ಜಿಲ್ಲೆಯಲ್ಲಿ 15ಪಿಂಕ್‌ ಮತಗಟ್ಟೆ


Team Udayavani, May 3, 2018, 4:05 PM IST

ram-1.jpg

ರಾಮನಗರ: ಮೇ 12ರಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮತದಾರರು ಮತದಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್‌ ಸಮಿತಿ ಮತ್ತು ಆಯೋಗ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಮಹಿಳಾ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರೇರೇಪಿಸುವ ಉದ್ದೇಶದಿಂದ ಜಿಲ್ಲೆಯ 15 ಕಡೆ ಪಿಂಕ್‌ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಇಂತಹ ವಿಶೇಷ ಮತಗಟ್ಟೆಗಳನ್ನು ಪರಿಚಯಿಸುತ್ತಿರುವುದು ಇದೇ ಮೊದಲು.
ಸಂಪೂರ್ಣ ಮಹಿಳಾ ಸಿಬ್ಬಂದಿ ಈ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಪಿಂಕ್‌ ಮತಗಟ್ಟೆಗಳನ್ನು “ಸಖೀ” ಅಂತಲೂ ಗುರುತಿಸಲಾಗುತ್ತಿದೆ. ರಾಜ್ಯಾದ್ಯಂತ 450 ಪಿಂಕ್‌ ಮತಗಟ್ಟೆಗಳನ್ನು ಆಯೋಗ ಸ್ಥಾಪಿಸುತ್ತಿದ್ದು, ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ 15 ಮತಗಟ್ಟೆಗಳನ್ನು ಸ್ಥಾಪಿಸುತ್ತಿದೆ. 

ವಿಶೇಷತೆ ಏನು?: “ಸಖೀ’ ಅಥವಾ ಪಿಂಕ್‌ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಸಹ
ಮಹಿಳೆಯರೇ ಆಗಿರುತ್ತಾರೆ. ಈ ಮತಗಟ್ಟೆಗಳು ಅನ್ಯ ಮತಗಟ್ಟೆಗಳಿಗಿಂತ ಕೊಂಚ ವಿಶೇಷತೆಗಳನ್ನು ಅಳವಡಸಿಕೊಳ್ಳಲಿದೆ. ಮತಗಟ್ಟೆಯ ಮುಂಭಾಗ, ಬಾಗಿಲುಗಳಿಗೆ ಪಿಂಕ್‌ (ಗುಲಾಬಿ) ಬಣ್ಣ ಬಳಿಯಲಾಗಿರುತ್ತದೆ. ಮತಗಟ್ಟೆ ಒಳಗೆ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿ ಬಳಸುವ ಟೇಬಲ್‌ಗ‌ಳ ಮೇಲೆ ಗುಲಾಬಿ ಬಣ್ಣದ ಬಟ್ಟೆಯನ್ನು ಹಾಸಲಾಗಿರುತ್ತದೆ. ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಮಹಿಳೆಯರೇ ಆಗಿದ್ದು, ಅವರೆಲ್ಲ ಪಿಂಕ್‌ ಬಣ್ಣದ ವಸ್ತ್ರಗಳನ್ನು ಧರಿಸಲಿದ್ದಾರೆ.

ಇದು ಈ ಮತಗಟ್ಟೆಯ ವಿಶೇಷತೆ. ಇನ್ನುಳಿದಂತೆ ಎಲ್ಲಾ ಮತಗಟ್ಟೆಗಳಲ್ಲಿ ಇರುವಂತೆ ಇಲ್ಲಿಯೂ ಕುಡಿಯುವ ನೀರಿನ
ವ್ಯವಸ್ಥೆ, ವಿಕಲಚೇತರಿಗೆ ರ್‍ಯಾಂಪ್‌ ವ್ಯವಸ್ಥೆ, ವೀಲ್‌ ಚೇರ್‌ ವ್ಯವಸ್ಥೆ ಮತ್ತು ಸಹಾಯಕರ ವ್ಯವಸ್ಥೆ, ಪ್ರಥಮ ಚಿಕಿತ್ಸಾ ವ್ಯವಸ್ಥೆ ಇಲ್ಲಿರಲಿದೆ. ಈ ಮತಗಟ್ಟೆಗೆ ಸಂಬಂಧಿಸಿದ ಮತದಾರರು ಇಲ್ಲಿಯೇ ಮತಚಲಾಯಿಸಬೇಕು. 

ಗುಲಾಬಿ (ಪಿಂಕ್‌) ಮತಗಟ್ಟೆ  ಎಲ್ಲೆಲ್ಲಿ?
ಮಾಗಡಿ: ಪುರಸಭೆ ಕಚೇರಿ ಕೊಠಡಿ ಸಂಖ್ಯೆ 1 ಮತ್ತು 2 ರಾಮನಗರ: ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ 5, ಬಾಲಕರ ಸರ್ಕಾರಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಬಿಇಒ ಕಚೇರಿ ಹತ್ತಿರ-ಕೊಠಡಿ ಸಂಖ್ಯೆ 1, ಯಾರಬ್‌ ನಗರದ ಮರಿಯಮ್‌ ಇಂಗ್ಲಿಷ್‌ ಮಾಧ್ಯಮ ಶಾಲೆಯ ಕೊಠಡಿ ಸಂಖ್ಯೆ 1, ಮಲ್ಲೇಶ್ವರ ಬಡಾವಣೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿ ಸಂಖ್ಯೆ 1, ಅರ್ಚಕರಹಳ್ಳಿ ಸರ್ಕಾರಿ ರಿಯ ಪ್ರಾಥುಮಿಕ ಶಾಲೆ. 

ಕನಕಪುರ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋಪಸಂದ್ರ, ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದ ಕೊಠಡಿ ಸಂಖ್ಯೆ 1 ಮತ್ತು 2, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸದೊಡ್ಡಿ.

ಚನ್ನಪಟ್ಟಣ: ಸಂತ ಜೋಸೆಫ್ ಹಿರಿಯ ಪ್ರಾಥುಕ ಶಾಲೆಯ ಕೊಠಡಿ ಸಂಖ್ಯೆ 1, ಹಳೆ ನಗರಸಭೆ ಕಚೇರಿ, ಬಿ.ಎಂ.
ರಸ್ತೆಯಲ್ಲಿನ ಸರ್ಕಾರಿ ಉರ್ದು ಹಿರಿಯ ಪ್ರಾಥುಕ ಶಾಲೆಯ ಎಡಬದಿಯ ಕೊಠಡಿ ಸಂಖ್ಯೆ 1 ಹಾಗೂ ಬಲಬದಿಯಲ್ಲಿನ ಕೊಠಡಿ ಸಂಖ್ಯೆ 1ರಲ್ಲಿ ಪಿಂಕ್‌ ಮತಗಟ್ಟೆ ಸ್ಥಾಪಿಸಲಾಗುತ್ತಿದೆ.

ಚುನಾವಣಾ ಅಯೋಗದ ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ 15 ಮತಗಟ್ಟೆ ಸ್ಥಾಪಿಸಲಾಗುತ್ತಿದೆ. ಹಾಲಿ ಇರುವ ಮತಗಟ್ಟೆಗಳ ಪೈಕಿ 15 ಗುರುತಿಸಿ ಪಿಂಕ್‌ ಮತಗಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು. ಪಿಂಕ್‌ ಮತಗಟ್ಟೆ ವಿಶೇಷವಾಗಿ ಮಹಿಳಾ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುವ ಉದ್ದೇಶದಿಂದ ಎಲ್ಲಾ ಮಹಿಳಾ ಸಿಬ್ಬಂದಿಯನ್ನೇ ಒಳಗೊಂಡಿರುತ್ತಾರೆ.
ಡಾ.ಪ್ರಶಾಂತ್‌, ಅಪರ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.