ಪ್ರಚಾರಕ್ಕೆ ಕಾಂಗ್ರೆಸ್, ಬಿಜೆಪಿಯಿಂದ ಮಕ್ಕಳ ಬಳಕೆ
Team Udayavani, May 4, 2018, 7:20 AM IST
ಹನುಮಸಾಗರ: ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಪೈಪೋಟಿಗೆ ಬಿದ್ದು ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಹನುಮಸಾಗರದಲ್ಲಿ ಗುರುವಾರ ಕಂಡು ಬಂತು.
ಎರಡೂ ಪಕ್ಷಗಳು ಮನೆಮನೆಗೆ ತೆರಳಿ ಬಿರುಸಿನ ಪ್ರಚಾರ ಕೈಗೊಂಡಿದ್ದು, ಬಿಸಿಲಿನ ಹೊಡೆತಕ್ಕೆ ದೊಡ್ಡವರು, ಕೂಲಿ ಕಾರ್ಮಿಕರು ಸಿಗದ ಕಾರಣ ಮಕ್ಕಳನ್ನು ಪೋಸ್ಟರ್, ಪಾಂಪ್ಲೆಂಟ್ ಹಂಚುವುದು, ಬ್ಯಾನರ್ ಕಟ್ಟಲು, ಮನೆಮನೆಗೆ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂತು.
ಗ್ರಾಮದಲ್ಲಿ 40 ಡಿಗ್ರಿಯಷ್ಟು ಬಿಸಿಲಿದೆ. ಇದರಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕಂಗಾಲಾಗಿದ್ದಾರೆ. ಬೆಳಗ್ಗೆ 6ಕ್ಕೆ ಪ್ರಚಾರ ಕೈಗೊಂಡು 11 ಗಂಟೆಯಾಗುವಷ್ಟರಲ್ಲಿ ಬಿಸಿಲಿನ ಝಳಕ್ಕೆ ಸುಸ್ತಾಗುತ್ತಿದ್ದಾರೆ. ಕಾರ್ಯಕರ್ತರು ಬಿಸಿಲಿಗೆ ಬೆದರಿ ಪ್ರಚಾರದಲ್ಲಿ ಅಷ್ಟಕ್ಕಷ್ಟೆ ಎಂಬಂತಾಗಿದೆ. ಹೀಗಾಗಿ ಮಕ್ಕಳನ್ನು ಕಡಿಮೆ ಕೂಲಿಗೆ ಕರೆದುಕೊಂಡು ತಾವು ಮಾಡುವ ಕೆಲಸವನ್ನು ಮಕ್ಕಳಿಂದ ಮಾಡಿಸುತ್ತಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!