ಮತಗಟ್ಟೆಯಲ್ಲಿ ಮೊಬೈಲ್ ಬಳಸದಂತೆ ಎಚ್ಚರಿಕೆ
Team Udayavani, May 12, 2018, 3:37 PM IST
ಪಿರಿಯಾಪಟ್ಟಣ: ತಾಲೂಕಿನಲ್ಲಿ ಶಾಂತಿಯುತ ಮತದಾನ ನಡೆಸಲು ಸಕಲ ರೀತಿಯಲ್ಲಿ ಸಿದ್ಧತೆ ಕೈಗೊಂಡಿದ್ದು ಮತದಾನ ಪ್ರಕ್ರಿಯೆಗೆ 1362 ಸಿಬ್ಬಂದಿಯನ್ನು ನೇಮಿಸಿ ಅಗತ್ಯ ತರಬೇತಿ ನೀಡಲಾಗಿದೆ ಎಂದು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ಸುಮಾತಿಳಿಸಿದರು.
ವಿಶೇಷ ಮತಗಟ್ಟೆಗಳು: ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಒಟ್ಟು 230 ಮತಗಟ್ಟೆಗಳಲ್ಲಿ 2 ಪಿಂಕ್ ಮತಗಟ್ಟೆ, 1 ಗಿರಿಜನ ಶೈಲಿಯ ಸಾಂಪ್ರದಾಯಿಕ ಮತಗಟ್ಟೆ ಸ್ಥಾಪಿಸಲಾಗಿದೆ. 56 ಮತಗಟ್ಟೆಗಳನ್ನು ಕ್ರಿಟಿಕಲ್ ಎಂದು ಗುರುತಿಸಲಾಗಿದೆ. ತಾಲೂಕಿನ ಕಂಪಲಾಪುರ ಮತ್ತು ಪಿರಿಯಾಪಟ್ಟಣದಲ್ಲಿ ಪಿಂಕ್ ಮತಗಟ್ಟೆ ತೆರೆಯಲಾಗುತ್ತಿದೆ. ಮತಗಟ್ಟೆಗಳಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ಕರ್ತವ್ಯ ನಿರ್ವಹಿಸಲಿದ್ದಾರೆ.
ಹಾಡಿ ಶೈಲಿ ಮತಗಟ್ಟೆ: ಬಹುತೇಕ ಹೆಚ್ಚಿನ ಗಿರಿಜನ ಮತದಾರರನ್ನೇ ಹೊಂದಿರುವ ಮುತ್ತೂರಿನ ರಾಜೀವ್ ಗ್ರಾಮ ಮತಗಟ್ಟೆಯಲ್ಲಿ ಗಿರಿಜನ ಹಾಡಿಯನ್ನು ಹೋಲುವ ಸಾಂಪ್ರದಾಯಕ ಮತಗಟ್ಟೆಯನ್ನು ತೆರೆಯಲಾಗುವುದು. 11 ಮತ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಂಚೆ ಮತದಾನ: ತಾಲೂಕಿನ 1105 ಸಿಬ್ಬಂದಿ ಅಂಚೆ ಮತದಾನಕ್ಕೆ ಅರ್ಜಿ ಪಡೆದಿದ್ದು ಅವರಲ್ಲಿ ಈಗಾಗಲೇ 605 ಮಂದಿ ತಮ್ಮ ಮತ ಚಲಾಯಿಸಿದ್ದಾರೆ. ಅಂಚೆ ಮತದಾನಕ್ಕಾಗಿ ತಾಲೂಕು ಕಚೇರಿಯಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು ಮೇ 12ರಂದು ಸಂಜೆ 6ರವರೆಗೆ ಸಮಯ ನೀಡಲಾಗಿದೆ ಎಂದು ಹೇಳಿದರು.
ಮದ್ಯ ನಿಷೇಧ: ಮೇ10ರಂದು ಸಂಜೆ 6ಗಂಟೆಯಿಂದ ಮೇ 12ರ ಮಧ್ಯರಾತ್ರಿವರೆಗೆ ಮತ್ತು ಮೇ 14ರ ಮಧ್ಯರಾತ್ರಿಯಿಂದ ಮೇ 15ರ ಮಧ್ಯರಾತ್ರಿವರೆಗೆ ಎಲ್ಲಾ ವಿಧದ ಮದ್ಯದ ಅಂಗಡಿಗಳನ್ನು ಮುಚ್ಚಲಾಗುವುದು. ಮದ್ಯ ಮಾರಾಟ, ಸಾಗಾಣಿಕೆ, ಶೇಖರಣೆಯನ್ನು ನಿಷೇಧಿಸಿ “ಒಣ ದಿನ” ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.