ರಗಡ್‌ ಪಾತ್ರ ಮಾಡುತ್ತಿರೋದೇ ವಿಶೇಷ


Team Udayavani, May 9, 2018, 9:00 PM IST

Manoranjan.jpg

“ಸಾಹೇಬ’ ಆಯ್ತು, “ಬೃಹಸ್ಪತಿ’ ಆಗೋಯ್ತು. ಮುಂದೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಆ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದ್ದು, ರವಿಚಂದ್ರನ್‌ ಅವರ ಮಗ ಮನೋರಂಜನ್‌ ಈಗ “ಚಿಲ್ಲಂ’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದವರ ಮೂರನೆಯ ಚಿತ್ರವಾಗಿದ್ದು, ಶೀರ್ಷಿಕೆಯೇ ಭಿನ್ನವಾಗಿದೆ. ಇನ್ನು ಕಥೆ ಅದಕ್ಕಿಂತಲೂ ವಿಭಿನ್ನವಂತೆ. ಹಾಗಾಗಿಯೇ ಮನೋರಂಜನ್‌ ಕಥೆ ಒಪ್ಪಿ ಚಿತ್ರ ಮಾಡೋಕೆ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಚಿತ್ರದ ಹೈಲೆಟ್‌ ಏನು, ಪಾತ್ರದ ತಯಾರಿ ಹೇಗಿದೆ, ಯಾವಾಗ ಶುರು ಇತ್ಯಾದಿ ವಿಷಯ ಕುರಿತು ಉದಯವಾಣಿ “ಚಿಟ್‌ಚಾಟ್‌’ನಲ್ಲಿ ಮಾತನಾಡಿದ್ದಾರೆ.

* “ಚಿಲಂ’ ನಿಮ್ಮ ಮೂರನೇ ಚಿತ್ರ, ತಯಾರಿ ಹೇಗಿದೆ?
ಯಾವ ಚಿತ್ರ ಮಾಡಿದರೂ, ಅದು ನನ್ನ ಮೊದಲ ಚಿತ್ರ ಅಂದುಕೊಳ್ಳುತ್ತೇನೆ. ಹಿಂದಿನ ಎರಡು ಚಿತ್ರಗಳಲ್ಲಿ ಸಣ್ಣ ಇದ್ದೆ. ಈ ಚಿತ್ರದ ಕಥೆ ಡಿಫ‌ರೆಂಟ್‌, ಪಾತ್ರವೂ ಸಖತ್‌ ಆಗಿದೆ. ಹಾಗಾಗಿ ನಾನು ಬಾಡಿ ಬಿಲ್ಡ್‌ ಮಾಡುತ್ತಿದ್ದೇನೆ. ದಪ್ಪನೆ ಗಡ್ಡ, ಕೂದಲು ಬಿಡುತ್ತಿದ್ದೇನೆ. ಶೂಟಿಂಗ್‌ ಶುರುವಾಗುವವರೆಗೂ ವಕೌìಟ್‌ ಮಾಡುತ್ತಿರುತ್ತೇನೆ. ಪಕ್ಕಾ ತಯಾರಿಯೊಂದಿಗೇ ಸೆಟ್‌ಗೆ ಹೋಗುತ್ತೇನೆ. 

* ಪಾತ್ರದ ಬಗ್ಗೆ ಹೇಳ್ಳೋದಾದರೆ?
“ಚಿಲಂ’ನಲ್ಲಿ ಡ್ರಗ್‌ ಡೀಲರ್‌ ಪಾತ್ರವಿದೆ. ಅದೊಂದು ರೀತಿಯ ರಗಡ್‌ ಪಾತ್ರ. ಮೊದಲ ಸಲ ಗಾಂಜಾ ಸ್ಮಗ್ಲರ್‌ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಮೆಚೂÂರ್‌x ಆಗಿರುವ ಖದರ್‌ ಲುಕ್‌ ಇರಲಿದೆ. ಆಟಿಟ್ಯೂಡ್‌ ಇರುವಂತಹ ವಿಭಿನ್ನ ಪಾತ್ರ. ಒಟ್ಟಾರೆ ಮನೋರಂಜನೆ ಚಿತ್ರದ ಉದ್ದೇಶ.

* ರಾಘವೇಂದ್ರ ರಾಜಕುಮಾರ್‌ ವಿಲನ್‌ ಅಂತೆ?
ಹೌದು, ಮೊದಲಿಗೆ ನಾನು ರಾಘಣ್ಣನ ಜೊತೆ ನಟಿಸುತ್ತಿರೋದು ಹೆಮ್ಮೆ ಎನಿಸುತ್ತಿದೆ. ರಾಘಣ್ಣ  ಹದಿಮೂರು ವರ್ಷಗಳ ಬಳಿಕ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿರುವುದು ಇನ್ನಷ್ಟು ತೂಕ ಹೆಚ್ಚಿಸಿದೆ.

* “ಚಿಲಂ’ನಲ್ಲಿ ಹೈಲೆಟ್‌ ಏನು?
ಪಕ್ಕಾ ಸ್ವಮೇಕ್‌ ಕಥೆ. ತುಂಬಾ ಇಂಟ್ರೆಸ್ಟಿಂಗ್‌ ಆಗಿದೆ. ಒಳ್ಳೇ ಸ್ಕೋಪ್‌ ಇರುವಂತಹ ಪಾತ್ರ ಸಿಕ್ಕಿದೆ. ಕಥೆಯಲ್ಲಿ ಸಾಕಷ್ಟು ತಿರುವುಗಳಿವೆ. ಹಿಂದಿನ ಚಿತ್ರಗಳಿಗೆ ಹೋಲಿಸಿದರೆ, ಇಲ್ಲಿ ಎಲ್ಲವೂ ಹೊಸದಾಗಿದೆ. “ಸಾಹೇಬ’, “ಬೃಹಸ್ಪತಿ’ ಚಿತ್ರಗಳಲ್ಲಿ ನನ್ನ ಪಾತ್ರ ಸಾಫ್ಟ್ ಅಂತ ಎಲ್ಲರೂ ಹೇಳುತ್ತಿದ್ದರು. “ಚಿಲಂ’ನಲ್ಲಿ ಹೈಲೆಟ್‌ ಅಂದರೆ, ರಗಡ್‌ ಪಾತ್ರ ಮಾಡುತ್ತಿರೋದೇ ವಿಶೇಷ.

ಭರ್ಜರಿ ಫೈಟ್ಸ್‌, ಚೇಸಿಂಗ್‌ ಎಲ್ಲವೂ ಇದೆ. ಎಲ್ಲಕ್ಕಿಂತ ಮುಖ್ಯವಾಗಿ, ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ನಾನಾ ಪಾಟೇಕರ್‌, ದೇವರಾಜ್‌ ಇಲ್ಲಿ ಪೊಲೀಸ್‌ ಅಧಿಕಾರಿಗಳಾಗಿ ಕಾಣಿಸಿಕೊಂಡರೆ, ರಾಘಣ್ಣ ವಿಲನ್‌, ಸುಮನ್‌ ರಂಗನಾಥ್‌ ಕೂಡ ಸ್ಪೆಷಲ್‌ ರೋಲ್‌ ಮಾಡುತ್ತಿದ್ದಾರೆ. ಸರಿತಾ ಅವರು ಅಮ್ಮನ ಪಾತ್ರ ಮಾಡುತ್ತಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್‌ ಇದ್ದಾರೆ. ಇದೊಂದು ದೊಡ್ಡ ಬಜೆಟ್‌ ಚಿತ್ರ ಎಂಬುದು ಹೈಲೆಟ್‌. 

* ಚಿತ್ರತಂಡ ಹೇಗನ್ನಿಸುತ್ತೆ?
ಒಳ್ಳೆಯ ತಂಡ ಇಲ್ಲಿದೆ. ನಿರ್ದೇಶಕಿ ಚಂದ್ರಕಲಾ ಕಥೆ ಹೇಳಿದಾಗ, ಎಲ್ಲೂ ಡೌಟ್‌ ಇರಲಿಲ್ಲ. ಅಲ್ಲಿ ಮೊದಲು ಅವರು ಗೆದ್ದರು. ಚರ್ಚೆ ಮಾಡಬೇಕು ಅಂದಾಗೆಲ್ಲ ಬರುತ್ತಿದ್ದರು. ಏನಾದರೂ ಬದಲಾವಣೆ ಬಯಸಿದಾಗ, ಒಪ್ಪಿದರು. ನನಗೆ ಎರಡು ತಿಂಗಳು ಮುಂಚೆಯೇ, ಸ್ಕ್ರಿಪ್ಟ್ ಕೊಟ್ಟಿದ್ದರು. ಮೊದಲೇ ಪ್ಲಾನಿಂಗ್‌ ಮಾಡಿಕೊಂಡಿದ್ದರಿಂದ ಯಾವುದೇ ಸಮಸ್ಯೆ ಇಲ್ಲದಂತೆ ಕೆಲಸ ಮಾಡುತ್ತಿದೆ.

* ಅಪ್ಪ ಕಥೆ ಕೇಳಿದ್ರಾ?
ಇಲ್ಲ. ನಾನೇ ಕೇಳಿ ಆಯ್ಕೆ ಮಾಡಿಕೊಂಡೆ. ನಿನಗೆ ಇಷ್ಟದ ಪಾತ್ರವನ್ನು ಮಾಡು ಅಂತ ಅಪ್ಪ ಹೇಳಿದ್ದಾರೆ. ಅದರಂತೆ ಪಾತ್ರ ಇಷ್ಟವಾಯ್ತು. ಒಪ್ಪಿಕೊಂಡೆ.

* ಸಹೋದರ ವಿಕ್ಕಿ ಏನ್ಮಾಡ್ತಾ ಇದ್ದಾರೆ?
ಸದ್ಯಕ್ಕೆ ಸಿನಿಮಾಗೆ ರೆಡಿಯಾಗುತ್ತಿದ್ದಾನೆ. ಒಳ್ಳೇ ಪ್ರಾಜೆಕ್ಟ್ ಬಂದರೆ, ಅವನೂ ಹೀರೋ ಆಗ್ತಾನೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.