ಸಿಟಿ ಸೆಂಟರ್ ಮಾಲ್ನಲ್ಲಿಸ್ವೀಪ್ನಿಂದ ಮತ ಜಾಗೃತಿ
Team Udayavani, May 12, 2018, 11:03 AM IST
ಕಲಬುರಗಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮತದಾನ ಪ್ರಮಾಣ ಹೆಚ್ಚಳಕ್ಕೆ ಅಂತಿಮ ಪ್ರಯತ್ನವಾಗಿ ಸ್ವೀಪ್ ಸಮಿತಿಯಿಂದ ನಗರದ ಸೂಪರ್ ಮಾರ್ಕೇಟ್ ಪ್ರದೇಶದ ಸಿಟಿ ಸೆಂಟರ್ ಮಾಲ್ನಲ್ಲಿ ಮತದಾನ ಜಾಗೃತಿಗಾಗಿ ಹಾಸ್ಯ ಸಂಜೆ ಆಯೋಜಿಸಲಾಗಿತ್ತು.
ಜಿಲ್ಲೆಯ ಚುನಾವಣೆ ಐಕಾನ್ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ, ಹಾಸ್ಯ ಕಲಾವಿದರಾದ ಗುಂಡಣ್ಣ ಡಿಗ್ಗಿ, ಶಿವರಾಜ ಅಂಡಗಿ, ನವಲಿಂಗ ಹಾಸ್ಯ ಚಟಾಕಿ ಹಾರಿಸುವ ಮೂಲಕ ಕಡ್ಡಾಯವಾಗಿ ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು. ಕಲಾವಿದ ಸೂರಜ್ ಜೋಶಿ ಮತದಾನ ಜಾಗೃತಿಯ ಸ್ವೀಪ್ ಗೀತೆ ಹಾಡಿದರು.
ಸಿಟಿ ಸೆಂಟರ್ ಮಾಲ್ನ ನೌಕರರು ಮತ್ತು ನೂರಾರು ಸಂಖ್ಯೆಯ ಗ್ರಾಹಕರು ಹಾಸ್ಯ ಸಂಜೆಯ ಸ್ವೀಪ್ ಜಾಗೃತಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸ್ವೀಪ್ ಸಮಿತಿಯ ಸದಸ್ಯ ಕಾರ್ಯದರ್ಶಿ ಮೈಸೂರು ಗಿರೀಶ, ಕ್ರೀಡಾ ಮತ್ತು ಯುವಸೇವಾ ಇಲಾಖೆಯ ಸಹಾಯಕ ನಿರ್ದೇಶಕ ನಾಡಿಗೇರ, ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ| ನಾಗರತ್ನ ದೇಶಮಾನೆ, ಸಹಾಯಕ ಕೃಷಿ ನಿರ್ದೇಶಕ ಅನೀಲ ರಾಠೊಡ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ, ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ