ಬಂಡಾಯ ಲಾಭದ ಗೆಲುವಿನ ಲೆಕ್ಕಾಚಾರ 


Team Udayavani, May 6, 2018, 6:25 AM IST

Belgaum-rural-assembly-cons.jpg

ಪುರುಷ ಪ್ರಧಾನ ಕ್ಷೇತ್ರದಲ್ಲಿ ಮಹಿಳೆಯ ಫೈಟ್‌. ಅದೂ ಅಂತಿಂಥ ಫೈಟ್‌ ಅಲ್ಲ. ಕುತೂಹಲ ಕೆರಳಿಸುವ ಸೆಣಸಾಟ. ಇದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಈ ಬಾರಿಯ ವಿಶೇಷ.

ರಾಜ್ಯದ ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಇದೂ ಸಹ ಪ್ರಮುಖವಾದದ್ದು. ಇಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಪೈಪೋಟಿ ಒಂದು ಕಡೆಯಾದರೆ ಇನ್ನೊಂದು ಕಡೆ ಸ್ವತಃ ಕಾಂಗ್ರೆಸ್‌ನ ಒಂದು ಗುಂಪು ಹೆಬ್ಟಾಳಕರ ಅವರನ್ನು ಸೋಲಿಸಲು ತಂತ್ರ ಹೂಡಿದೆ. ಇದೇ ಕಾರಣದಿಂದ ಇದು ಈ ಬಾರಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಎಲ್ಲಕ್ಕಿಂತ ಈ ಕ್ಷೇತ್ರದಲ್ಲಿ ಹೆಚ್ಚು ಸುದ್ದಿ ಮಾಡಿದ್ದು ಕಾಣಿಕೆಗಳ ಭರಾಟೆ. ಕಳೆದ ಒಂದು ವರ್ಷದಿಂದ ಮತದಾರರಿಗೆ ಕಾಣಿಕೆಗಳ ವಿತರಣೆ ನಡೆದೇ ಇದೆ. ಟೀ ಶರ್ಟ್‌, ಸೀರೆಯಿಂದ ಆರಂಭವಾದ ಕಾಣಿಕೆ ಸಂಸ್ಕೃತಿ ಕೊನೆಗೆ ಗ್ಯಾಸ್‌ಸ್ಟೌವ್‌ವರೆಗೆ ಬಂದಿತು. 

ಬಿಜೆಪಿ ಹಾಗೂ ಜೆಡಿಎಸ್‌ಗೆ ನೇರವಾಗಿ ಸೆಡ್ಡು ಹೊಡೆದಿರುವ ಕಾಂಗ್ರೆಸ್‌ ಅಭ್ಯರ್ಥಿ ಹೆಬ್ಟಾಳಕರ ಈ ಕ್ಷೇತ್ರದ ಸ್ಟಾರ್‌ ಅಭ್ಯರ್ಥಿ. ಇವರಿಗೆ ಬಿಜೆಪಿಯಿಂದ ಹಾಲಿ ಶಾಸಕ ಸಂಜಯ ಪಾಟೀಲ ಹಾಗೂ ಜೆಡಿಎಸ್‌ನಿಂದ ಶಿವನಗೌಡ ಪಾಟೀಲ ಪ್ರತಿಸ್ಪರ್ಧಿಗಳು. ಕಳೆದ ಚುನಾವಣೆಯ ಕಾದಾಟವೇ ಮತ್ತೆ ಮರುಕಳಿಸಿದ್ದು, ಜೆಡಿಎಸ್‌ ಇದಕ್ಕೆ ಸೇರ್ಪಡೆಯಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌,ಬಿಜೆಪಿ, ಜೆಡಿಎಸ್‌ ಹಾಗೂ ಎಂಇಎಸ್‌ ಮಧ್ಯೆ ಪೈಪೋಟಿಯಿದೆ. ಶಾಸಕರಾಗಲು ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಲಕ್ಷ್ಮೀ ಹೆಬ್ಟಾಳಕರ ಕಳೆದ ಐದು ವರ್ಷಗಳಿಂದ ಇದಕ್ಕಾಗಿ ನಿರಂತರ ತಾಲೀಮು ನಡೆಸಿದ್ದಾರೆ. ಅಧಿಕಾರ ಇರದಿದ್ದರೂ ಸರಕಾರದಲ್ಲಿ ತಮ್ಮ ಪ್ರಭಾವ ಬಳಸಿ ಅನೇಕ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿರುವುದು ಅವರ ಸಾಮರ್ಥ್ಯಕ್ಕೆ ಸಾಕ್ಷಿ.

ಲಕ್ಷ್ಮೀ ಹೆಬ್ಟಾಳಕರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದವರ ಕುತಂತ್ರದಿಂದ ಗೆಲ್ಲುವ ಅವಕಾಶ ಕಳೆದುಕೊಂಡರು. ಬಂಡಾಯ ಕಾಂಗ್ರೆಸ್‌ ಅಭ್ಯರ್ಥಿಯಿಂದ ಹೆಬ್ಟಾಳಕರ ಸೋತರು. ನಂತರ ನಡೆದ ಲೋಕಸಭೆ ಚುನಾವಣೆಯಲ್ಲೂ ಅವರಿಗೆ ಅದೃಷ್ಟ
ಒಲಿಯಲಿಲ್ಲ. ಈಗ ಮತ್ತೆ ತಮ್ಮ ಪ್ರತಿಷ್ಠೆ ಹಾಗೂ ಸಾಮರ್ಥ್ಯ ಪಣಕ್ಕಿಟ್ಟಿದ್ದಾರೆ.

ಇಬ್ಬರ ಜಗಳ ಮೂರನೆಯವರಿಗೆ ಲಾಭ ಎನ್ನುವಂತೆ ಕಳೆದ ಬಾರಿ ಸಾಕಷ್ಟು ಆತಂಕ ಎದುರಿಸಿ ಕೊನೆಗೆ ಜಯಗಳಿಸುವಲ್ಲಿ
ಯಶಸ್ವಿಯಾದ ಸಂಜಯ ಪಾಟೀಲ ಈಗ ಮತ್ತೆ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕಳೆದ ಸಲದಂತೆ ಕಾಂಗ್ರೆಸ್‌ನ ಒಳಜಗಳದ ಲಾಭ ತಮಗೆ ವರವಾಗಬಹುದು ಎಂಬ ವಿಶ್ವಾಸದಲ್ಲಿದ್ದಾರೆ. ಚುನಾವಣೆಗೆ ಮೊದಲು ಕಾಂಗ್ರೆಸ್‌ನಲ್ಲಿದ್ದ ಶಿವನಗೌಡ ಪಾಟೀಲ ಅವರು ಅಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂಬುದು ಖಾತ್ರಿಯಾದ ನಂತರ ಜೆಡಿಎಸ್‌ಗೆ ಜಿಗಿದರು. ಸತೀಶ ಜಾರಕಿಹೊಳಿಗೆ ಆಪ್ತರಾಗಿರುವುದರಿಂದ ಅವರೇ ಜೆಡಿಎಸ್‌ ಟಿಕೆಟ್‌ ಕೊಡಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ತಾವು ಗೆಲ್ಲಲಾಗದಿದ್ದರೂ ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸುವುದು ಇವರ ಮುಖ್ಯ ಗುರಿ.

ನಿರ್ಣಾಯಕ ಅಂಶವೇನು? ಬೆಳಗಾವಿ ಗ್ರಾಮೀಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸಲೇಬೇಕೆಂಬ ರಾಜಕೀಯದ ಆಟ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಭಾಷಿಕ ಅಭ್ಯರ್ಥಿಗಳನ್ನು ನಿಲ್ಲಿಸಿ ಕಾಂಗ್ರೆಸ್‌ ಪರವಾಗಿರುವ ಮರಾಠಿ ಭಾಷಿಕ ಮತಗಳನ್ನು ಸೆಳೆಯುವುದು ಈ ರಾಜಕೀಯ ಲೆಕ್ಕಾಚಾರದ ಒಂದು ಭಾಗ. ಇದು ತಮಗೆ ಟರ್ನಿಂಗ್‌ ಪಾಯಿಂಟ್‌ ಆಗಬಹುದು ಎಂಬುದು ಬಿಜೆಪಿ ಹಾಗೂ ಎಂಇಎಸ್‌ ಲೆಕ್ಕಾಚಾರ. ಆದರೆ ಈ ಲೆಕ್ಕಾಚಾರ ಬುಡಮೇಲು ಮಾಡಲು ಕಾಂಗ್ರೆಸ್‌ ಅಭ್ಯರ್ಥಿ ತಮ್ಮದೇ ಆದ ತಂತ್ರಗಾರಿಕೆ ಹೆಣೆಸಿದ್ದಾರೆ ಎಂಬುದು ಅವರ ಬೆಂಬಲಿಗರ ವಿಶ್ವಾಸ. ಇದೇ ವೇಳೆ ಎಂಇಎಸ್‌ನಲ್ಲಿ ಭಿನ್ನಮತ ಬಂದಿರುವುದರಿಂದ ಅದರ ಅನುಕೂಲ ತಮಗೆ ಆಗಲಿದೆ ಎಂಬುದು ಹೆಬ್ಟಾಳಕರ ನಂಬಿಕೆ.

ನನ್ನ ಕ್ಷೇತ್ರದಿಂದ ಕೊರತೆ ಇದೆ ಎಂಬ ಮಾತು ಬರಬಾರದು. ಸಮಗ್ರ ಅಭಿವೃದಿಟಛಿ ಮಾಡಬೇಕು ಎಂಬುದು ನನ್ನ ಮೊದಲ ಗುರಿ. ಅಧಿಕಾರ ಇಲ್ಲದಿದ್ದರೂ ಸರಕಾರದಿಂದ ಕೆರೆ ತುಂಬಿಸುವುದು ಸೇರಿ ಅನೇಕ ಯೋಜನೆಗಳನ್ನು ತಂದಿದ್ದೇನೆ.
– ಲಕ್ಷ್ಮೀ ಹೆಬ್ಟಾಳಕರ ಕಾಂಗ್ರೆಸ್‌ ಅಭ್ಯರ್ಥಿ

ಐದು ವರ್ಷಗಳಲ್ಲಿ ನಾನು ಮಾಡಿದ ಕೆಲಸಗಳನ್ನು ಜನರು ನೋಡಿದ್ದಾರೆ.ಹೀಗಾಗಿ ಈ ಬಾರಿಯೂ ನನ್ನ ಗೆಲುವಿಗೆ ಯಾವುದೇ ಸಮಸ್ಯೆಯಿಲ್ಲ. ನಮ್ಮ ಸರ್ಕಾರ ಇರದ ಕಾರಣ ಸಾಕಷ್ಟು ಅನುದಾನ ಮಂಜೂರು ಆಗಲಿಲ್ಲ. ಈ ನಿರಾಸೆ ನನಗಿದೆ.
– ಸಂಜಯ ಪಾಟೀಲ ಬಿಜೆಪಿ ಅಭ್ಯರ್ಥಿ

ಜಯದ ವಿಶ್ವಾಸ ಇದೆ.ಈಗಾಗಲೇ ಒಂದು ಹಂತದ ಪ್ರಚಾರ ಮುಗಿಸಿದ್ದೇನೆ. ಜನರೂ ಬದಲಾವಣೆ ಬಯಸಿದ್ದಾರೆ. ಇದರ ಜತೆಗೆ ಬಿಎಸ್‌ಪಿ ಬೆಂಬಲ ಸಹ ಸಿಕ್ಕಿರುವುದು ಇನ್ನಷ್ಟು ಶಕ್ತಿ ನೀಡಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಸೋಲಿಸುವುದು ನನ್ನ ಮುಖ್ಯ ಗುರಿ.
– ಶಿವನಗೌಡ ಪಾಟೀಲ ಜೆಡಿಎಸ್‌ ಅಭ್ಯರ್ಥಿ

– ಕೇಶವ ಆದಿ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.