ಅಹಂಕಾರಿ ಸಿಎಂ, ಸರ್ಕಾರ
Team Udayavani, May 9, 2018, 6:00 AM IST
ಕೊಪ್ಪಳ/ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಮೂರು ದಿನ ಬಾಕಿ ಉಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾತಿನ ವೈಖರಿ ಚುರುಕುಗೊಳಿಸಿದ್ದು, ಕರ್ನಾಟಕದಲ್ಲಿ ಅಹಂಕಾರದ ಸರ್ಕಾರ ಮತ್ತು ಅಹಂಕಾರಿ ಮುಖ್ಯಮಂತ್ರಿ ಇದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಕೊಪ್ಪಳದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾವು ಕಾಮ್ಧಾರಿಗಳಾಗಿದ್ದರೆ, ಅವರು ನಾಮ್
ಧಾರಿಗಳಾಗಿದ್ದಾರೆ ಎಂದು ಮತ್ತೂಮ್ಮೆ ಟೀಕಿಸಿದರು. ನಾವು ಸಬ್ಕಾ ಸಾಥ್ ಸಬ್ಕಾ ವಿಕಾಸ್ನಂತೆ ನಡೆದರೆ, ಕಾಂಗ್ರೆಸ್ ನವರು ತಮ್ಮ ಕಾರ್ಯ ಸಾಧನೆಗಾಗಿ ದೇಶ, ರಾಜ್ಯ, ಜಾತಿ, ಪಂಥವನ್ನು ಒಡೆಯುತ್ತಾರೆ. ಮನೆತನಗಳನ್ನು ಒಡೆದಿದ್ದಾರೆ. ಅಂತಹ ಕುತಂತ್ರ, ವಿಚಿತ್ರ ಮನಸ್ಸಿನ ಕಾಂಗ್ರೆಸ್ ತೊಲಗಬೇಕಿದೆ ಎಂದರು.
ಸೋಲಿಗೆ ಕಾರಣ ಹುಡುಕುತ್ತಿದೆ: ಅತ್ತ ವಿಜಯಪುರದಲ್ಲಿ ಮಾತನಾಡಿದ ಅವರು, ಕರ್ನಾಟಕದಿಂದ ಕಾಂಗ್ರೆಸ್ ಅನ್ನು
ಕಿತ್ತೂಗೆಯಬೇಕಿದೆ ಎಂದರು. ಅಲ್ಲದೆ ಈಗಾಗಲೇ ಸೋಲಿನ ಅರಿವಾಗಿದ್ದು ಕಾರಣಗಳನ್ನು ಹುಡುಕುತ್ತಿದೆ. ಇದಕ್ಕಾಗಿಯೇ ಇವಿಎಂಗಳ ಮೇಲೆ ಮತ್ತೆ ಆರೋಪ ಮಾಡಲಾಗುತ್ತಿದೆ ಎಂದು ಛೇಡಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರದ ಆರೋಪ ಇಲ್ಲದ ಒಬ್ಬ
ಸಚಿವರ ಹೆಸರು ಹೇಳಿ ಎಂದು ಸಾರ್ವಜನಿಕರನ್ನು ಕೇಳಿದ ಮೋದಿ ಅವರು, ನಿಮ್ಮ ಜಿಲ್ಲೆಯ ನೀರಾವರಿ ಸಚಿವರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅವರು ಯಾರ್ಯಾರಿಗೆ ಗುತ್ತಿಗೆ ನೀಡಿದ್ದಾರೆ, ಯಾರ್ಯಾರ ತಿಜೋರಿಯಲ್ಲಿ ಎಷ್ಟೆಷ್ಟು ಹಣ ಇಟ್ಟಿದ್ದಾರೆ ಎಂದೆಲ್ಲ ನಮಗೆ ಗೊತ್ತು. ಇವರು ಗುತ್ತಿಗೆ ಪಡೆದ ಗುತ್ತಿಗೆದಾರರೆಲ್ಲ ಹೆಲಿಕಾಪ್ಟರ್ನಲ್ಲಿ ಸುತ್ತಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಸಿದ್ದುರನ್ನು ಮನೆಗೆ ಕಳುಹಿಸಿ
ಈ ಮಧ್ಯೆ ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು, ಮೇ 15 ರಂದು ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಿ ಎಂದು ಆಗ್ರಹಿಸಿದರು. ಈ ಮೂಲಕ ಪ್ರಧಾನಿ ಮೋದಿ ಅವರ ಕೈಯನ್ನು ಭದ್ರಗೊಳಿಸಿ ಎಂದರು. ಈ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಹತ್ಯೆಯಾಗುತ್ತಿದ್ದು ಇದುವರೆಗೂ ಯಾರೊಬ್ಬರದ್ದೂ ಬಂಧನವಾ ಗಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಕ್ಕೇರುತ್ತಿ ದ್ದಂತೆ, ತಪ್ಪಿತಸ್ಥ ರನ್ನು ಪತ್ತೆಹಚ್ಚಲಾಗುವುದು ಎಂದು ಭರವಸೆ ನೀಡಿದರು.
24ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿ ದ್ದರೂ ಜಿಹಾದಿ ಶಕ್ತಿಗಳನ್ನು ಮಟ್ಟ ಹಾಕಲು ಸರ್ಕಾರ ಕ್ರಮ ಕೈಗೊಂಡಿಲ್ಲ. ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜಿಹಾದಿ, ಮಾμಯಾ, ಗೂಂಡಾ ಗಿರಿಗಳ ಹುಟ್ಟಡಗಿಸಲಾಗಿದೆ.
● ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು