ಮೂರು ಕ್ಷೇತ್ರಗಳಲ್ಲಿ ಡಿವಿಎಸ್ ಪಾದಯಾತ್ರೆ
Team Udayavani, May 7, 2018, 2:50 PM IST
ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶತಪ್ರಯತ್ನ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮತಬೇಟೆ ಮುಂದುವರಿದಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನಗರದ ಮೂರು ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸುವ ಪಕ್ಷದ ಅಭ್ಯರ್ಥಿಗಳ ಪರವಾಗಿ ಭಾನುವಾರ ಬಿರುಸಿನ ಮತಯಾಚನೆ ನಡೆಸಿದರು.
ಚುನಾವಣೆಗೆ ಕೆಲವು ದಿನಗಳಷ್ಟೇ ಬಾಕಿಯಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರದ ಅಬ್ಬರ ಜೋರಾಗಿದ್ದು, ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರೋಡ್ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದ್ದರು. ಇದರ ಬೆನ್ನಲ್ಲೆ ಡಿ.ವಿ.ಸದಾನಂದಗೌಡ ಹಾಗೂ ಮತ್ತಿತರ ಮುಖಂಡರು, ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಮತಯಾಚಿಸಿದರು.
ನಗರದ ಚಾಮರಾಜ ಕ್ಷೇತ್ರದ ಕೆ.ಜಿ.ಕೊಪ್ಪಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಿದ ಸದಾನಂದಗೌಡ, ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಎಲ್.ನಾಗೇಂದ್ರ ಪರವಾಗಿ ಪ್ರಚಾರ ಮಾಡಿದರು. ಬಳಿಕ ಕೃಷ್ಣರಾಜ ಕ್ಷೇತ್ರದಲ್ಲಿನ ಹಲವು ಬಡಾವಣೆಗಳಿಗೆ ತೆರಳಿದ ಸದಾನಂದಗೌಡ, ಸ್ಥಳೀಯ ಅಭ್ಯರ್ಥಿ ಎಸ್.ಎ.ರಾಮದಾಸ್ ಪರವಾಗಿ ಮತಯಾಚನೆ ನಡೆಸಿದರು.
ಬಳಿಕ ಎನ್.ಆರ್.ಕ್ಷೇತ್ರಕ್ಕೆ ತೆರಳಿ ಕ್ಷೇತ್ರದ ಪ್ರಮುಖ ಬಡಾವಣೆಗಳಲ್ಲಿನ ಮನೆ ಮನೆಗೆ ತೆರಳಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸಂದೇಶ್ ಸ್ವಾಮಿ ಅವರಿಗೆ ಬೆಂಬಲ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂದೇಶ್ಸ್ವಾಮಿ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ಮುಖಂಡರಾದ ಸಿ.ಬಸವೇಗೌಡ, ಯುವ ಮೋರ್ಚಾ ಅಧ್ಯಕ್ಷ ಕಿರಣ್ಗೌಡ ಮತ್ತಿತರರು ಪ್ರಚಾರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ