ಇನ್ನೂ ಸಿಗದ ಯೋಧನ ಸುಳಿವು
Team Udayavani, May 6, 2018, 11:13 AM IST
ಶಿರಸಿ: ಚುನಾವಣಾ ಕರ್ತವ್ಯದಲ್ಲಿದ್ದ ಅರೆಸೇನಾ ಪಡೆಯ ಯೋಧನ ಪತ್ತೆಗೆ ಕರ್ನಾಟಕ ಪೊಲೀಸರು ತೀವ್ರ ಹುಡುಕಾಟ ನಡೆಸಿದರೂ ಶನಿವಾರ ರಾತ್ರಿ ತನಕ ಯೋಧನ ಕುರಿತು ಯಾವುದೇ ಸುಳಿವು ಲಭ್ಯವಾಗಿಲ್ಲ. ಈ ವಿಷಯ ದೃಢಪಡಿಸಿದ ಪೊಲೀಸ್ ಉಪಾಧೀಕ್ಷಕರು, ಯೋಧ ಬಳಸಿದ್ದಾನೆ ಎನ್ನಲಾದ ಬೂಟು ಹಾಗೂ ಸಾಕ್ಸ್ ಸಿಕ್ಕಿದ್ದು ಬಿಟ್ಟರೆ ಇನ್ನಾವುದೇ ಸುಳಿವು ಲಭ್ಯವಾಗಲಿಲ್ಲ.
ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ಕ್ಷಣಾರ್ಧದಲ್ಲಿ ನಾಪತ್ತೆಯಾದ ಕುರಿತು ಬನವಾಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯೋಧನ ಹುಡುಕಾಟಕ್ಕೆ ಶ್ವಾನದಳವನ್ನು ಶನಿವಾರ ಕರೆಸಿದರೂ ಪ್ರಯೋಜನವಾಗಲಿಲ್ಲವೆಂದು ತಿಳಿಸಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಿರಸಿ ತಾಲೂಕಿನ ದಾಸನಕೊಪ್ಪ ತಪಾಸಣಾ ಚೌಕಿಯಲ್ಲಿ ಉತ್ತರ ಪ್ರದೇಶದ 49ನೇ ಬೆಟಾಲಿಯನ್ ಕಾನ್ಸ್ಟೇಬಲ್ ಕೆ.ಗಣೇಶ ಕಾಣೆಯಾಗಿದ್ದಾನೆ. ಈತ ರೈಫಲ್ ಸಹಿತ ಸೇನಾ ಪಡೆಯ ಸಮವಸ್ತ್ರದಲ್ಲಿ ನಾಪತ್ತೆ ಆಗಿದ್ದು, ಈತ ಸ್ವಗ್ರಾಮ ತಲುಪಿದ ಕುರಿತೂ ಯಾವುದೇ ಸಂದೇಶ ಸಿಕ್ಕಿಲ್ಲ ಎನ್ನಲಾಗಿದೆ. ಅರೆಸೇನಾ ಪಡೆಯ ವಿಂಗ್ ಕಮಾಂಡರ್ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ