ಶಾಸಕ ರಾಜೇಶ್ ರೋಡ್ ಶೋ
Team Udayavani, May 11, 2018, 3:11 PM IST
ಜಗಳೂರು: ಬರಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊತ್ತಿರುವ ತಾಲೂಕಿಗೆ ಮುಕ್ತಿ ದೊರಕಿಸಲು ಶಾಶ್ವತ ಯೋಜನೆಗಳ ಜಾರಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಎಚ್.ಪಿ. ರಾಜೇಶ್ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿದ ಅವರು, ಕಳೆದ ಐದು ವರ್ಷದಲ್ಲಿ ರಸ್ತೆ, ಚರಂಡಿಯಂತಹ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡಿದ್ದೇನೆ. ಮುಂದಿನ ಬಾರಿಗೆ ಕ್ಷೇತ್ರದಲ್ಲಿ ಶಾಶ್ವತ ಯೋಜನೆಗಳ ಜಾರಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ನಿರುದ್ಯೋಗ ಹೆಚ್ಚಾಗಿರುವ ಜಗಳೂರಿನಲ್ಲಿ ಕೈಗಾರಿಕೆಗಳ ಸ್ಥಾಪನೆಯಾಗಬೇಕಿದೆ. ಅದಕ್ಕೆ ಪೂರಕ ವಾತಾವರಣವನ್ನು ಕಲ್ಪಿಸಲಾಗುವುದು ಎಂದರು.
ಇದಕ್ಕಿಂತ ಮುಖ್ಯವಾಗಿ ತಾಲೂಕಿನಲ್ಲಿ ನೀರಾವರಿ ಆಗದೇ ಹೋದರೆ ಭವಿಷ್ಯವಿಲ್ಲ. ಹೀಗಾಗಿ ಪ್ರಗತಿ ಹಂತದಲ್ಲಿರುವ ಭದ್ರಾ ಮೇಲ್ದಂಡೆ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸುವ ಶಪಥ ಮಾಡಿದ್ದೇನೆ. 52 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದರು.
ಪ್ರತಿಪಕ್ಷದವರು ಮೂಡಿಸುತ್ತಿರುವ ಯಾವುದೇ ಗೊಂದಲಕ್ಕೆ ಜನತೆ ಕಿವಿಗೊಡಬಾರದು. ಕಾಂಗ್ರೆಸ್ಗೆ ಮತ ನೀಡುವ
ಮೂಲಕ ತಾಲೂಕಿನ ಅಭಿವೃದ್ಧಿಗೆ ಬೆಂಬಲಿಸಬೇಕೆಂದುಅವರು ಮತದಾರರಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಮುಖಂಡರಾದ ಬಸಾಪುರ ರವಿಚಂದ್ರ, ಎಲ್.ಬಿ. ಭೈರೇಶ್, ಗಿರೀಶ್ ಒಡೆಯರ್, ತಾಪಂ ಉಪಾಧ್ಯಕ್ಷ ಮುದೇಗೌಡ್ರ ಬಸವರಾಜಪ್ಪ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಲ್ಲೇಶರಾಜ್ ಪಟೇಲ್, ತಿಮ್ಮರಾಯಪ್ಪ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ