ಸೋಲಿನ ಭೀತಿಯಿಂದ ಬಿಜೆಪಿ ಪ್ರೇರಿತ ಐಟಿ ದಾಳಿ: ದಿನೇಶ್
Team Udayavani, May 9, 2018, 1:16 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿಯಿಂದ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಉದ್ದೇಶಪೂರ್ವಕವಾಗಿ ಐಟಿ ದಾಳಿ ನಡೆಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ನಡೆಯುತ್ತಿರುವಾಗ ಕಾಂಗ್ರೆಸ್ ಅಭ್ಯರ್ಥಿಗಳಾದ
ಆನೇಕಲ್ ಶಿವಣ್ಣ, ಭೀಮಣ್ಣ ನಾಯ್ಕ ಹಾಗೂ ಸ್ಥಳೀಯ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರು ವಾಸವಿರುವ ವಸತಿ ಗೃಹಗಳ ಮೇಲೆ ದಾಳಿ
ಮಾಡಿ ಕಿರುಕುಳ ನೀಡಿದ್ದಾರೆ ಎಂದು ದೂರಿದರು. ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದು ದೇಶದ ಇತಿಹಾಸದಲ್ಲಿಯೇ ಆದಾಯ ತೆರಿಗೆ ಇಲಾಖೆ ಈ ಮಟ್ಟದಲ್ಲಿ ದುರ್ಬಳಕೆಯಾಗಿರಲಿಲ್ಲ. ಈ ಬಗ್ಗೆ
ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು. ಈ ಹಿಂದೆ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ದಾಳಿ ಮಾಡಿ ಬಿಜೆಪಿ ಸೇರುವಂತೆ ಒತ್ತಡ ಹೇರಿದ್ದಾರೆ. ಈ ಹಿಂದೆ ಇಲಾಖೆಯ ವಿರುದ್ದ ಪ್ರತಿಭಟನೆ ನಡೆಸಿ ದೂರು ನೀಡಿದ್ದೆವು. ಆದರೂ, ಐಟಿ ಇಲಾಖೆ ಬಿಜೆಪಿ ಮೋರ್ಚಾದಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ