ವೆಂಕಟರೆಡ್ಡಿ-ರಾಜುಗೌಡ ರೋಡ್‌ ಶೋ


Team Udayavani, May 11, 2018, 2:23 PM IST

yad-1.jpg

ಯಾದಗಿರಿ: ಯಾದಗಿರಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಹಾಗೂ ಅವರ ಸಹೋದರ ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ರೋಡ್‌ ಶೋ ನಡೆಸುವ ಮೂಲಕ ಮತಯಾಚಿಸಿದರು.

ನಗರದ ಮೈಲಾಪುರ ಬೇಸ್‌ ನಿಂದ ಚಕ್ಕರಕಟ್ಟ ಮುಖಾಂತರ, ಗಾಂಧಿ ವೃತ್ತದಲ್ಲಿ ಮಹಾತ್ಮಾ ಗಾಂ ಧಿ ಪುತ್ಥಳಿಗೆ ಮಾರ್ಲಾಪಣೆ ಮಾಡಿ ಮಾತನಾಡಿದ ವೆಂಕಟರೆಡ್ಡಿ ಮುದ್ನಾಳ, ಚುನಾವಣೆಯಲ್ಲಿ ಈ ಬಾರಿ ನನ್ನನ್ನು ಬಹುಮತದಿಂದ ಗೆಲ್ಲಿಸಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಎಲ್ಲಾ ಜಾತಿ ಧರ್ಮವರನ್ನು ಸಮಾನಾಗಿ
ಕಾಣುವ ದೃಷ್ಟಿಕೋನ ನನ್ನದು, ಸಬ್‌ ಕಾ ಸಾಥ ಸಬ್‌ ಕಾ ವಿಕಾಸ್‌ ಎನ್ನುವ ಮಂತ್ರ ಭಾರತೀಯ ಜನತಾ ಪಕ್ಷ ನನಗೆ ಹಾಕಿಕೊಟ್ಟಿರುವ ಮೂಲಮಂತ್ರವಾಗಿದೆ ಎಂದರು.

ಮಾಜಿ ಶಾಸಕ ಡಾ| ವೀರಬಸಂತರೆಡ್ಡಿ ಮುದ್ನಾಳ ಮಾತನಾಡಿ, ಮುದ್ನಾಳ ಕುಟುಂಬ ಜನರ ಸೇವೆಗಾಗಿ ಸದಾ ಸಿದ್ಧರಿದ್ದು, ವೆಂಕಟರೆಡ್ಡಿ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ|
ಶರಣಭೂಪಾಲರಡ್ಡಿ ನಾಯ್ಕಲ್‌, ದೇವಿಂದ್ರನಾಥ ನಾದ, ಖಂಡಪ್ಪ ದಾಸನ, ಬಸವರಾಜ ಚಂಡ್ರಿಕಿ, ಉಮಾರಡ್ಡಿಗೌಡ
ನಾಯ್ಕಲ್‌, ಬಸವರಾಜ ಪಾಟೀಲ ಬಿಳಾರ, ಚನ್ನಾರಡ್ಡಿ ಪಾಟೀಲ ಬಿಳಾರ, ಮಲ್ಲಣಗೌಡ ಹತ್ತಿಕುಣಿ, ಮಹೇಶಗೌಡ ಮುದ್ನಾಳ, ಹಣಮಂತ ಇಟಗಿ, ಗೋಪಾಲ ದಾಸನಕೇರಿ, ನಗರಸಭೆ ಅಧ್ಯಕ್ಷ ಲಲಿತಾ ಅನಪುರ, ವಿನಾಯಕ ಮಾಲಿಪಾಟೀಲ, ರುದ್ರುಗೌಡ ಪಾಟೀಲ, ರವಿ ಬಾಪುರೆ, ಮಲ್ಲಿಕಾರ್ಜುನರಡ್ಡಿ, ಮೋಹನ ಬಾಬು, ಸುರೇಶ ಕೊಟಿಮನಿ,
ಶಂಕ್ರಪ್ಪಗೌಡ ಗೋನಾಲ, ವೀಣಾ ಮೋದಿ, ಸುನೀತಾ ಚವ್ಹಾಣ, ನಾಗರಾಜ ಬೀರನೂರ್‌, ಮಹೇಂದ್ರ ಕಂದಕೂರ, ಸೂಗರಡ್ಡಿ ಬಿಳಾರ, ಡಾ| ಶರಣರಡ್ಡಿ ಕೋಡ್ಲಾ, ವೆಂಕಟರೆಡ್ಡಿ ತಂಗಡಿಗಿ, ಎಸ್‌.ಪಿ. ನಾಡೇಕಾರ್‌, ಸುನೀತಾ ರಾಠೊಡ್‌ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ದೌರ್ಜನ್ಯ ಹತ್ತಿಕ್ಕುವುದು ನನ್ನ ಸಂಕಲ್ಪ
ಸುರಪುರ:
ನಗರಸಭೆ ವ್ಯಾಪ್ತಿಯ ರಂಗಂಪೇಟ ತಿಮ್ಮಾಪುರ, ಹಸನಾಪುರ ದಿವಳಗುಡ್ಡ ವಣಿಕ್ಯಾಳ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿ ರಾಜುಗೌಡ ಗುರುವಾರ ರೋಡ್‌ ಶೋ ನಡೆಸಿದರು. 

ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಸರಕಾರ ಬದಲಿಸಿ ಬಿಜೆಪಿ ಬೆಂಬಲಿಸಿ ಘೋಷಣೆ ಕೂಗಿದರು. ಈ ವೇಳೆ ರಾಜುಗೌಡ ಮಾತನಾಡಿ, ಹೆದರಿಸುವುದ ಬೆದರಿಸುವುದು ಭಯದ ವಾತಾವರಣ ನಿರ್ಮಿಸುವುದು ಕಾಂಗ್ರೆಸ್‌ ಸಂಸ್ಕೃತಿಯಾಗಿದೆ. ಇದಕ್ಕೆಲ್ಲ ರಾಜುಗೌಡ ಹೆದರುವುದಿಲ್ಲ. ಕಾರ್ಯಕರ್ತರೂ ಕೂಡ ಹೆದರುವ ಅಗತ್ಯವಿಲ್ಲ. ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಿ ಶಾಂತಿ ಮತ್ತು ಸೌರ್ಹಾದ ವಾತಾವರಣಕ್ಕಾಗಿ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.

ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿ ನನಗೆ ವ್ಯಕ್ತವಾಗುತ್ತಿರುವ ಬೆಂಬಲ ಸಹಿಸಲಾಗದೆ ಕಾಂಗ್ರೆಸ್‌ ನವರು ಸೋಲಿನ ಹತಾಶೆಯಿಂದ ನನ್ನ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ದೌರ್ಜನ್ಯ ಹತ್ತಿಕ್ಕುವುದು ನನ್ನ ಮೊದಲ ಸಂಕಲ್ಪ. ಇದಕ್ಕೆ ತಾವು ಸಹಕರಿಸಿ ನನಗೆ ಮತನೀಡಿ ಗೆಲ್ಲಿಸಿ ಎಂದರು. ಮುಖಂಡರಾದ ಸುರೇಶ ಸಜ್ಜನ್‌, ರಾಜಾ ಹಣಮಪ್ಪ ನಾಯಕ ತಾತಾ, ಚಂದ್ರಶೇಖರ ಜಡಿಮರಳ, ಮಲ್ಲಿಕಾರ್ಜುನ ಕಡೇಚೂರ, ಹಣಮಂತ ಚಂದನಕೇರಿ, ವೀರಭದ್ರಪ್ಪ ಕುಂಬಾರ, ಭೀಮಾಶಂಕರ ಬಿಲ್ಲವ್‌, ಶ್ರೀರಂಗ ಮಿರಿಯಾಲ ಇದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.