೇಮಠ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ