ಸರಿಯಾಗಿರಲಿ ಲೆಕ್ಕ ಪತ್ರ: ಅಭ್ಯರ್ಥಿಗಳಿಗೆ ವೀಕ್ಷಕರ ಪಾಠ
Team Udayavani, May 3, 2018, 4:17 PM IST
ಧಾರವಾಡ: ಚುನಾವಣಾ ಆಯೋಗದ ನಿಯಮಗಳ ಅನುಸಾರವಾಗಿ ಅಭ್ಯರ್ಥಿಗಳು ಲೆಕ್ಕ ಪತ್ರಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ಚುನಾವಣಾ ಖರ್ಚು ವೆಚ್ಚಗಳ ವೀಕ್ಷಕರಾದ ಆನಂದಕುಮಾರ ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ ಹೊಸ ಅತಿಥಿ ಗೃಹದಲ್ಲಿ ನಡೆದ 71 ಧಾರವಾಡ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಮತ್ತು ಅವರ ಅಧಿಕೃತ ಏಜೆಂಟರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯಲ್ಲಿ ಸುಳ್ಳು ಮಾಹಿತಿ ಅಥವಾ ದಾಖಲೆಗಳನ್ನು ಸೃಷ್ಟಿಸಬಾರದು. ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ಮಿತಿಯೊಳಗೆ ಚುನಾವಣಾ ಖರ್ಚು ವೆಚ್ಚ ನಿರ್ವಹಿಸಿ, ಪ್ರತಿದಿನ ವಿವರಗಳನ್ನು ಸಲ್ಲಿಸಬೇಕು. ಪ್ರತಿಯೊಂದು ದಾಖಲೆಯನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದರು.
ಅಭ್ಯರ್ಥಿಗಳು ಕರಪತ್ರ, ಬ್ಯಾನರ್, ಇತರೆ ಖರ್ಚು, ವೆಚ್ಚಗಳ ವಿವರಗಳನ್ನು ನೀಡಬೇಕು. ಚುನಾವಣಾ ಆಯೋಗವು ಪ್ರತಿಯೊಬ್ಬ ಅಭ್ಯರ್ಥಿಗೆ 28 ಲಕ್ಷ ರೂ.ಗಳ ವೆಚ್ಚದ ಮಿತಿ ನಿಗದಿಪಡಿಸಿದ್ದು, ಅದರ ಮಿತಿಯಲ್ಲಿ ಅಭ್ಯರ್ಥಿಗಳು ಖರ್ಚು, ವೆಚ್ಚಗಳನ್ನು ನಿರ್ವಹಿಸಬೇಕು. ಮೂರು ಹಂತಗಳಲ್ಲಿ ಚುನಾವಣೆ ವೆಚ್ಚ ಪರಿಶೀಲನೆ ಕಾರ್ಯ ನಡೆಯುತ್ತದೆ. ಪರಿಶೀಲನೆ ವೇಳೆ ತಪ್ಪದೇ ಹಾಜರಾಗಬೇಕು. ಲೆಕ್ಕ ವಹಿಗಳು, ಖರ್ಚಿನ ವೋಚರ್ಗಳು, ಬ್ಯಾಂಕ್ ಪಾಸ್ ಪುಸ್ತಕ, ಎಬಿಸಿ ರಜಿಸ್ಟರ್ ನಿರ್ವಹಿಸಿ ಪೂರ್ಣ ಮಾಹಿತಿ ಒದಗಿಸಬೇಕು ಎಂದರು.
71-ಧಾರವಾಡ ಕ್ಷೇತ್ರದ ಚುನಾವಣಾಧಿಕಾರಿ ಪಿ.ಜಯಮಾಧವ ಮಾತನಾಡಿ, ಅಭ್ಯರ್ಥಿಗಳು ಸರಿಯಾಗಿ ಲೆಕ್ಕಪತ್ರಗಳನ್ನು ನಿರ್ವಹಿಸಬೇಕು. ಯಾವುದೇ ಸುಳ್ಳು ದಾಖಲೆಗಳನ್ನು ನೀಡಬಾರದು. ಪ್ರಚಾರದ ಖರ್ಚು ವೆಚ್ಚಗಳನ್ನು ನೀಡಬೇಕು. ಸುಳ್ಳು ಮಾಹಿತಿ ನೀಡಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ಪ್ರಕಾಶ ಕುದರಿ, ಸಹಾಯಕ ವೆಚ್ಚ ವೀಕ್ಷಕರಾದ ಆರ್.ಎನ್.ಈರೇಗೌಡ, ಎಸ್.ಎಂ.ಕೋಳೂರು, ವೀಕ್ಷಕರ ಲೇಸನಿಂಗ್ ಅಧಿಕಾರಿ ಪಿ.ನಾಗೇಶ ಸೇರಿದಂತೆ ವಿವಿಧ ಪಕ್ಷದ ಅಭ್ಯರ್ಥಿಗಳ ಏಜೆಂಟರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ