ಮುಧೋಳ ನಾಯಿ ನೋಡಿ ದೇಶಭಕ್ತಿ ತಿಳ್ಕೊಳ್ಳಿ


Team Udayavani, May 7, 2018, 6:15 AM IST

180506kpn52f.jpg

ಜಮಖಂಡಿ (ಬನಹಟ್ಟಿ): “ಕಾಂಗ್ರೆಸ್‌ನವರಿಗೆ ನಮ್ಮ ದೇಶಭಕ್ತಿಯಲ್ಲೂ ಕೆಟ್ಟ ವಾಸನೆ ಬರುತ್ತಿದೆ. ದೇಶದ ಗಡಿಯಲ್ಲಿ ಸರ್ಜಿಕಲ್‌ ಸ್ಟ್ರೈಕ್‌ ಮಾಡಿದರೆ ಸೈನಿಕರ ಕಡೆ ಸಾಕ್ಷಿ ಕೇಳುವ ಹಂತಕ್ಕೆ ಬಂದಿದ್ದಾರೆ. ದೇಶಭಕ್ತಿ ಬಗ್ಗೆ ಕಾಂಗ್ರೆಸ್ಸಿಗರು ಮಹಾತ್ಮ ಗಾಂಧೀಜಿಯವರ ಜೀವನಚರಿತ್ರೆ ಓದಿ ತಿಳಿದುಕೊಳ್ಳಿ. ಇಲ್ಲದಿದ್ದರೆ ಮುಧೋಳ ನಾಯಿ ನೋಡಿಯಾದರೂ ತಿಳಿದುಕೊಳ್ಳಿ’ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್‌ನವರಿಗೆ ದೇಶಭಕ್ತಿಯ ಟಾಂಗ್‌ ನೀಡಿದರು.

ಜಮಖಂಡಿ ಹೊರವಲಯದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿ, “ಕಾಂಗ್ರೆಸ್‌ನವರು ಇಷ್ಟು ವರ್ಷ ಅಧಿಕಾರ ಅನುಭವಿಸಿ ಆಗಸ (ಆಕಾಶ) ತಲುಪಿದ್ದಾರೆ. ಅವರಿಗೆ ನಮ್ಮ ದೇಶಭಕ್ತಿಯಲ್ಲೂ ಕೆಟ್ಟ ವಾಸನೆ ಬರುತ್ತಿದೆ. ಇಲ್ಲಿನ ಮುಧೋಳದ ನಾಯಿಗಳು ದೇಶದ ಸೇನೆಯಲ್ಲಿ ಕೆಲಸ ಮಾಡುತ್ತಿವೆ. ಮುಧೋಳ ನಾಯಿ ನೋಡಿಯೂ ಅವರು ಕೆಳಗೆ ಬರುವ ವಿಶ್ವಾಸವಿಲ್ಲ’ ಎಂದು ಕುಟುಕಿದರು.

ಕಬ್ಬು ಬೆಳೆಗಾರರಿಗೆ ಸಹಾಯಧನ: ಈ ಭಾಗದಲ್ಲಿ ಕಬ್ಬು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಸೂಕ್ತ ನೀರಾವರಿ ಸೌಲಭ್ಯ ಕಲ್ಪಿಸುವುದರ ಜತೆಗೆ ಪ್ರತಿ ಕ್ವಿಂಟಲ್‌ ಕಬ್ಬಿಗೆ 5.50 ರೂ. ಸಹಾಯಧನ ನೀಡುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ರೈತರ ಖಾತೆಗೆ ನೇರವಾಗಿ ಈ ಸಹಾಯಧನ ಜಮೆಯಾಗಲಿದೆ. ಈ ಭಾಗದ ರೈತರಿಗೆ ಅನುಕೂಲವಾಗಲಿ ಎಂದು ನೀರಾವರಿ ಯೋಜನೆ 
ತರಲಾಗಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಅದನ್ನು ಬೇರೆಡೆ ಸಾಗಿಸಿದೆ. ಕಬ್ಬು ಬೆಳೆಗಾರರ ಮೇಲೆ ಸಿದ್ದರಾಮಯ್ಯಗೆ ಯಾವ ಜನ್ಮದ ದ್ವೇಷವಿದೆಯೋ ಗೊತ್ತಿಲ್ಲ ಎಂದರು.

ದಲಿತ ರಾಷ್ಟ್ರಪತಿಯನ್ನೂ ಅಭಿನಂದಿಸಿಲ್ಲ: 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಾಗ, ತಾಯಿ- ಮಗ (ಸೋನಿಯಾ, ರಾಹುಲ್‌) ಬಿಜೆಪಿ ಪ್ರಮಾಣ ವಚನ ನೋಡುವ ಮನಸ್ಸು ಮಾಡಲಿಲ್ಲ. ಕಾಂಗ್ರೆಸ್‌ನವರು ನಾಮದಾರ, ನಾನು ಕಾಮದಾರ. ನನ್ನಂತವರಿಗೆ ಅಭಿನಂದನೆಸಲ್ಲಿಸದ ಬಗ್ಗೆ ನಾನು ಅರ್ಥ ಮಾಡಿಕೊಂಡೆ. ಕಾಂಗ್ರೆಸ್‌ನವರ ಅಹಂಕಾರ ಮುಗಿಲು ಮುಟ್ಟಿದೆ. ದಲಿತ ಸಮುದಾಯದ ವ್ಯಕ್ತಿ ರಾಷ್ಟ್ರಪತಿಯಾದರು. ಒಂದು ವರ್ಷವಾದರೂ ಮೇಡ್‌ಂ ಸೋನಿಯಾ ಗಾಂಧಿ ದಲಿತ ರಾಷ್ಟ್ರಪತಿಯನ್ನು ಅಭಿನಂದಿಸಲಿಲ್ಲ. ಅದಕ್ಕೆ ಅವರಿಗೆ ಸಮಯವೂ ಸಿಗಲಿಲ್ಲ. ಸೋನಿಯಾ ಮಗ ರಾಹುಲ್‌ ಬೇಬಿ, ರಾಷ್ಟ್ರಪತಿ ಭವನಕ್ಕೆ ಕೇವಲ ಮನವಿ ಹಿಡಿದುಕೊಂಡು ಹೋದರು. ಇವರ ದಲಿತಪರ ಕಾಳಜಿ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಬಸವಣ್ಣನ ತತ್ವ ಪಾಲಿಸಿ: ನನ್ನ ಮಾತನ್ನು ಕೇಳುವುದು ಬಿಡಿ. ಜೈ ಭಾರತ ಜನನಿಯ ತನುಜಾತೆ ಎಂಬ ಮಾತನ್ನಾದರೂ ಕೇಳಿ. ಕರ್ನಾಟಕ ಯಾವುತ್ತೂ ವಿಭಜಕ (ಒಡೆಯುವ) ರಾಜಕಾರಣ ಒಪ್ಪುವುದಿಲ್ಲ. ಮೇ 12ರಂದು ಜನತೆ ಕಾಂಗ್ರೆಸ್‌ನವರಿಗೆ ಬುದ್ಧಿ 
ಕಲಿಸುತ್ತಾರೆ. ಈ ನೆಲದ ಬಸವಣ್ಣನವರ ಬಗ್ಗೆ ಅವರು ಮಾತನಾಡುತ್ತಾರೆ. ಆದರೆ, ಅವರ ತತ್ವವನ್ನು ಮರೆತಿದ್ದಾರೆ. ಕಾಂಗ್ರೆಸ್‌ನವರಿಗೆ ನುಡಿದಂತೆ ನಡೆ ಎಂಬ ಎರಡು ಶಬ್ದಗಳು ಮಾತ್ರ ಗೊತ್ತಿವೆ. ಕಳೆದ ಐವತ್ತು ವರ್ಷದಲ್ಲಿ ಇವರಿಗೆ ಬಸವಣ್ಣ ನೆನಪಾಗಲಿಲ್ಲ. ಈಗ ಮಾತನಾಡುತ್ತಿದ್ದಾರೆ. ನಾವು ಲಂಡನ್‌ನ ಥೇಮ್ಸ್‌ ನದಿ ದಡದಲ್ಲಿ ಬಸವಣ್ಣನ ಪುತ್ಥಳಿ ನಿರ್ಮಾಣ ಮಾಡಿದೆವು. ಈ ಬಾರಿಯೂ ನಾನು ಬಸವಣ್ಣನವರ ಜಯಂತಿಗೆ ಲಂಡನ್‌ಗೆ ಹೋಗಿದ್ದೆ ಎಂದು ಪರೋಕ್ಷವಾಗಿ ರಾಹುಲ್‌ ಗಾಂಧಿ ವಿರುದ್ಧ ಕಿಡಿ ಕಾರಿದರು.

ಚಿತ್ರದುರ್ಗದಲ್ಲಿ ಶ್ರೀರಾಮುಲು ಭೇಟಿಯಾಗಿದ್ದರು. ಬಾಗಲಕೋಟೆಯಲ್ಲಿ ಸಿಎಂ ಸೋಲು ಖಚಿತ ಎಂದರು. ಬಾಗಲಕೋಟೆಯ ಮಣ್ಣು ಬಲಿದಾನದ ಮಣ್ಣು. ಇಲ್ಲಿಯ ಬೇಡರು, ಇಂಗ್ಲಿಷರ ವಿರುದ್ಧ ಹೋರಾಡಿದ್ದರು. ರಾಷ್ಟ್ರಕ್ಕಾಗಿ ಹೇಗೆ ನಮ್ಮನ್ನು ಸಮರ್ಪಿಸಬಹುದು ಎಂಬುದಕ್ಕೆ ಹಲಗಲಿ ಬೇಡರು ಸಾಕ್ಷಿಯಾಗಿದ್ದಾರೆ. ಇಂದು ಸೇರಿದ ಅಪಾರ ಜನಸ್ತೋಮ ನೋಡಿ ಸಿದ್ದರಾಮಯ್ಯಗೆ ರಾತ್ರಿ ನಿದ್ದೆಯೇ
ಬರೋದಿಲ್ಲ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.