ಕರೆಮ್ಮ ಗೆಲುವಿಗೆ ಉಡಿ ತುಂಬಿ ಹಾರೈಕೆ


Team Udayavani, May 7, 2018, 12:49 PM IST

ray-1.jpg

ದೇವದುರ್ಗ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸಿದ ಘಟಾನುಘಟಿಗಳಿಗೆ ಪಕ್ಷೇತರ ಅಭ್ಯರ್ಥಿ ಕರೆಮ್ಮ ಜಿ. ಗೋಪಾಲಕೃಷ್ಣ ನಾಯಕ ತೀವ್ರ ಪೈಪೋಟಿ ನೀಡುವ ಲಕ್ಷಣಗಳು ಗೋಚರಿಸುತ್ತಿವೆ.

ಕರೆಮ್ಮ ಅವರು ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಮತಯಾಚನೆಗೆ ಹೋದಾಗ ಗ್ರಾಮಸ್ಥರು, ಮಹಿಳೆಯರು ಸ್ವಾಗತಿಸಿ ಬೆಂಬಲ ಸೂಚಿಸುತ್ತಿದ್ದಾರೆ. ಮಹಿಳೆಯರು ಕರೆಮ್ಮ ಅವರಿಗೆ ಉಡಿ ತುಂಬಿ ಚುನಾವಣಾ ವೆಚ್ಚಕ್ಕೆ ಹಣ ನೀಡಿ ಗೆಲುವಿಗೆ ಹಾರೈಸಿ ಕಳುಹಿಸುತ್ತಿದ್ದು, ನಿಮ್ಮ ಬೆನ್ನಿಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬುತ್ತಿದ್ದಾರೆ.
 
ಮೊದಲು ಜೆಡಿಎಸ್‌ ಟಿಕೆಟ್‌ ನೀಡುವುದಾಗಿ ಹೇಳಿದ್ದರಿಂದ ಕರೆಮ್ಮ ಅವರು ಕ್ಷೇತ್ರದಾದ್ಯಂತ ಸಂಚರಿಸಿ ಪಕ್ಷ ಸಂಘಟಿಸಿದ್ದರು. ಆದರೆ ಜೆಡಿಎಸ್‌ ಚುನಾವಣೆ ಸಮಯದಲ್ಲಿ ಕೈಕೊಟ್ಟಿದ್ದರಿಂದ ಕರೆಮ್ಮ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಜೆಡಿಎಸ್‌ ಟಿಕೆಟ್‌ ಕೊಡದೇ ವಂಚಿಸಿರುವುದು ಮತ್ತು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮೂರೂ ಪಕ್ಷಗಳು ಒಂದೇ ಕುಟುಂಬದವರಿಗೆ ಮಣೆ ಹಾಕಿರುವುದು ಈ ಬಾರಿ ಕ್ಷೇತ್ರದಲ್ಲಿ ಕರೆಮ್ಮ ಅವರ ಪರ ಅಲೆ ಏಳಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಹಿರೇಬೂದೂರು, ಮಸರಕಲ್‌, ಮಶಿಹಾಳ, ಗಲಗ, ಗಾಣಧಾಳ, ಗಣಿಜಿಲಿ, ಪಿಲಿಗುಂಡ, ಕರಿಗುಡ್ಡ, ಸೋಮನಮರಡಿ, ಕಕ್ಕಲದೊಡ್ಡಿ ಸೇರಿ ಇತರೆ ಗ್ರಾಮಗಳಲ್ಲಿ ಮತದಾರರು ಸ್ವಯಂ ಪ್ರೇರಿತವಾಗಿ ಕರೆಮ್ಮ ಅವರಿಗೆ ಉಡಿ ತುಂಬಿ ಚುನಾವಣಾ ಖರ್ಚಿಗೆ ಸಾವಿರಾರು ರೂ. ದೇಣಿಗೆ ನೀಡುತ್ತಿದ್ದು, ಇದು ದೇವದುರ್ಗ ರಾಜಕೀಯ ಇತಿಹಾಸದಲ್ಲೇ ಪ್ರಥಮವಾಗಿದೆ ಎಂಬುದು ಸಾರ್ವಜನಿಕರ ಅಂಬೋಣವಾಗಿದೆ.

ಪುತ್ರ-ಪುತ್ರಿ ಸಾಥ್‌: ಕರೆಮ್ಮ ಜಿ. ಗೋಪಾಲಕೃಷ್ಣ ಅವರ ಮತಯಾಚನೆಗೆ ಪುತ್ರ, ಪುತ್ರಿ ಸಾಥ್‌ ನೀಡುತ್ತಿದ್ದಾರೆ. ಕರೆಮ್ಮ ಅವರು ಹೋದಲ್ಲೆಲ್ಲ ಮಕ್ಕಳ ಮೇಲೆ ಪ್ರಮಾಣ ಮಾಡಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹೇಳುತ್ತಿದ್ದಾರೆ. 

ಇದು ಸ್ಪರ್ಧಾ ಕಣದಲ್ಲಿರುವ ಕಾಂಗ್ರೆಸ್‌ನ ಎ. ರಾಜಶೇಖರ ನಾಯಕ, ಬಿಜೆಪಿಯ ಶಾಸಕ ಕೆ. ಶಿವನಗೌಡ ನಾಯಕ, ಜೆಡಿಎಸ್‌ನ ವೆಂಕಟೇಶ ಪೂಜಾರಿ ಅವರ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ಕೂಡಾ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಗೆಲುವಿಗಾಗಿ ಪ್ರಯತ್ನ ನಡೆಸಿದ್ದಾರೆ. ಮತದಾನಕ್ಕೆ ಇನ್ನೂ ಆರು ದಿನ ಬಾಕಿ ಇದ್ದು ಮತದಾರರ ಒಲವು ಯಾರತ್ತ ಹೊರಳಲಿದೆ ಎಂದು ಕಾದು ನೋಡಬೇಕಿ¨

„ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.