ಅಭಿವೃದಿ ಪರ ನಿಂತ ನನ್ನನ್ನು ಜನತೆ ಕೈಬಿಡಲ್ಲ


Team Udayavani, May 10, 2018, 3:12 PM IST

chikk-1.jpg

ಚಿಕ್ಕಬಳ್ಳಾಪುರ: ಈ ಚುನಾವಣೆ ತಮಗೆ ಧರ್ಮ ಯುದ್ಧವಾಗಿದೆ. ಸತ್ಯ, ಧರ್ಮದ ಪರವಾಗಿರುವ ಗೆಲುವು ಸಿಗಲಿದೆ. ಜಾತಿವಾದಿಗಳಿಗೆ, ಕ್ಷೇತ್ರದ ಅಭಿವೃದ್ಧಿ ವಿರೋಧಿಗಳಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

ನಿರೀಕ್ಷೆಗೂ ಮೀರಿ ಅನುದಾನ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿವಿಧಡೆಗಳಲ್ಲಿ ಬುಧವಾರ ತಮ್ಮ ಚುನಾವಣಾ
ಪ್ರಚಾರ ಸಭೆಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ಆಗದ ಕ್ಷೇತ್ರದ ಅಭಿವೃದ್ಧಿ ಕೇವಲ 5 ವರ್ಷದಲ್ಲಿ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಿರೀಕ್ಷೆಗೂ ಮೀರಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದೆ. ಯಾವುದೇ ಜಾತಿ, ಧರ್ಮ ಭೇದ ಮಾಡದೇ ರೈತಾಪಿ ಯುವಜನರ, ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಮೀರಿ ದುಡಿದಿದ್ದೇನೆ ಎಂದರು.

ನೀರಾವರಿಗೆ ಆದ್ಯತೆ: ಈ ಹಿಂದೆ ಯಾವ ಸರ್ಕಾರವು ಜಿಲ್ಲೆಯ ನೀರಾವರಿಗೆ ಕೊಡದ ಆದ್ಯತೆಯನ್ನು ಐದು ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರ ಬದ್ಧತೆ, ಪ್ರಾಮಾಣಿಕತೆಯಿಂದ ನೀಡಿದ್ದು, ಎತ್ತಿನ ಹೊಳೆಗೆ 13 ಸಾವಿರ ಕೋಟಿ ರೂ., ಹೆಬ್ಟಾಳ, ನಾಗವಾರ ಯೋಜನೆಗೆ 1 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ.

ಆದರೆ, ವಿರೋಧ ಪಕ್ಷಗಳು ಕ್ಷೇತ್ರಕ್ಕೆ ಏನು ಮಾಡಿಲ್ಲ ಎಂದು ಅಪಪ್ರಚಾರದಲ್ಲಿ ತೊಡಗಿವೆ. ಅಧಿಕಾರದಲ್ಲಿರುವಾಗ ಏನು ಮಾಡಲಾಗದವರು ಇಂದು ಕ್ಷೇತ್ರದ ಪ್ರಗತಿ ಸಹಿಸದೇ ಇಲ್ಲಸಲ್ಲದ ಅಪಾದನೆಗಳನ್ನು ಮಾಡುತ್ತಿದ್ದಾರೆ. ಆದರೂ ಕ್ಷೇತ್ರ ಜನ ಅಭಿವೃದ್ಧಿ ಪರ ನಿಂತಿದ್ದಾರೆ. ಈ ಚುನಾವಣೆಯಲ್ಲಿ ತಮಗೆ ಅತ್ಯಧಿಕ ಮತಗಳನ್ನು ತಂದುಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೈಗಾರಿಕೆ ತರುವೆ: ಮುಂದಿನ ಐದು ವರ್ಷದಲ್ಲಿ ಈಗ ನೀಡಿರುವ ಎಲ್ಲಾ ಭರವಸೆಗಳ ಈಡೇರಿಕೆಗೆ ಶಕ್ತಿ ಮೀರಿ ಕೆಲಸ
ಮಾಡುತ್ತೇನೆ. ಮುಖ್ಯವಾಗಿ ಈ ಭಾಗಕ್ಕೆ ಕೈಗಾರಿಕೆಗಳನ್ನು ತಂದುಕೊಡುವುದರ ಜೊತೆಗೆ ಸಮಗ್ರ ನೀರಾವರಿ ಕಲ್ಪಿಸುವುದು ತಮ್ಮ ಧ್ಯೇಯವಾಗಿದೆ. ಕ್ಷೇತ್ರದ ಎಲ್ಲಾ ವರ್ಗದ ಜನರ ವಿಶ್ವಾಸ, ನಂಬಿಕೆ ಉಳಿಸಿಕೊಂಡು ಬಂದಿದ್ದೇನೆ. ಈ ಚುನಾವಣೆಯಲ್ಲಿ ಮತ್ತೆ ಅಭಿವೃದ್ಧಿಗೆ ಮನ್ನಣೆ ಸಿಗಲಿದೆ. ಈಗಾಗಲೇ ನೂರಾರು ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ನಗರದ ಪ್ರಗತಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಗಳು ಪ್ರಗತಿಯಲ್ಲಿದ್ದು, ಒಂದರೆಡು ತಿಂಗಳಲ್ಲಿ ಪೂರ್ಣಗೊಳ್ಳಲಿವೆ ಎಂದರು.

ಕಾಂಗ್ರೆಸ್‌ ಸರ್ಕಾರ ಐದು ವರ್ಷದಲ್ಲಿ ನುಡಿದಂತೆ ನಡೆದಿದೆ. ಎಲ್ಲಾ ವರ್ಗಕ್ಕೂ ಸಾಮಾಜಿಕ ನ್ಯಾಯ ಕೊಟ್ಟಿದೆ. ಮತ್ತೂಮ್ಮೆ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ರಾಜ್ಯದಲ್ಲಿ ಬಿಜೆಪಿ, ಅವಕಾಶವಾದಿ ಜೆಡಿಎಸ್‌ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್‌ ನೇತೃತ್ವದ ಜನಪರ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಜೆಡಿಎಸ್‌ನಿಂದ ಕಾಂಗ್ರೆಸ್‌ ಸೇರ್ಪಡೆ: ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗ್ರಾಪಂನ ಜೆಡಿಎಸ್‌ ಅಧ್ಯಕ್ಷರು ಪಕ್ಷ
ತ್ಯಜಿಸಿ ಶಾಸಕ ಡಾ. ಕೆ. ಸುಧಾಕರ್‌ ಸಮ್ಮುಖ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಜೊತೆಗೆ ಹನುಮಂತಪುರದ ಜೆಡಿಎಸ್‌ ನಾಯಕರಾದ ನಾರಾಯಣ, ದೇವರಾಜು, ನಾಗರಾಜು, ವೆಂಕಟೇಶ್‌, ಆನಂದ್‌ ಎಲ್‌. ನವೀನ, ಆನಂದ ಎ., ವೆಂಕಟೇಶ್‌, ಮೂರ್ತಿ, ನರಸಿಂಹಮೂರ್ತಿ ಎಸ್‌., ರಮೇಶ್‌ ಕೂಡ ಕಾಂಗ್ರೆಸ್‌ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೋಚಿಮುಲ್‌ ನಿರ್ದೇಶಕ ಕೆ.ವಿ.ನಾಗರಾಜ್‌, ಎಪಿಎಂಸಿ ನಿರ್ದೇಶಕ ಮಿಲ್ಟನ್‌ ವೆಂಕಟೇಶ್‌ ಆವಲಗುರ್ಕಿ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು ಮತಬೇಟೆಗೆ ತಾರೆಯರ ಮನೆ ಮನೆ ಭೇಟಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬುಧವಾರವು ಸಹ ಚಿತ್ರತಾರೆಗಳ ತಂಡ ಮನೆ ಮನೆಗೂ ಭೇಟಿ ನೀಡಿ ಶಾಸಕ ಡಾ.ಕೆ.ಸುಧಾಕರ್‌ ಪರ ಮತಯಾಚನೆ ನಡೆಸಿದರು. ಬಿಸಿಲ ಬೇಗೆಯನ್ನೂ ಲೆಕ್ಕಿಸದೇ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರ ಕಲಾವಿದರಾದ ದಿಗಂತ್‌, ಪ್ರಜ್ವಲ್‌ ದೇವರಾಜ್‌ ಹಾಗೂ ಹರ್ಷಿಕಾ ಪೂಣಚ್ಚ ಸೇರಿದಂತೆ ಹಲವು ಕಲಾವಿದರು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಡಾ. ಕೆ. ಸುಧಾಕರ್‌ ಅವರನ್ನು ಮತ್ತೂಮ್ಮೆ ಹೆಚ್ಚಿನ ಮತಗಳ ಅಂತರಿಂದ ಗೆಲ್ಲಿಸಿಕೊಡಬೇಕೆಂದು ಕೋರಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.