ಶ್ರೀನಗರದಲ್ಲಿ ಭಯೋತ್ಪಾದಕ ದಾಳಿ ವಿಫಲ: 3 ಲಷ್ಕರ್ ಉಗ್ರರ ಹತ್ಯೆ
Team Udayavani, May 5, 2018, 5:27 PM IST
ಶ್ರೀನಗರ : ನಗರ ಹೊರವಲಯದಲ್ಲಿ ಇಂದು ಶನಿವಾರ ಬೆಳಗ್ಗೆ ಉಗ್ರರ ದೊಡ್ಡ ಮಟ್ಟದ ಸಂಭಾವ್ಯ ದಾಳಿಯನ್ನು ವಿಫಲಗೊಳಿಸಲಾಗಿರುವ ಜಮ್ಮು ಕಾಶ್ಮೀರ ಪೊಲೀಸರು ಮತ್ತು ಸಿಆರ್ಪಿಎಫ್ ದಳದವರ ನಾಲ್ಕು ತಾಸುಗಳ ಸುದೀರ್ಘ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಲಷ್ಕರ್ ಎ ತಯ್ಯಬ ಉಗ್ರರು ಹತರಾಗಿದ್ದಾರೆ.
ಉಗ್ರರೊಂದಿಗಿನ ಕಾದಾಟದಲ್ಲಿ ನಾಲ್ವರು ಭದ್ರತಾ ಸಿಬಂದಿಗಳು ಗಾಯಗೊಂಡಿದ್ದಾರೆ; ಆದರೆ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಚಳಿಗಾಲದ ರಾಜಧಾನಿಯಾಗಿರುವ ಜಮ್ಮು ವಿನಿಂದ ಶ್ರೀನಗರಕ್ಕೆ ರಾಜ್ಯ ಸರಕಾರಿ ಕಾರ್ಯಾಲಯಗಳು ಶಿಫ್ಟ್ ಆಗುವ ಮೇ 7ಕ್ಕೆ ಮುನ್ನ ಶ್ರೀನಗರದಲ್ಲಿ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿಯನ್ನು ನಡೆಸುವ ಯೋಜನೆ ಲಷ್ಕರ್ ಉಗ್ರರದ್ದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಶನಿವಾರ ನಸುಕಿನ ವೇಳೆ ನಗರ ಹೊರವಲಯದ ಛತ್ತಬಾಲ್ನಲ್ಲಿ ಕಾರ್ಯಾಚರಣೆಯನ್ನು ಆರಂಭಿಸಲಾಗಿ ಅದು ನಾಲ್ಕು ತಾಸುಗಳ ಕಾಲ ಮುಂದುವರಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು