ಮತದಾನ ಪ್ರೇರೇಪಿಸಲು ಸಾಕ್ಷ್ಯಚಿತ್ರ
Team Udayavani, May 3, 2018, 3:57 PM IST
ರಾಮನಗರ: ಮೇ 12ರಂದು ನಡೆಯುವ ಚುನಾವಣೆಯಲಿ ಗರಿಷ್ಠ ಸಂಖ್ಯೆಯ ಮತದಾರರನ್ನು ಮತದಾನ ಮಾಡುವಂತೆ ಸೆಳೆಯಲು ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಿರ್ಮಿಸಿರುವ ಮೂರು ನಿಮಿಷಗಳ ಸಾಕ್ಷ್ಯಚಿತ್ರದ ಸಿ.ಡಿ.ಗಳನ್ನು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಲ್ಲೆ„ ಮುಹಿಲನ್ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಈ ಸಿಡಿಗಳನ್ನು ಬಿಡುಗಡೆ ಮಾಡಿಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಮತದಾನ ಸಂವಿಧಾನ ನೀಡಿರುವ ಹಕ್ಕು. ಮತದಾನ ಮಾಡುವುದು ಪ್ರಜೆಗಳ ಕರ್ತವ್ಯವೂ ಹೌದು. ಹೀಗಾಗಿ ಮತದಾರರು ಚುನಾವಣೆಯ ದಿನ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು. ತಮ್ಮ ಹಕ್ಕು ಚಲಾಯಿಸುವುದರ ಮೂಲಕ ಪ್ರಜೆಗಳು ಉತ್ತುಮ ಅಭ್ಯರ್ಥಿಯನ್ನು ಅರಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಸಿಇಒ ಮುಲ್ಲೆ ಮುಹಿಲನ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.82 ಮತದಾನವಾಗಿದೆ. ಈ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಮತದಾನಕ್ಕೆ ಪ್ರೇರಣೆ ನೀಡುವ ಉದ್ದೇಶದಲ್ಲಿ ಕಿರುಸಾಕ್ಷ್ಯ ಚಿತ್ರವನ್ನು ನಿರ್ಮಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಆ್ಯಂಡ್ರಾಯ್ಡ ಮೊಬೈಲ್ಗಳಲ್ಲಿಯೂ ವೀಕ್ಷಿಸಬಹುದು.
ಎಲ್ಇಡಿ ಡಿಸ್ಪೆ ವಾಲ್ಗಳಲ್ಲಿ ಹಾಗೂ ಇತರೆಡೆ ಪ್ರದರ್ಶಿಸಲಾಗುವುದು. ಈ ಸಾಕ್ಷ್ಯಚಿತ್ರದಲ್ಲಿ ಮತದಾನ ಮಾಡಲು ಪ್ರೇರೇಪಿಸುವ ಸಂಗತಿಗಳಿವೆ ಎಂದರು.ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ರಾಜು ಇದ್ದರು.
ಈ ಕಿರು ಸಾಕ್ಷ್ಯಚಿತ್ರದಲ್ಲಿ ಏನಿದೆ?
ಮೂರು ನಿಮಿಷಗಳ ಸಾಕ್ಷ್ಯಚಿತ್ರ ಮಂಚನಬೆಲೆ ಜಲಾಶಯದ ಮೇಲ್ನೋಟದಿಂದ ಆರಂಭವಾಗಿದೆ. ನಂತರ ಕೂಟಗಲ್ ಬೆಟ್ಟದ ಉದ್ದನೆಯ ಬಂಡೆಗಳು, ಶ್ರೀ ರಾಮದೇವರ ಬೆಟ್ಟ, ರಾಮನಗರ ನಗರ ಪ್ರದೇಶ, ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣ, ಪೊಲೀಸ್ ಭವನ, ಚನ್ನಪಟ್ಟಣದ ಬೊಂಬೆಗಳು, ಜಾನಪದ ಲೋಕ ಹೀಗೆ ಜಿಲ್ಲೆಯ ಪ್ರಮುಖ ಸ್ಥಳಗಳ ಚಿತ್ರಗಳನ್ನು ತೋರಿಸಲಾಗಿದೆ. ಕೃಷಿಕರು, ರೇಷ್ಮೆ ಬೆಳೆಗಾರರು, ಅರಣ್ಯ ರಕ್ಷಕ, ವಿದ್ಯಾರ್ಥಿನಿ, ಮಂಗಳಮುಖೀ ಹೀಗೆ ಸಮಾಜದ ವಿವಿಧ ನಡೆಗಳ ಸಾಮಾನ್ಯ ಜನತೆ ತಾವು ಮತಚಲಾಯಿಸುವುದಾಗಿ ಹೇಳಿ ಪ್ರೇರೇಪಿಸಿದ್ದಾರೆ. ತಾವು ಮೇ 12ರಂದು ಮತಚಲಾಯಿಸುವುದಾಗಿ ಎಲ್ಲಾ ಅರ್ಹ ಮತದಾರರು ಮತಚಲಾಯಿಸುವಂತೆ ಸಾಕ್ಷ್ಯ ಚಿತ್ರದ ಮೂಲಕ ಪ್ರೇರೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!