ತುಂಡಾದ ಸೇತುವೆಯಲ್ಲೇ ಪಯಣ: ಆತಂಕದಲ್ಲಿ ವಿದ್ಯಾರ್ಥಿಗಳು


Team Udayavani, May 11, 2018, 6:15 AM IST

6.jpg

ಅಡ್ಯನಡ್ಕ:ಇನ್ನೇನು ಮಳೆಗಾಲದ ಜತೆಗೆ ಶಾಲೆ-ಕಾಲೇಜುಗಳೂ ಆರಂಭವಾಗಲಿವೆ. ಆದರೆ, ಮರಕ್ಕಿಣಿಯ ಮಕ್ಕಳಲ್ಲಿ ಹೊಸ ಶೈಕ್ಷಣಿಕ ವರ್ಷದ ಕುರಿತಾಗಿ ಕುತೂಹಲದ ಜತೆಗೆ, ಮುರಿದ ಸೇತುವೆಯಲ್ಲಿ ಸಾಗುವುದು ಹೇಗೆಂಬ ಭಯವೂ ಮೂಡಿದೆ.

ಕೇಪು ಗ್ರಾ.ಪಂ.ವಾಪ್ತಿಗೆ ಬರುವ ಅಡ್ಯನಡ್ಕ ಪೇಟೆಯಿಂದ ಅನತಿ ದೂರದಲ್ಲಿರುವ ಮರಕ್ಕಿಣಿ ಎಂಬಲ್ಲಿ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಯ ಸ್ಥಿತಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ನಿದ್ದೆಗೆಡಿಸಿದೆ. ಕಳೆದ ವರ್ಷ ಮಳೆಗಾಲದಲ್ಲಿ ಈ ಭಾಗದಲ್ಲಿ ಬೀಸಿದ ಭಾರೀ ಗಾಳಿ ಮಳೆಗೆ ಖಾಸಗಿಯವರಿಗೆ ಸೇರಿದ ತೋಟದಲ್ಲಿದ್ದ ಬೃಹತ್‌ ಗಾತ್ರದ ಮರ ನೆಲಕ್ಕೆ ಅಪ್ಪಳಿಸಿತ್ತು. ಆಗ ಸಮೀಪದ ಮತ್ತೂಂದು ಮರ ಸೇತುವೆ ಮೇಲೆ ಬಿದ್ದು, ಸೇತುವೆ ಅರ್ಧ ಮುರಿದಿದೆ.

ಕಳೆದ ಮಳೆಗಾಲದಲ್ಲಿ ಮುರಿದು ಬಿದ್ದ ಸೇತುವೆಯನ್ನು ಸರಿಪಡಿಸುವ ಕಾರ್ಯಕ್ಕೆ ಗ್ರಾ.ಪಂ. ಮುಂದಾಗಲಿಲ್ಲ. ಒಂದು ವರ್ಷದಿಂದ ಈ ಭಾಗದ ಜನರು ತುಂಡಾದ ಸೇತುವೆಯಲ್ಲಿ ಜೀವ ಕೈಯಲ್ಲಿ ಹಿಡಿದು ದಾಟುತ್ತಿದ್ದಾರೆ. ಮಳೆಗಾಲದಲ್ಲಿ ನೀರು ತೋಡಿನ ತುಂಬಾ ಉಕ್ಕಿ ಹರಿಯುತ್ತದೆ. ಸೇತುವೆಗೆ ಮುತ್ತಿಕ್ಕುತ್ತಾ ನೀರು ಹರಿಯುತ್ತಿದ್ದು, ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸಿದೆ.ಸೇತುವೆ ಮುರಿದು “ವಿ’ ಆಕಾರದಲ್ಲಿ ಬಾಗಿ ನಿಂತಿದ್ದು, ಮುರಿದ ತತ್‌ಕ್ಷಣ ಮಳೆ ಗಾಲದ ತಾತ್ಕಾಲಿಕ ಸಂಪರ್ಕಕ್ಕೆ ಸ್ಥಳೀಯರು ಮರಳು, ಮಣ್ಣನ್ನು ತುಂಬಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಆದರೆ ಸ್ಥಳೀಯಾಡಳಿತ ಇದನ್ನೇ ಪರಿಹಾರ ಎಂದು ತಿಳಿದು ದುರಸ್ತಿಗೆ ಮುಂದಾಗಲಿಲ್ಲ. 

ವಿದ್ಯಾರ್ಥಿಗಳೇ ಹೆಚ್ಚು
ಈ ಭಾಗದಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು, ಅಡ್ಯನಡ್ಕಕ್ಕೆ ಹೋಗ ಬೇಕಾದರೆ ಜನರು ಇದೇ ಮಾರ್ಗವನ್ನೇ ಅವಲಂಬಿಸಿದ್ದಾರೆ. ಅಡ್ಯನಡ್ಕ ಪೇಟೆಯನ್ನು ಸಂಪರ್ಕಿಸಲು ರಸ್ತೆ ಇದ್ದು, ಆದರೆ ಸುತ್ತು ಬಳಸಿ ತೆರಳಬೇಕಾಗಿದೆ. ಅಡ್ಯನಡ್ಕದಲ್ಲಿ ಶಾಲೆ-ಕಾಲೇಜುಗಳಿದ್ದು, ಈ ಭಾಗದ ಹೆಚ್ಚಿನ ವಿದ್ಯಾರ್ಥಿಗಳು ಇದೇ ಮಾರ್ಗದಲ್ಲಿ ಸಂಚರಿಸುವವರಿದ್ದಾರೆ. ಇನ್ನುಳಿದಂತೆ ಅಳಿಕೆ, ವಿಟ್ಲ, ಪುತ್ತೂರು, ನೆರೆಯ ರಾಜ್ಯ ಕೇರಳ ಭಾಗದ ಶಾಲೆಗೆ ಮುಂಜಾನೆ ತೆರಳುವ ವಿದ್ಯಾರ್ಥಿಗಳು ಇದೇ ಮುರಿದ ಸೇತುವೆಯಲ್ಲೇ ದಾಟಿ ತೆರಳಬೇಕಿದೆ.

ಬೇರೆ ದಾರಿಯಿಲ್ಲ
ಅಮೈ, ಕಾಯರ್ತಡ್ಕ, ಪಂಜಿಕಲ್ಲು, ಕೊಡಂದೂರು, ಪದವು, ನೆಕ್ಕರೆ, ತೋರಣಕಟ್ಟೆ ಹಾಗೂ ಕೋಪ್ರ ಭಾಗ ದವರು ಅಡ್ಯನಡ್ಕ, ವಿಟ್ಲ ಹಾಗೂ ಕೇರಳಕ್ಕೆ ಪ್ರಯಾಣಿಸಬೇಕಾದರೆ ಇದೇ ಕಾಲು ದಾರಿ ಬಳಸುತ್ತಾರೆ. ರಸ್ತೆ ಮಾರ್ಗ ವಿದ್ದರೂ ಅದು ಬಹಳ ದೂರದ ದಾರಿ. ಮಳೆಗಾಲದಲ್ಲಿ ಸುರಿಯುವ ಭಾರೀ ಮಳೆಗೆ ಈಗಿರುವ ಸೇತುವೆ ನೀರಿಗೆ ಕೊಚ್ಚಿ ಹೋದರೆ ಪಾದಚಾರಿಗಳು ಮತ್ತೆ ಒಂದು ಸುತ್ತು ಬಳಸಿ ಅಡ್ಯ ನಡ್ಕಕ್ಕೆ ಪ್ರಯಾಣಿಸಬೇಕಾಗುತ್ತದೆ. ಕ್ಲಪ್ತ ಸಮಯಕ್ಕೆ ದೂರದ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಲ್ಲಿ ಮಳೆಗಾಲ ಆರಂಭಕ್ಕೂ ಮುಂಚೆ ಭಯ ಕಾಡಲಾರಂಭಿಸಿದೆ.

ಕುಸಿದು ಬಿದ್ದ ಕಾಲುದಾರಿ
ಸೇತುವೆಯಿಂದ ನಾಲ್ಕು ಮಾರು ದೂರದಲ್ಲಿನ ತೋಡಿನ ಬದಿ 4 ವರ್ಷಗಳ ಹಿಂದೆ ಸಂಪೂರ್ಣ ಕುಸಿದು ಬಿದ್ದಿದೆ. ಮಳೆಗಾಲವಾದುದರಿಂದ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಅಡಿಕೆ ಮರದ ಸಹಾಯದಿಂದ ಕಾಲು ಸಂಕವನ್ನು ನಿರ್ಮಿಸಲಾಗಿತ್ತು. 

ಮಳೆಗಾಲ ಕಳೆದ ಕೂಡಲೇ ಸರಿಪಡಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಈ ಸಮಸ್ಯೆಯ ಕುರಿತು ಪಂಚಾಯತ್‌ಗೆ ಸಾಕಷ್ಟು ಮನವಿಗಳು ಸಲ್ಲಿಕೆಯಾಗಿದ್ದರೂ ಪ್ರಗತಿಯನ್ನು ಕಂಡಿಲ್ಲ.

ಸಮಸ್ಯೆಯ ಕುರಿತು ಪ್ರತಿ ಗ್ರಾಮಸಭೆ, ವಾರ್ಡ್‌ ಸಭೆಗಳಲ್ಲಿ ಆಡಳಿತದ ಗಮನ ಸೆಳೆಯಲಾಗಿದೆ. ಸೇತುವೆ ನಿರ್ಮಾಣಕ್ಕೆ ದೊಡ್ಡಮೊತ್ತದ ಅನುದಾನ ಬೇಕಿದ್ದು, ಗ್ರಾಮ ಪಂಚಾಯತ್‌ಗಳಲ್ಲಿ ಅದನ್ನು ಭರಿಸುವಷ್ಟು ಶಕ್ತಿ ಇಲ್ಲ ಎನ್ನುತ್ತಾರೆ ಪಂಚಾಯತ್‌ ಆಡಳಿತ ಸಿಬಂದಿ.

ಭಯದಲ್ಲೇ ಪಯಣ
ಮಳೆಗಾಲದಲ್ಲಿ ಸೇತುವೆಗೆ ಹತ್ತಿರ ಹತ್ತಿರ ನೀರು ಬರುತ್ತದೆ. ಬಾಗಿದ ಸೇತುವೆ ಯಾವಾಗ ತುಂಡಾಗಿ ಬೀಳುತ್ತದೆ ಎಂಬ ಹೆದರಿಕೆ. ಇನ್ನೊಂದೆಡೆ ತೋಡಿನ ಬದಿ ಕುಸಿದು ಬಿದ್ದಿರುವುದರಿಂದ ನಡೆದುಕೊಂಡು ಹೋಗಲು ಸ್ವಲ್ಪ ಜಾಗವಿದೆ. ಮಳೆಗಾಲದಲ್ಲಿ ಕುಸಿದು ಬಿದ್ದರೆ ನಮಗೆ ಬೇರೆ ದಾರಿ ಇಲ್ಲ. ಪ್ರಸ್ತುತ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆ ಬಳಿಕವಾದರೂ ಸರಿಪಡಿಸುವ ವಿಶ್ವಾಸವಿದೆ.
– ಅಭಿಷೇಕ್‌ ಎ.ಕೆ.
ಕಾಲೇಜು ವಿದ್ಯಾರ್ಥಿ

ಗ್ರಾಮಸಭೆಯಲ್ಲಿ ಪ್ರಸ್ತಾವ
ಸೇತುವೆ ನಿರ್ಮಿಸುವಷ್ಟು ಅನುದಾನ ಗ್ರಾ.ಪಂ.ನಲ್ಲಿ ಇರುವುದಿಲ್ಲ. ಇಲ್ಲಿಯೂ ಇದೇ ಸಮಸ್ಯೆ ಆಗಿದೆ. ಪ್ರತಿ ವಾರ್ಡ್‌ ಸಭೆಗಳು, ಗ್ರಾಮಸಭೆಯಲ್ಲಿ ಇದರ ಬಗ್ಗೆ ಪ್ರಸ್ತಾವ ಆಗುತ್ತಿದೆ. ಮುಂಬರುವ ದಿನಗಳಲ್ಲಿ ಸ್ಥಳ ಪರಿಶೀಲಿಸಿ, ಮೆಲಧಿಕಾರಿಗಳ ಗಮನಕ್ಕೆ ತರಲಾಗುವುದು.
– ನಳಿನಿ ಬಿ.
ಕೇಪು ಗ್ರಾಮ ಪಂಚಾಯತ್‌ ಪಿಡಿಒ

– ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.