ವಿಶೇಷ ಮತಗಟ್ಟೆಗಳಲ್ಲಿ ಸಸಿ, ಮಜ್ಜಿಗೆ ವಿತರಣೆ


Team Udayavani, May 13, 2018, 1:04 PM IST

afridi.jpg

ಹುಣಸೂರು: ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಮತದಾನವನ್ನು ಸಂಭ್ರಮಿಸಲು ಇದೇ ಪ್ರಥಮ ಬಾರಿಗೆ ಸ್ವೀಪ್‌ ಸಮಿತಿ ಆಯೋಜಿಸಿದ್ದ ಬುಡಕಟ್ಟು ಜನರ ಸಾಂಪ್ರದಾಯಿಕ, ಪಿಂಕ್‌ ಹಾಗೂ ಮಾದರಿ ಮತಕೇಂದ್ರಗಳು ಮತದಾರರ ಪ್ರಮುಖ ಆಕರ್ಷಣೆಯಾಗಿತ್ತು.

ಹುಣಸೂರು-ನಾಗರಹೊಳೆ ಮುಖ್ಯ ರಸ್ತೆಯ ನಾಗಾಪುರ ಪುನರ್ವಸತಿ ಕೇಂದ್ರದ 3ನೇ ಬ್ಲಾಕ್‌ ನಲ್ಲಿನ ಗಿರಿಜನ ಆಶ್ರಮ ಕೇಂದ್ರದಲ್ಲಿ ಸ್ಥಾಪಿಸಿದ್ದ ಬುಡಕಟ್ಟು ಜನರ ಸಾಂಪ್ರದಾಯಿಕ ಮತಗಟ್ಟೆಗೆ ಸಂಭ್ರಮದಿಂದ ಆಗಮಿಸಿದ ಆದಿವಾಸಿಗಳು ತಮ್ಮದೇ ಶೈಲಿಯ ಗುಡಿಸಲ ಒಳ ಹೊಕ್ಕಿ ನಂತರ ಕೊಠಡಿಗೆ ತೆರಳಿ ಮತದಾನ ಮಾಡಿ ಸಂತಸಪಟ್ಟರು.

ಇನ್ನೂ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೆಲ್ಲರೂ ಮೈಸೂರು ಪೇಟ ತೊಟ್ಟು, ಶ್ವೇತವಸ್ತ್ರ ಧರಿಸಿ ಕರ್ತವ್ಯ ನಿರ್ವಹಿಸಿದರು. ಮತದಾನ ಮಾಡಿದ ಎಲ್ಲರಿಗೂ ನಿಂಬೆ ಹಣ್ಣಿನ ಶರಬತ್ತು ನೀಡಿ ಧಣಿವಾರಿಸಿದರು. ವಿವಿಧ ಜಾತಿಯ ಸಸಿ ವಿತರಿಸಲಾಯಿತು.

ಗಾವಡಗೆರೆ ಹಾಗೂ ಬನ್ನಿಕುಪ್ಪೆಯ ಮತಗಟ್ಟೆಯನ್ನು ಸಂಪೂರ್ಣ ಪಿಂಕ್‌ ಬಣ್ಣದಲ್ಲಿ ಇಡೀ ಕೊಠಡಿಯನ್ನು ಕಂಗೊಳಿಸುವಂತೆ ಮಾಡಲಾಗಿತ್ತು, ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೆಲ್ಲರೂ ಪಿಂಕ್‌ ಬಣ್ಣದ ಸೀರೆ ಧರಿಸಿದ್ದರು. ಹೊರ ಆವರಣವನ್ನು ಪಿಂಕ್‌ ಬಣ್ಣದ ಬೆಲೂನ್‌ಗಳಿಂದ ಸಿಂಗರಿಸಲಾಗಿತ್ತು. ಪಿಂಕ್‌ ಸೀರೆ, ಚೂಡಿದಾರ್‌ ಧರಿಸಿ ಬರುವ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಸಸಿ ಹಾಗೂ ಎಲ್ಲ ಮತದಾರರಿಗೂ ಮಜ್ಜಿಗೆ ವಿತರಿಸಿ ಬಾಯಾರಿಕೆ ನೀಗಿಸಿದರು.

ಕಟ್ಟೆಮಳಲವಾಡಿ, ಮನುಗನಹಳ್ಳಿ, ಬಿಳಿಕೆರೆ, ಚಿಲ್ಕುಂದ ಮತಗಟ್ಟೆಗಳನ್ನು ತಳಿರು ತೋರಣಗಳಿಂದ ಮದುವೆ ಮನೆಯಂತೆ ಸಿಂಗರಿಸಲಾಗಿತ್ತು. ಹೆಂಗಸರು,ಗಂಡಸರಿಗೆ ಪ್ರತ್ಯೇಕವಾಗಿ ಸಾಲು ವ್ಯವಸ್ಥೆ ಮಾಡಲಾಗಿತ್ತು. ಸ್ವಾಗತಕಾರರು ಮತದಾರರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕೆಲ ಹೊತ್ತು ಮಜ್ಜಿಗೆ ವಿತರಿಸಿದರು.

ಕೆಲ ಮತದಾರರು ಮದುವೆ ಮನೆಯಂತೆ ಶ್ರಂಗರಿಸಿದ್ದು, ಮದುವೆ ಪಂಟಪಕ್ಕೆ  ಬಂದ ಅನುಭವವಾಯಿತೆಂದು ಪತ್ರಿಕೆ ಜೊತೆ ಸಂತಸ ಹಂಚಿಕೊಂಡರು. ಎಲ್ಲ ಮಾದರಿ ಮತಗಟ್ಟೆಗಳಿಗೆ ಸ್ವೀಪ್‌ ಸಮಿತಿಯ ಅಧ್ಯಕ್ಷ, ಜಿಪಂ ಕಾರ್ಯ ನಿರ್ವಾಹಕ ಅಕಾರಿ ಶಿವಶಂಕರ್‌, ಸಂಚಾಲಕ ಕೃಷ್ಣಕುಮಾರ್‌ ಇನ್ನಿತರೆ ಅಧಿಕಾರಿಗಳು ಭೇಟಿ ನೀಡಿ ಮತದಾರರೊಂದಿಗೆ ಚರ್ಚಿಸಿ ಸಸಿ ವಿತರಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.