ರಾಜ್ಯ ಲೂಟಿ ಮಾಡಿದವರಿಗೆ ಅಧಿಕಾರ ಸಿಗಲ


Team Udayavani, May 5, 2018, 5:45 PM IST

shiv-1.jpg

ಶಿಕಾರಿಪುರ: ಯಡಿಯೂರಪ್ಪನವರೇ, ನೀವು ತಿಪ್ಪರಲಾಗ ಹಾಕಿದ್ರು ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ನೂರು ಬಾರಿ ನರೇಂದ್ರ ಮೋದಿ ಬಂದರೂ, ಸಾವಿರಾರು ಬಾರಿ ಅಮಿತ್‌ ಶಾ ರಾಜ್ಯಕ್ಕೆ ಬಂದರೂ ಜನ ನಿಮ್ಮ ಪಕ್ಷಕ್ಕೆ ಅಧಿಕಾರ ಕೊಡುವುದಿಲ್ಲ. ರಾಜ್ಯವನ್ನು ಲೂಟಿ ಮಾಡಿದ ನಿಮಗೆ ಜನ ಆಶೀರ್ವಾದ ಮಾಡುವುದಿಲ್ಲ. ಲೂಟಿಕೂರರ ಮುಷ್ಟಿಯಿಂದ ಕರ್ನಾಟಕವನ್ನು ಕಾಪಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಹೊಸ ಸಂತೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಯಡಿಯೂರಪ್ಪ ನಂ. 1 ರೈತ ವಿರೋಧಿ. 2009 ರ ಡಿ. 30 ರಂದು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂಧರ್ಭದಲ್ಲಿ ನಮ್ಮ ಪಕ್ಷದ ಉಗ್ರಪ್ಪ ರೈತರ ಸಾಲ ಮನ್ನಾ ಮಾಡಿ ಎಂದು ಮನವಿ ಮಾಡಿದಾಗ ನಮ್ಮ ಸರ್ಕಾರದಲ್ಲಿ ಹಣವಿಲ್ಲ. ಹಣ ಪ್ರಿಂಟ್‌ ಮಾಡುವ ಮಿಷನ್‌ ಇಲ್ಲ ಎಂದು ಹೇಳಿದ್ದನ್ನು ಜನ ಹಾಗೂ ರೈತರು ಮರೆತಿಲ್ಲ. 224 ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ, ಮುಸ್ಲಿಂ , ಕ್ರಿಶ್ಚಿಯನ್ನರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿಮ್ಮಪಕ್ಷ ಅವಕಾಶ ಕೊಟ್ಟಿಲ್ಲ ಎಂದರು. ಧರ್ಮ- ಧರ್ಮಗಳ ನಡುವೆ, ಜಾತಿ- ಜಾತಿಗಳ ನಡುವೆ ಬೆಂಕಿ ಹಚ್ಚಿ ಸಂಘರ್ಷ ಮೂಡಿಸುವುದು ರಾಜಕಾರಣವಲ್ಲ. ಎಲ್ಲಾ ಧರ್ಮ, ಸಮುದಾಯ, ಜಾತಿಗಳನ್ನು ಒಂದೇ ದೃಷ್ಟಿಕೋನದಲ್ಲಿ ತೆಗೆದುಕೊಂಡು ಹೋಗುವುದು ನಿಜವಾದ ಜಾತ್ಯತೀತತೆಯ ಲಕ್ಷಣ. ಅದಕ್ಕೆ ಪ್ರತ್ಯಕ್ಷ ಉದಾಹರಣೆ ಎಂದರೆ ಕಾಂಗ್ರೆಸ್‌ ಸಿದ್ಧಾಂತಗಳು ಮತ್ತು ಆಡಳಿತ ಎಂದರು.

ಸಾಮಾನ್ಯ ರೈತ ಕುಟುಂಬದಿಂದ ಬಂದ ಗೋಣಿ ಮಾಲತೇಶ ಅವರ ಮೇಲಿನ ಪ್ರೀತಿ, ಕಾಂಗ್ರೆಸ್‌ ಪಕ್ಷದ ಮೇಲಿನ ವಿಶ್ವಾಸ ಹಾಗೂ ಯಡಿಯೂರಪ್ಪ ಮತ್ತು ಮಗನ ಮೇಲಿರುವ ಆಕ್ರೋಶ ಮತಗಳಾಗಿ ಹೊರಹೊಮ್ಮಿ ವಿಧಾನಸಭೆ ಪ್ರವೇಶಿಸಲು ನಿಮ್ಮ ಆಶೀರ್ವಾದ ಬೇಕು. ಮೊದಿಯವರು ಪದೇ ಪದೇ ತಮ್ಮ ಎದೆ ತೋರಿಸಿ ವಿಶಾಲವಾದ ಎದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಜನಪರ, ಬಡವರ ಪರ ಪ್ರೀತಿ ಇಲ್ಲ. ಕೇವಲ ಪುರಸಭೆಯ ಸದಸ್ಯರಾಗಿದ್ದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಇನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತ ಗೋಣಿ ಮಾಲತೇಶ್‌ ಶಾಸಕನಾಗುವುದರಲ್ಲಿ ತಪ್ಪೇನಿದೆ. ಗೋಣಿ ಮಾಲತೇಶ್‌ ಈ ಮಣ್ಣಿನ ಮನನಾಗಿದ್ದಾನೆ. ನೀವು ಬೂಕನಕೆರೆಯಿಂದ ವಲಸೆ ಬಂದವರಿಗೆ ಅಧಿಕಾರ ಕೊಟ್ಟಿದ್ದೀರಿ. ನಿಮ್ಮ ಊರಿನ ನಿಮ್ಮ ಮನೆಯ ಮಗನಿಗೆ ಆಶೀರ್ವಾದ ಮಾಡಿ ಗೆಲ್ಲಿಸಿ ಎಂದರು.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಿಂದ ತಾಲೂಕು ಹಾಗೂ ಜಿಲ್ಲೆಯಲ್ಲಿ ಹಲವು ದಿನದಿಂದ ನೆನೆಗುದಿಗೆ ಬಿದ್ದಿದ್ದ ರೈತರ ಬಗರ್‌ಹುಕುಂ ಮತ್ತು ಅನೇಕ ಸಮಸ್ಯೆಗಳನ್ನು ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದರು  ಕಾಂಗ್ರೆಸ್‌ ಅಭ್ಯರ್ಥಿ ಗೋಣಿ ಮಾಲತೇಶ್‌ ಮಾತನಾಡಿ, ನೀವು ನನನ್ನು ಗೆಲ್ಲಿಸಿದರೆ ನನ್ನ ದೇಹದಲ್ಲಿ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುವೆ ಎಂದರು.

 ವಿ.ಪ. ಸದಸ್ಯ ಆರ್‌. ಪ್ರಸನ್ನ ಕುಮಾರ್‌, ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ, ಪಶ್ಚಿಮ ಘಟ್ಟ ನಿಗಮದ ಚಂದ್ರಶೇಖರ, ಮಾಜಿ ಎಂ.ಎಲ್‌.ಸಿ. ಶಾಂತವೀರಪ್ಪ ಗೌಡ, ಬಿ.ಎನ್‌. ಮಹಾಲಿಂಗಪ್ಪ, ಯುವ ಘಟಕದ ಮಯೂರ್‌ ದರ್ಶನ್‌, ಮಹೇಶ್‌ ಹುಲ್ಮಾರ್‌, ನರಸಿಂಗ ನಾಯ್ಕ, ಪಾರಿವಾಳದ ಶಿವರಾಂ, ಎಸ್‌.ಎಂ. ರಮೇಶ್‌ ಮತ್ತಿತರರು ಇದ್ದರು. ಈ ಸಂದರ್ಭದಲ್ಲಿ ಮಾಜಿ ಎಂ.ಎಲ್‌.ಸಿ. ಶಾಂತವೀರಪ್ಪ ಗೌಡ, ಬಿ.ಎನ್‌. ಮಹಾಲಿಂಗಪ್ಪ ಮತ್ತು ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.