ಕಾವೇರಿ ನದಿಗೆ ಮತ್ತೊಂದು ಹೊಸ ಸೇತುವೆ


Team Udayavani, May 7, 2018, 2:50 PM IST

m4-kaveri.jpg

ಬನ್ನೂರು: ನನ್ನ ಐದು ವರ್ಷದ ಅವಧಿಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಗ್ರ ಅಭವೃದ್ಧಿ ಮಾಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಪಟ್ಟಣದ ಸಮೀಪದ ಯಾಚೇನಹಳ್ಳಿಯಲ್ಲಿ ಮತಪ್ರಚಾರ ಮಾಡಿದರು.

ಯಾರೂ ನನಗೆ ಹೇಳದೆ ಇದ್ದರೂ, ಎಂ.ಎಂ.ರಸ್ತೆಯನ್ನು ರಾಷ್ಟ್ರೀಯ ರಸ್ತೆಯಾಗಿ ಮಾಡಿದೆ. ಕಾವೇರಿ ನದಿಗೆ ಮತ್ತೊಂದು ಹೊಸ ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದೆ. ಬನ್ನೂರು ಹೆಗ್ಗೆರೆಯನ್ನು ಮಾದರಿ ಕೆರೆಯಾಗಿ ಪರಿವರ್ತಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ರೈತರ ಬವಣೆ ಅರಿತು ಕಾಲುವೆಗಳನ್ನು ಮೇಲ್ದರ್ಜೆಗೇರಿಸಿ ವ್ಯವಸಾಯಕ್ಕೆ ಅನುಕೂಲ ಕಲ್ಪಸಿಕೊಡಲಾಗಿದೆ ಎಂದು ಹೇಳಿದರು. 

ಅಭಿವೃದ್ಧಿ ಹಿನ್ನೆಡೆ: ಬಿಜೆಪಿ ಪಕ್ಷ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾರಣ ಅವರ ಅಧಿಕಾರದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ 20 ವರ್ಷ ಹಿಂದೆ ಸರಿದಿದೆ. ಹಾಗೆಯೇ ಜೆಡಿಎಸ್‌ ಕೂಡ ಈ ಬಾರಿ ಬಹುಮತ ಪಡೆಯುವುದಿಲ್ಲ. ಕಳೆದ ಬಾರಿ 40 ಶಾಸಕರಿದ್ದು, ಈ ಬಾರಿ 12 ಜನ ಬಿಟ್ಟು 28 ಜನರಿದ್ದಾರೆ. ಅದರಲ್ಲೂ ಅವರೆಲ್ಲರೂ ಈ ಬಾರಿ ಗೆಲುವು ಪಡೆಯುತ್ತಾರೆ ಎನ್ನುವಂತ ಸಂಶಯವಿದೆ ಎಂದರು. 

ಒಗ್ಗಟ್ಟಿನಿಂದ ಕೆಲಸ ಮಾಡಿ: ನಾವೆಲ್ಲರೂ ರಾಜಕೀಯವಾಗಿ ಯೋಚನೆ ಮಾಡಬೇಕು. ಇಲ್ಲಿ ಜಾತಿ, ಧರ್ಮ ಮುಖ್ಯ ಅಲ್ಲ. ಅಭಿವೃದ್ಧಿ ಮುಖ್ಯ. ಎಲ್ಲ ಧರ್ಮೀಯರು ಶಾಂತಿಯುತವಾಗಿ ಬದುಕುವುದು ಮುಖ್ಯ. ಈಗ ಮಾತನಾಡುವ ಜೆಡಿಎಸ್‌ ಮತ್ತು ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಯಾವುದೆ ಅಭಿವೃದ್ಧಿಯನ್ನು ಮಾಡಿಲ್ಲ. ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಅಭಿವೃದ್ಧಿಯೇ ಗುರಿ ಎಂದು ತಿಳಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ, ಮತ್ತೂಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಮನವಿ ಮಾಡಿದರು.

ಪ್ರಚಾರ ಸಮಿತಿ ಅಧ್ಯಕ್ಷ ವೈ.ಎನ್‌.ಶಂಕರೇಗೌಡ ಮಾತನಾಡಿ, ಪ್ರತಿ ಗ್ರಾಮದಲ್ಲಿನ ಸಮಸ್ಯೆ ಅರಿತು ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡಿರುವ ಕೆಲಸವನ್ನು ಯಾರು ಅಲ್ಲಗಳೆಯುವಂತಿಲ್ಲ. ಮಹದೇವಪ್ಪ ಶಾಸಕರಾಗಿ, ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಾಜ್ಯದ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿ ರಾಷ್ಟ್ರಮಟ್ಟದಲ್ಲಿ ಉತ್ತಮ ಲೋಕೋಪಯೋಗಿ ಸಚಿವ ಎಂದು ಹೆಸರು ಮಾಡಿರುವುದು ಅವರ ಉತ್ತಮ ಕೆಲಸಕ್ಕೆ ಸಂದ ಗೌರವ ಎಂದರು.

ಈ ವೇಳೆ ಪುರಸಭಾ ಮಾಜಿ ಅಧ್ಯಕ್ಷ ಪದ್ಮನಾಭ್‌, ಮುನಾವರ ಪಾಷಾ, ಅಜೀಜುಲ್ಲಾ, ಸುನಿಲ್‌ಬೋಸ್‌, ಅನಿಲ್‌ಬೋಸ್‌, ಲಕ್ಷ್ಮೀನಾರಾಯಣ್‌, ಗೋಪಾಲ್‌, ಜಿಪಂ ಸದಸ್ಯ ಮಂಜುನಾಥ, ಚಾಮನಹಳ್ಳಿ ತಿಮ್ಮೇಗೌಡ, ಮಾಜಿ ಶಾಸಕ ಎಸ್‌.ಕೃಷ್ಣಪ್ಪ, ಶ್ರೀನಿವಾಸ್‌, ರವೀಂದ್ರ ಕುಮಾರ್‌, ಸಹಕಾರ ಸಂಘದ ಉಪಾಧ್ಯಕ್ಷ ಕುಚೇಲ, ಪುರಸಭಾ ಸದಸ್ಯ ಮೂರ್ತಿ, ಬಸುರಾಜು,ಲೋಕೇಶ್‌, ವೀಣಾ, ಶಿವಮೂರ್ತಿ, ಬೈರವಮೂರ್ತಿ, ಅಶೋಕ್‌, ಎ.ಎನ್‌.ಸ್ವಾಮಿ, ಡಾ.ಮಹದೇವು, ಪುರಸಭಾ ಉಪಾಧ್ಯಕ್ಷ ರಾಮಲಿಂಗೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.