ಶ್ರಮಪಟ್ಟು ದುಡಿದರೆ ನೆಮ್ಮದಿ
Team Udayavani, May 4, 2018, 5:26 PM IST
ಗದಗ: ಕಾರ್ಮಿಕರು ಪರಿಶ್ರಮ ಜೀವಿಗಳು. ಅವರ ಮನಃಪೂರ್ವಕ, ಪ್ರಾಮಾಣಿಕ ಹಾಗೂ ನಿಸ್ವಾರ್ಥವಾಗಿ ಮಾಡುವ ಶ್ರಮಕ್ಕೆ ಪರಮಾತ್ಮನ ಆಶೀರ್ವಾದ ದೊರಕುತ್ತದೆ ಎಂದು ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ಅಕ್ಕನವರು ಹೇಳಿದರು. ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಕಾರ್ಮಿಕನ ಮನಸ್ಸು ಆರೋಗ್ಯ ಪೂರ್ಣವಾಗಿರುವುದರ ಜೊತೆಗೆ ಶರೀರವು ಆರೋಗ್ಯ ಪೂರ್ಣವಾಗಿರುತ್ತದೆ. ಶ್ರಮಪಟ್ಟು ಕೆಲಸ ಮಾಡುವುದರಿಂದ ಕಾರ್ಮಿಕ ರೋಗ ಮುಕ್ತನಾಗಿರುತ್ತಾನೆ. ಅದರೊಂದಿಗೆ ಅವರ ಮನಸ್ಸು ಯೋಗಯುಕ್ತವಾಗಿರಬೇಕು ಎಂದು ಹೇಳಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶ್ರಮಪಟ್ಟು ದುಡಿಯುವವರಿಗೆ ರಾಜಯೋಗದ ಅಭ್ಯಾಸದಿಂದ ಆಂತರಿಕ ಶಕ್ತಿ ಮತ್ತು ನೆಮ್ಮದಿ ವೃದ್ಧಿಸುತ್ತದೆ. ಕಾರ್ಮಿಕರೊಂದಿಗೆ ಮಾಲೀಕರು ಗೌರವ ಮತ್ತು ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಮಿಕ ಶೇಖರಪ್ಪ ರೇವಡಿಹಾಳ, ಕಾರ್ಮಿಕ ಈರಪ್ಪ ಬೇಲೇರಿ ಮಾತನಾಡಿ, ಲಕ್ಕುಂಡಿ ಈಶ್ವರೀಯ ವಿಶ್ವ ವಿದ್ಯಾಲಯದ ಕಟ್ಟಡವನ್ನು ಕಟ್ಟಲು ಇಂಜಿನಿಯರ್ ನನಗೆ ಜವಾಬ್ದಾರಿ ಕೊಟ್ಟರು. ಅಲ್ಲಿಯ ಬ್ರಹ್ಮಕುಮಾರಿ ಅಕ್ಕಂದಿರು, ನನ್ನಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸಿದರು ಎಂದರು.
ಅಬ್ದುಲ್ ಹುಮನಾಬಾದ್, ಮಹೇಶ ವಡ್ಡರ, ಪರಶುರಾಮ ಡೊಳ್ಳಿ, ಗಣೇಶ ಹಳ್ಳಿಕೇರಿ ಮೊಹಮ್ಮದ್ ಶಾರುಕ್, ಮಲ್ಲಿಕ್ ಕುಂದಗೋಳ, ಸತೀಶ ಕುರಬರ, ತಿಮ್ಮಣ್ಣ ಹಳ್ಳಕೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
MUST WATCH
ಹೊಸ ಸೇರ್ಪಡೆ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ