ರಾಜ್ಯ ಅಭಿವೃದ್ಧಿಗೆ ಜೆಡಿಎಸ್‌ ಬೆಂಬಲಿಸಿ: ಕುಮಾರಸ್ವಾಮಿ


Team Udayavani, May 5, 2018, 3:23 PM IST

ray.jpg

ದೇವದುರ್ಗ: ಬಡವರು, ಹಿಂದುಳಿದವರು, ಶೋಷಿತರು, ದಲಿತರ ಅಭಿವೃದ್ಧಿ ಮತ್ತು ರಾಜ್ಯದ ಸರ್ವಾಂಗೀಣ ಪ್ರಗತಿಗಾಗಿ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಜೆಡಿಎಸ್‌ ಅಭ್ಯರ್ಥಿಗಳಿಗೆ ಗೆಲ್ಲಿಸುವ ಮೂಲಕ ಜೆಡಿಎಸ್‌ ಅಧಿಕಾರಕ್ಕೆ ತರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ವಿನಂತಿಸಿದರು.

ಪಟ್ಟಣದ ಬಸವ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜೆಡಿಎಸ್‌ ವಿಕಾಸ ಪರ್ವ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿಗಾಗಿ ವಿನೂತನ ದೃಷ್ಟಿಕೋನದೊಂದಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ. ನಿಮ್ಮಿಂದ ಪಡೆದ ತೆರಿಗೆ ಹಣದಲ್ಲೇ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡುವೆ ಎಂದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮತ್ತು ರಾಜ್ಯ ಕಾಂಗ್ರೆಸ್‌ ಸರಕಾರಗಳು ರೈತ ವಿರೋಧಿಗಳಾಗಿವೆ. 12 ವರ್ಷಗಳ ಹಿಂದೆ ನಮ್ಮ ಸರಕಾರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ, ಜಾರಿಗೆ ತಂದ ಯೋಜನೆಗಳನ್ನು ನೀವೆಲ್ಲಾ ನೋಡಿದ್ದಿರಿ. ರೈತರ ಬಾಳು ಹಸನಾಗಲು, ಎಲ್ಲರಿಗೂ ಉದ್ಯೋಗ, ಸಮಬಾಳು, ಸಂಪೂರ್ಣ ನೀರಾವರಿ ಸೇರಿ ರಾಜ್ಯ ಮತ್ತು ಜನರ ಸರ್ವಾಂಗೀಣ ಅಭಿವೃದ್ಧಿಗೆ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ನನ್ನನ್ನು ಪರೀಕ್ಷಿಸಲಾದರೂ ಒಮ್ಮೆ ಜೆಡಿಎಸ್‌ಗೆ ಬಹುಮತದ ಅಧಿಕಾರ ನೀಡಿ ಎಂದು ವಿನಂತಿಸಿದರು. 

ಸತತ ಬರ, ನಿರಂತರ ಬೆಳೆ ಹಾನಿಯಿಂದ ರೈತ ಸಮುದಾಯ ತತ್ತರಿಸಿ ಹೋಗಿದೆ. 58 ಸಾವಿರ ಕೋಟಿ ಮೌಲ್ಯದ ಬೆಳೆ ಹಾನಿಯಾಗಿ ರೈತರು ಸಾಲಕ್ಕೆ ಗುರಿಯಾಗಿದ್ದಾರೆ. ರೈತರ ಸಾಲ ಮನ್ನಾ ಮಾಡಿ ಎಂದರೆ ಕೇಂದ್ರದ ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ ಆರ್ಥಿಕ ಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ.

ಆದರೆ ಯಾರಿಗೂ ಗೊತ್ತಾದ ಹಾಗೆ ಕೈಗಾರಿಕೋದ್ಯಮಿಗಳ 2.41 ಲಕ್ಷ ಕೋಟಿ ಸಾಲ ಮಾನ್ನ ಮಾಡಿದ್ದಾರೆ. ಇನ್ನು ರಾಜ್ಯ
ಸರಕಾರ ಅತ್ತು-ಕರೆದ ನಂತರ ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದಾಗಿ ಘೋಷಿಸಿದೆ. ಆದರೆ ಒಂದು ವರ್ಷ ಕಳೆದರೂ ಸಾಲದ ಮೊತ್ತವನ್ನು ಸರಕಾರ ಮರುಪಾವತಿಸಿಲ್ಲ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ಧ ಹರಿಹಾಯ್ದರು. ಜೆಡಿಎಸ್‌ ಸರಕಾರದ ಅವಧಿಯಲ್ಲಿ ರೈತರ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿ, 20 ದಿನಗಳ ಒಳಗೆ ರೈತರ ಮನೆಗೆ ರಸೀದಿ ಕಳುಹಿಸಿರುವುದನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಜೆಡಿಎಸ್‌ ಅ ಧಿಕಾರಕ್ಕೆ ಬಂದರೆ 24 ಗಂಟೆಗಳ
ಒಳಗೆ ರಾಷ್ಟ್ರೀಯ ಬ್ಯಾಂಕ್‌ ಮತ್ತು ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳ ರೈತರ ಸಾಲ ಮತ್ತು ಸ್ತ್ರೀಶಕ್ತಿ ಗುಂಪಿನ ಸಾಲ ಮನ್ನಾ ಮಾಡುವ ಗುರಿ ಹೊಂದಿದೆ ಎಂದು ಹೇಳಿದರು.

ಇನ್ನೂ ಒಂದು ವಾರ ಕಾಲಾವಕಾಶವಿದೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಬೇಕು. ಈ ಕ್ಷೇತ್ರದಲ್ಲಿ ಅಭ್ಯರ್ಥಿ ವೆಂಕಟೇಶ ಪೂಜಾರಿಯನ್ನು ಬಹುಮತದಿಂದ ಆಯ್ಕೆಗೊಳಿಸಿ ಜೆಡಿಎಸ್‌ ಸರಕಾರ ಅಸ್ತಿತ್ವಕ್ಕೆ ತರುವ ಹೊಣೆ ಕಾರ್ಯಕರ್ತರ ಮೇಲಿದೆ ಎಂದರು. 

ಮಾಜಿ ಶಾಸಕ ವೆಂಕಟರಾವ್‌ ನಾಡಗೌಡ, ವಿಧಾನ ಪರಿಷತ್‌ ಸದಸ್ಯರಾದ ಶರವಣ, ಕಾಂತರಾಜ್‌, ಪದವೀಧರ ಕ್ಷೇತ್ರದ ಅಭ್ಯರ್ಥಿ ಬಸವರೆಡ್ಡಿ, ಮುಖಂಡರಾದ ಶಿವರಾಜ ಪಾಟೀಲ ಗೊರೇಬಾಳ, ಉತ್ತಮ್ಮ ಬಸವರಾಜ, ಯುಸೂಫ್‌ ಖಾನ್‌, ಚಂದ್ರಶೇಖರ ಪಾಟೀಲ, ಜಾಗೀರ ಜಾಡಲದಿನ್ನಿ, ಬಾಪುಗೌಡ ಪಾಟೀಲ್‌ ಚಿಕ್ಕಹೊನ್ನಕುಣಿ, ಅಮೀನರೆಡ್ಡಿ ಪಾಟೀಲ, ವಿರೂಪಾಕ್ಷಿ ಬಳೆ, ಭೀಮರಾಯ ಹದ್ದಿನಾಳ, ಬಿಎಸ್‌ಪಿಯ ವೆಂಕನಗೌಡ ಇತರರು ಉಪಸ್ಥಿತರಿದ್ದರು. 

 ದೇವದುರ್ಗ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೆಂಕಟೇಶ ಪೂಜಾರಿ ಮಾತನಾಡಿ, ಬಿಜೆಪಿ ಅಭ್ಯರ್ಥಿ, ಶಾಸಕ ಕೆ.ಶಿವನಗೌಡ ನಾಯಕ ಬಹು ದೊಡ್ಡ ಸುಳ್ಳುಗಾರ. ಅಧಿಕಾರ, ಹಣ ಮದದಿಂದ ಮತಗಳನ್ನು ಖರೀದಿಸುತ್ತೇನೆ ಎಂದು ಬೀಗುತ್ತಿದ್ದಾನೆ. ಈತನ ಸುಳ್ಳಿನ ಕಂತೆಗೆ ಬೇಸತ್ತು ಮುಷ್ಟೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮತದಾರರು ವಾಪಾಸು ಕಳಿಸಿದ್ದಾರೆ. ರಾತ್ರೋ ರಾತ್ರಿ ಯಾರಿಗೂ ಗೊತ್ತಾಗದಂತೆ ಪ್ರಚಾರ ಮಾಡಲು ಹೋಗಿ ಮತ ಖರೀದಿಗೆ ಹಣ ಹಂಚುತ್ತಿದ್ದಾನೆ. ನೀರು ಕೊಡಪ್ಪಾ ಎಂದರೆ ಪ್ರತಿ ಗ್ರಾಮಕ್ಕೆ ಬೀಯರ್‌, ಬ್ರ್ಯಾಂಡಿ ವಿತರಿಸುತ್ತಾನೆ. ಇಂಥವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.

ಈಗಾಗಲೇ ಎರಡು ಬಾರಿ ನಮ್ಮನ್ನು ಸೋಲಿಸಿರುವಿರಿ. ಮೂರನೇ ಬಾರಿಗೆ ಶಿಕ್ಷೆ ಕೊಡಬೇಡಿ. ಒಂದು ಒಳ್ಳೆಯ ನಿರ್ಧಾರ ಮಾಡಬೇಕಾಗಿದೆ. ನೀರಾವರಿ ವಿಷಯ ಬಂದಾಗ ಎಚ್‌.ಡಿ.ದೇವೇಗೌಡ ಮತ್ತು ನನ್ನನ್ನು ನೆನಪಿಸುತ್ತೀರಿ. ಮೂರ್ತಿ ಮಾಡುವ ವಿಚಾರ ಮಾಡುತ್ತಿರಿ. ಆದರೆ ಮತ ಹಾಕುವಾಗ ಮಾತ್ರ ಜೆಡಿಎಸ್‌ ಪಕ್ಷವನ್ನು ಏಕೆ? ಮರೆಯುತ್ತಿರಿ ಎಂಬುದೇ ತಿಳಿಯದಾಗಿದೆ.  
ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ 

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.