ನಡು ನೀರಲ್ಲೊಂದು ರಮಣೀಯ ಬಸದಿ


Team Udayavani, May 5, 2018, 3:01 PM IST

256.jpg

 ವಿಶಾಲ ಕೆರೆಯ ಮಧ್ಯೆ ದೇವಾಲಯ. ಸುತ್ತು ರಮಣೀಯ ಪ್ರಕೃತಿ. ಹೋಗಿ ಕೂತರೆ ಮನಸ್ಸು ಕಳೆದು ಹೋಗಿಬಿಡುತ್ತದೆ. ವರಂಗ ಪವಾಡ ಅಂದರೆ ಇದೇ. 

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೆಬ್ರಿ ರಸ್ತೆಯಲ್ಲಿ ವರಂಗ ಎಂಬ ಪುಟ್ಟ ಹಳ್ಳಿಯಲ್ಲಿದೆ. ಇಲ್ಲಿ ಕಾಲಿಟ್ಟರೆ ಸ್ವರ್ಗ.  ಪಶ್ಚಿಮಘಟ್ಟದ ಹಸಿರ ಸೆರಗಿನ ಮಧ್ಯದಲ್ಲಿ ನಳನಳಿಸುತ್ತಿರುವ ಗದ್ದೆ ತೋಟಗಳ ನಡುವಲ್ಲೊಂದು ವಿಶಾಲ ಕೆರೆ,  ಅದರಲ್ಲಿ ಪದ್ಮಾವತಿ ದೇವಿಯ ಬಸದಿ ಇದೆ.  ಸುತ್ತಲೂ ಪ್ರಕೃತಿ ಪ್ರಿಯರ ಮನಸ್ಸನ್ನು ಸೊರೆಗೊಳಿಸುವಷ್ಟು ಚೆಲುವು. ಕೆರೆಯಲ್ಲಿ ತುಂಬಿರುವ ನೀರಿನ ಮಧ್ಯೆ ಬೆಳೆದಿರುವ ತಾವರೆಯ ಹೂವುಗಳ ಮೇಲೆಯೇ ಬಸದಿ ನಿಂತಿದೆಯೇನೋ ಎನಿಸುತ್ತದೆ. ಬಸದಿ ಸುಮಾರು ಹದಿನಾಲ್ಕರಿಂದ ಹದಿನೈದು ಎಕರೆ ವಿಸ್ತಾರದಲ್ಲಿದೆ. ಕೆರೆ, ನಕ್ಷತ್ರಾಕೃತಿಯ ಚತುರ್ಮುಖದಲ್ಲಿರುವುದೇ ವಿಶೇಷ. 

ದೋಣಿಯೇ ವಾಹನ
ಈ ಬಸದಿಯನ್ನು ತಲುಪಬೇಕೆಂದರೆ ಇರುವ ಏಕೈಕ ವಾಹನ ದೋಣಿ. ಕೆರೆಯಲ್ಲಿ ಹರಡಿರುವ ಕಮಲದ ಹೂವುಗಳನ್ನು ಸೀಳಿಕೊಂಡು ಬಸದಿಯೆಡೆಗೆ ಸಾಗುವುದೇ ರೋಮಾಂಚನ ಅನುಭವ. ದೋಣಿಯಿಂದ ಇಳಿದು ಬಸದಿಯ ಕಟ್ಟೆಯನ್ನು ಹತ್ತಿ ನೋಡಿದರೆ ಸುತ್ತಲೂ ಅಗಾಧ ಜಲರಾಶಿ, ಸಮುದ್ರದ ಮಧ್ಯ ನಿಂತಾಗ ಕಾಡುವ ಏಕಾಂಗಿತನದ ಅನುಭವ, ಇಲ್ಲೂ ಆಗುತ್ತದೆ.  ಐದು ಸೆಂಟ್ಸ್‌ ಜಾಗದಲ್ಲಿ ಮಂಟಪದಂತೆ ವಿಶಿಷ್ಟವಾಗಿ ನಿರ್ಮಿಸಿರುವ ಬಸದಿಯು ತನ್ನ ಒಡಲಾಳದಲ್ಲಿ ಹಲವಾರು ವೈಶಿಷ್ಟ್ಯಗಳನ್ನು ತುಂಬಿಕೊಂಡಿದೆ.

ಜೈನ ಧರ್ಮದ ತೀರ್ಥಂಕರರಾದ ಪಾರ್ಶ್ವನಾಥ, ನೇಮಿನಾಥ, ಶಾಂತಿನಾಥ ಮತ್ತು ಅನಂತನಾಥರ ವಿಗ್ರಹಗಳು ಕರಿಶಿಲೆಯಲ್ಲಿ ಖಡ್ಗಾಸನ ಭಂಗಿಯಲ್ಲಿ ಕೆತ್ತಲ್ಪಟ್ಟಿದೆ.

ಈ ಕ್ಷೇತ್ರವು ಹೊಯ್ಸಳ ಮತ್ತು ಚಾಲುಕ್ಯರ ಶಿಲ್ಪಕಲಾ ಶೈಲಿಯ ಸಮ್ಮಿಶ್ರಣವಾಗಿದೆ.  ವಿಗ್ರಹಗಳ ಎರಡೂ ಬದಿಗಳಲ್ಲಿ ಯಕ್ಷ-ಯಕ್ಷಿಯರ ಬಿಂಬಗಳಿವೆ. ಪೂರ್ವ ದಿಕ್ಕಿನಲ್ಲಿ ಪಾರ್ಶ್ವನಾಥಸ್ವಾಮಿ ಪಕ್ಕದಲ್ಲಿ ಪದ್ಮಾವತಿ ದೇವಿಯ ವಿಗ್ರಹವಿದೆ. ಪದ್ಮಾವತಿ ದೇವಿಯೇ ಇಲ್ಲಿನ ಪ್ರಧಾನ ದೇವರು. ಈ ಬಸದಿಗೆ ನಾಲ್ಕು ದಿಕ್ಕಿನಿಂದಲೂ ಏಕರೂಪವಾದ ಪ್ರವೇಶ ದ್ವಾರವಿದೆ. ಪ್ರತಿಯೊಂದು ದಿಕ್ಕಿಗೂ ಒಂದೇ ಅಳತೆಯ ಮುಖ ಮಂಟಪಗಳಿವೆ. ಪ್ರವೇಶ ದ್ವಾರದ ಹೊರಭಾಗದಲ್ಲಿ ಭಕ್ತರು ಬಸದಿಗೆ ಪ್ರದಕ್ಷಿಣೆ ಹಾಕಲು ಅನುವಾಗುವಂತೆ ಪಥವಿದೆ.  ಕೆರೆಯ ಮಧ್ಯದಲ್ಲಿ ನಿರ್ಮಿತವಾದ ಈ ಬಸದಿಯ ಗೋಡೆ, ಮಂಟಪವು ಶಿಲಾಮಯವಾಗಿದ್ದು, ಇದರ ಛಾವಣಿಯನ್ನೂ  ಸಂಪೂರ್ಣ ಕಲ್ಲಿನಿಂದಲೇ ನಿರ್ಮಿಸಲಾಗಿದೆ.

ಹನ್ನೆರಡನೆ ಶತಮಾನದ್ದು
ಈ ಬಸದಿ ನಿರ್ಮಾಣವಾಗಿದ್ದು 12ನೇ ಶತಮಾನದಲ್ಲಿ. ಕೆರೆಯನ್ನು ಆಳುಪ ಮನೆತನದ ರಾಣಿ ಜಾಕಲೀದೇವಿ ನಿರ್ಮಿಸಿದ್ದಾಳೆ ಎಂದು ಇತಿಹಾಸ ಹೇಳುತ್ತದೆ. ಇದು ಜೈನರ ಪವಿತ್ರ ಕ್ಷೇತ್ರವಾಗಿದ್ದರೂ, ಅನ್ಯಧರ್ಮಿಯರೂ ಪೂಜೆ, ಸೇವೆಯನ್ನು ಸಲ್ಲಿಸುತ್ತಾರೆ. ಅಪಾರ ಜಲರಾಶಿಯ ಮಧ್ಯೆ ವಿರಾಜಮಾನಳಾಗಿರುವ ಪದ್ಮಾವತಿ ದೇವಿಯು ಭಕ್ತರ ಇಷ್ಟಾರ್ಥಗಳನ್ನು ಪೂರೈಸುತ್ತಾಳೆ ಎಂಬ ನಂಬಿಕೆ ಇದೆ. ಮದುವೆಯಾಗಲು ಹರಕೆ ಕಟ್ಟಿಕೊಳ್ಳಲು, ಮದುವೆಯಾದ ಹೊಸ ಜೋಡಿ ಮೊದಲ ಪೂಜೆ ಸಲ್ಲಿಸಲು ಈ ಬಸದಿಗೆ ಬರುತ್ತಾರೆ. 

ಇಲ್ಲಿನ ಇನ್ನೊಂದು ವಿಶೇಷ ಎಂದರೆ, ಹರಕೆಯಿಂದ ಸಂಗ್ರಹಿಸುವ ಅಷ್ಟೂ ಅಕ್ಕಿ, ಹುರುಳಿಗಳನ್ನು ಈ ಕೆರೆಯ ಮೀನುಗಳಿಗೆ ಆಹಾರವಾಗಿ ನೀಡುತ್ತಾರೆ. ಅಕ್ಕಿ, ಹುರುಳಿಗಳನ್ನು ಹಾಕಿದಾಗ ಆಹಾರಕ್ಕಾಗಿ ನಡೆಯುವ ಮೀನುಗಳ ಪೈಪೋಟಿಯನ್ನು ನೋಡುವುದೇ ಅಂದ. ಬಸದಿಯು ಪಕ್ಕದಲ್ಲೆ ವರಂಗ ತೀರ್ಥವೆಂಬ ನೀರಿನ ಸೆಲೆ ಇದೆ. ಇದುವೇ ಕೆರೆಯ ನೀರಿನ ಮೂಲ. ಪ್ರತಿದಿನ ಬಸದಿಯಲ್ಲಿ ಬೆಳಗ್ಗೆ 5.30 ರಿಂದ  ಸಂಜೆಯೊಳಗೆ ಮೂರು ಪೂಜೆಗಳು ನಡೆಯುತ್ತವೆ. 

ಜೈನ ವಾಸ್ತುಶಿಲ್ಪದಲ್ಲಿ ಒಟ್ಟು ನಾಲ್ಕು ಪ್ರಕಾರಗಳಿವೆ. ಇವುಗಳಲ್ಲಿ ಏಕಶಿಲಾ ವಿಗ್ರಹಗಳು, ಮಾನಸ್ತಂಭ, ಬಸದಿಗಳು, ಸಮಾಧಿಗಳ ಪೈಕಿ ಮಾನಸ್ತಂಭ, ಬಸದಿಗಳು ಮತ್ತು ಸಮಾಧಿಗಳು ವರಂಗದಲ್ಲೇ ಇದೆ.  ಬಸದಿಯೊಳಗೆ ನಾಲ್ಕು ಅಡಿ ಎತ್ತರದ ಧ್ಯಾನಸ್ಥ ನೇಮಿನಾಥ ಹಾಗೂ ಚಂದ್ರನಾಥ ಸ್ವಾಮಿಯ ವಿಗ್ರಹಗಳಿವೆ. 

   ಪೂರ್ತಿ ಬಸದಿಯನ್ನು ಕಲ್ಲಿನಿಂದಲೇ ನಿರ್ಮಿಸಿದ್ದು, ಕಪ್ಪು ಕಲ್ಲಿನ ಚಿತ್ತಾರ ಮತ್ತು ಬೆಳಕಿನ ಸಂಯೋಜನೆಯು ನೋಡುಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಪ್ರವೇಶದ್ವಾರದಲ್ಲಿ 45 ಅಡಿ ಎತ್ತರದ ಮಾನಸ್ತಂಭವಿದ್ದು, ಇದು ಕರಾವಳಿಯ ಅತಿ ಪ್ರಾಚೀನ ಮಾನಸ್ಥಂಭಗಳ ಪೈಕಿ ಮೂರನೇ ಅತಿದೊಡ್ಡ ಸ್ತಂಭ ಎನ್ನುವ ಹೆಗ್ಗಳಿಕೆ ಪಡೆದಿದೆ. 

ಸಂತೋಷ್‌ ರಾವ್‌ ಪೆರ್ಮುಡ

ಅರ್ಚಕರೇ ಅಂಬಿಗರು
 ಕೆರೆಯ ದಡ ಹಾಗೂ ಬಸದಿಯ ಮಧ್ಯೆ ಸಂಪರ್ಕ ಸೇತುವಾಗಿ ಇರುವ ಏಕೈಕ ಆಸರೆಯೆಂದರೆ ದೋಣಿ ಏನೋ ನಿಜ. ಆದರೆ ದೋಣಿಯನ್ನು ನಡೆಸಲು ಇಲ್ಲಿ ಪ್ರತ್ಯೇಕ ಅಂಬಿಗನಿಲ್ಲ. ಹಾಗಾಗಿ ಬಸದಿಯು ಇಂದ್ರರೇ (ಅರ್ಚಕರು) ಪ್ರಯಾಣಿಕರಿಗೆ ಅಂಬಿಗನಾಗುತ್ತಾರೆ. ಒಬ್ಬರಿರಲಿ, ನೂರು ಜನ ಬರಲಿ  ಬೇಸರಿಸಿಕೊಳ್ಳದೇ ಇಂದ್ರರು ಭಕ್ತರನ್ನು ಬಸದಿಗೆ ಕರೆದುಕೊಂಡುಬಂದು, ಪೂಜೆ ಮಾಡಿ, ಪ್ರಸಾದ ನೀಡಿ ವಾಪಸ್ಸು ಕರೆದುಕೊಂಡು ಬಂದು ಬಿಡುತ್ತಾರೆ. ಮಳೆ, ಗಾಳಿ, ಬಿಸಿಲು ಚಳಿ ಎನ್ನದೇ, ಬೇಸರಿಸದೇ ನಗುಮುಖದೊಂದಿಗೆ ದೋಣಿಯನ್ನು ಮುನ್ನಡೆಸುತ್ತಾರೆ.  ಮಧ್ಯಪ್ರದೇಶದಲ್ಲಿ ಬಿಟ್ಟರೆ ಇಂಥ ಎರಡನೆಯ ಕೆರೆ ಬಸದಿ ಇರುವುದು ಕರ್ನಾಟಕದ ಈ ವರಂಗದಲ್ಲಿ ಮಾತ್ರ. ಈ ಬಸದಿಗೆ ಪ್ರಾರಂಭದಲ್ಲಿ ಸೇತುವೆಯನ್ನು ನಿರ್ಮಿಸುವ ಪ್ರಸ್ತಾವನೆ ಇತ್ತಾದರೂ, ಇದರ ಮೂಲ 
ಸೌಂದರ್ಯಕ್ಕೆ ಧಕ್ಕೆಯಾಗುವುದೆಂಬ ಕಾರಣಕ್ಕೆ ಆ ಪ್ರಸ್ತಾವನೆಯನ್ನು ಕೈಬಿಟ್ಟಿದ್ದಾರೆ.

 ಬೆಟ್ಟಕ್ಕೆ ಚಾರಣ 
 ಕೆರೆಯ ಸಮೀಪದಲ್ಲೇ ಬೆಟ್ಟವಿದೆ. ಅಲ್ಲಿ ಬೇಡ ರಾಜನ ಅರಮನೆಯ ಅವಶೇಷಗಳಿವೆ. ಇದನ್ನು ನೋಡಲು ಚಾರಣ ಮಾಡಬೇಕಾಗುತ್ತದೆ. ಪ್ರತಿ ಎಳ್ಳಮವಾಸ್ಯೆಯ ದಿನ ಇಲ್ಲಿನ ಕುಂದಾದ್ರಿ ತೀರ್ಥದಲ್ಲಿ ತಲೆಯೊಡ್ಡಿ ತೀರ್ಥಸ್ನಾನ ಮಾಡಬಹುದು. 

ಸಂತೋಷ್‌ ರಾವ್‌ ಪೆರ್ಮುಡ

ಚಿತ್ರ  : ಆಸ್ಟ್ರೋ ಮೋಹನ್‌ 

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.