ಜೀವನ ಮೌಲ್ಯಗಳ ಆಸಕ್ತಿ ಹೊಂದಲು ಕರೆ
Team Udayavani, May 4, 2018, 4:53 PM IST
ಹುಬ್ಬಳ್ಳಿ: ಯುವ ಜನಾಂಗ ಆಧುನಿಕ ಶೈಲಿ, ಸಂಸ್ಕೃತಿಗೆ ಮಾರುಹೋಗದೆ ಜೀವನದ ಮೌಲ್ಯಗಳ ಬಗೆಗೆ ಆಸಕ್ತಿ ವಹಿಸಬೇಕೆಂದು ಕನ್ನಡ ವಿಷಯದ ಪ್ರಾಧ್ಯಾಪಕಿ ಡಾ| ವಿಜಯಶ್ರೀ ಹಿರೇಮಠ ಕಿವಿಮಾತು ಹೇಳಿದರು.
ಇಲ್ಲಿನ ವಿದ್ಯಾನಗರದ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ನಿಮಿತ್ತ ಪುಸ್ತಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ವಿ ವ್ಯಕ್ತಿ ಆಗಬೇಕಾದರೆ ನಿರಂತರ ಪರಿಶ್ರಮ ಅವಶ್ಯ. ಅದೇ ರೀತಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ ಆರೇಳು ಗಂಟೆ ನಿರಂತರ ಅಧ್ಯಯನ ಮಾಡುವ ಮೂಲಕ ತಮ್ಮ ಬದುಕನ್ನು
ರೂಪಿಸಿಕೊಳ್ಳಬೇಕು ಎಂದರು. ಪ್ರಾಚಾರ್ಯ ಡಾ| ಎಂ.ಜಿ. ಸಜ್ಜನ ಅಧ್ಯಕ್ಷತೆ ವಹಿಸಿದ್ದರು.
ಡಾ| ಎಲ್.ಸಿ. ಮುಳ್ಳೊಳ್ಳಿ, ಡಾ| ಬಿ.ವಿ. ಹಳೇಮನಿ, ಡಾ| ಜಯಶ್ರೀ ಕುಂದಗೋಳಮಠ, ಪ್ರೊ| ಎ.ಸಿ. ಪ್ರತಿಭಾ, ಡಾ| ಲಕ್ಷ್ಮೀ ಜಾಧವ, ಡಾ| ರತ್ನಾ ಬೆಂಡಿಗೇರಿ ಇದ್ದರು. ಗೋದಾವರಿ ಪ್ರಾರ್ಥಿಸಿದರು. ಗ್ರಂಥಪಾಲಕಿ ಕವಿತಾ ಕಲಕಬಂಡಿ ಪ್ರಾಸ್ತಾವಿಕ ಮಾತನಾಡಿದರು. ಜ್ಯೋತಿ ಅಕ್ಕಿ ನಿರೂಪಿಸಿದರು. ಜ್ಯೋತಿ ಪರಣ್ಣವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ