‘ಬಿಜೆಪಿ ಗೆದ್ದರೆ ಪ್ರತ್ಯೇಕ ಮರಳು ನೀತಿ ಜಾರಿ: ಹರೀಶ್‌ ಪೂಂಜ


Team Udayavani, May 5, 2018, 8:25 AM IST

Maralu-Neethi-4-5.jpg

ಮಡಂತ್ಯಾರು: ಬಡವರಿಗೆ ನೇರವಾಗಿ ಸವಲತ್ತನ್ನು ನೀಡುವ ಕೆಲಸ ಮೋದಿ ಸರಕಾರ ಮಾಡುತ್ತಿದೆ. ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಸ್ಥಾನ ಕೊಟ್ಟ ಪಕ್ಷ ಬಿಜೆಪಿ. ನವಬೆಳ್ತಂಗಡಿ ನಿರ್ಮಾಣದ ಮೂಲಕ ರಾಜ್ಯವನ್ನು ನವಕರ್ನಾಟಕ ಮಾಡಲು ಸಂಕಲ್ಪ ಮಾಡಬೇಕಿದೆ ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಹೇಳಿದರು.

ಅವರು ಗುರುವಾರ ಮಚ್ಚಿನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ರಾಜ್ಯದಲ್ಲಿ ಹಿಂದೂ ಸಮಾಜ ಸುರಕ್ಷಿತವಾಗಿಲ್ಲ. ದ.ಕ. ಜಿಲ್ಲೆಯ ಮರಳನ್ನು ಬೇರೆ ಊರುಗಳಿಗೆ ನೀಡು ಮೂಲಕ ಮರಳು ಮಾಫಿಯಾ ನಡೆಯುತ್ತಿದೆ. ನಮ್ಮ ಜಿಲ್ಲೆಯವರು ಒಂದು ಲೋಡಿಗೆ 15ರಿಂದ 20 ಸಾವಿರ ರೂ. ಕೊಡುವ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆ ಉಸ್ತುವಾರಿ ಸಚಿವರು. ಬಿಜೆಪಿ ಗೆಲ್ಲಿಸಿದರೆ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರುವ ಮೂಲಕ ಜನತೆಗೆ ಮನೆ ನಿರ್ಮಾಣಕ್ಕೆ ನೆರವಾಗುತ್ತೇವೆ ಎಂದರು.

ಭ್ರಷ್ಟಾಚಾರ ಮುಕ್ತ
ತಾಲೂಕಿನ 81 ಗ್ರಾಮಗಳಲ್ಲಿ ಇನ್ನೂ ರಸ್ತೆಯಾಗಿಲ್ಲ. ಪ್ರವಾಸೋದ್ಯಮ ಅಭಿ ವೃದ್ಧಿಯಾಗಿಲ್ಲ. ತಾಲೂಕು ಕಚೇರಿಗಳಲ್ಲಿ ಭ್ರಷ್ಟರೇ ತುಂಬಿದ್ದಾರೆ. ಇದಕ್ಕೆ ಕಾರಣ ತಾಲೂಕಿನ ಭ್ರಷ್ಟ ರಾಜಕೀಯ. ಬಿಜೆಪಿ ಆಡಳಿತ ಬಂದರೆ ತಾಲೂಕನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ. ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಮಾಡಿದಂತೆ ತಾಲೂಕಿನಲ್ಲೂ ಚಕ್‌ ಡ್ಯಾಂ ನಿರ್ಮಾಣ ಮಾಡಿ ತಾಲೂಕಿನ ಎಲ್ಲ ಗ್ರಾಮ ಗಳಿಗೂ ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.

ಜಿಲ್ಲಾ ಬಿಜೆಪಿ ವಕ್ತಾರ ಹರಿಕಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಪ್ರಚಾರ ಸಮಿತಿಯ ರತ್ನಾಕರ ಪೂಜಾರಿ ಬಲ್ಪುಂಜ, ಕಾನೂನು ಪ್ರಕೋಷ್ಟದ ಸಂಚಾಲಕ ವಸಂತ ಮರಕ್ಕಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶಿವರಾಮ ಕಾರಂದೂರು, ಅನೀಷ್‌ ಅಮೀನ್‌, ಹಿತೇಶ್‌ ಕಾಪಿನಡ್ಕ, ತಾ.ಪಂ. ಸದಸ್ಯೆ ವಸಂತಿ ಎಲ್‌., ಜಿ.ಪಂ. ಸದಸ್ಯೆ ಮಮತಾ ಶೆಟ್ಟಿ, ಬಿಜೆಪಿ ಗ್ರಾ. ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್‌ ಬಿಎಸ್‌. ಉಪಸ್ಥಿತರಿದ್ದರು.

ಉದ್ಯೋಗ
ತಾಲೂಕಿನಲ್ಲಿ 70 ಸಾವಿರ ಕುಟುಂಬಗಳಿವೆ. ಇದರಲ್ಲಿ ಅನೇಕರು ಉದ್ಯೋಗ ವಂಚಿತರು ಇದ್ದಾರೆ. ಉದ್ಯೋಗ ಮೇಳದ ಮೂಲಕ ಉದ್ಯೋಗ ಕಲ್ಪಿಸಿ ನೆರವಾಗುವ ಮೂಲಕ ಪ್ರಣಾಳಿಕೆಯಲ್ಲಿ ಮೊದಲ ಆದ್ಯತೆ ನೀಡುತ್ತೇವೆ.
– ಹರೀಶ್‌ ಪೂಂಜ, ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.