“ಸಮಸ್ಯೆಬಗ್ಗೆ ರಾಹುಲ್ ಮಾತಾಡಿಲ್ಲ’
Team Udayavani, May 11, 2018, 7:20 AM IST
ಬೆಂಗಳೂರು: ಮಹದಾಯಿ ಸಮಸ್ಯೆ, ರೈತರ ಆತ್ಮಹತ್ಯೆ ಸೇರಿ ರಾಜ್ಯದ ಜ್ವಲಂತ ಸಮಸ್ಯೆಯ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಕಾರ ಎತ್ತಿಲ್ಲ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಆರೋಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ವಿಧಾನಸಭೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಥವಾ ಸಂವಾದದಲ್ಲಿ ರಾಜ್ಯದ ಮಹದಾಯಿ ಸಮಸ್ಯೆ, ಲಿಂಗಾಯತ ಧರ್ಮದ ವಿಭಜನೆ, ಬೆಂಗಳೂರಿನ ಮೂಲಸೌಕರ್ಯದ ಸಮಸ್ಯೆ, ರೈತರ ಆತ್ಮಹತ್ಯೆ ಸೇರಿದಂತೆ ಯಾವ ವಿಷಯದ ಬಗ್ಗೆಯೂ ಪ್ರಸ್ತಾಪಿಸಿಲ್ಲ. ಇಷ್ಟು ಮಾತ್ರವಲ್ಲದೇ ರಾಜ್ಯ ಸರ್ಕಾರ ಐದು ವರ್ಷ ಏನು ಸಾಧನೆ ಮಾಡಿದೆ ಎಂಬುದನ್ನೂ ಹೇಳಿಲ್ಲ. ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಮಾತನಾಡಿದ್ದು ಬಿಟ್ಟರೇ ಬೇರೇನೂ ಮಾಡಿಲ್ಲ ಎಂದರು.
ಕಾಂಗ್ರೆಸ್ನಲ್ಲಿ ಭಿನ್ನಮತ ಇಲ್ಲ ಎಂದು ಹೇಳುವುದ ಕ್ಕಾಗಿಯೇ ರಾಹುಲ್ ಗಾಂಧಿಯವರು ಗುರುವಾರ ಬೆಳಗ್ಗೆ ಸಂವಾದ ನಡೆಸಿದ್ದಾರೆ. ಕರ್ನಾಟಕದ ಜನರ ಬಗ್ಗೆ ಯಾವುದೇ ಮಾತುಗಳನ್ನಾಡಿಲ್ಲ. ಹತಾಶೆಯಿಂದಾಗಿ ರಾಹುಲ್ ಗಾಂಧಿಯವರು ಕರ್ನಾಟಕ ಚುನಾವಣೆಯ ಅಂತಿಮ ಸುದ್ದಿಗೋಷ್ಠಿ ಮಾಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ