ಮೈತ್ರಿಗೆ ದಲಿತ ಸೂತ್ರ?


Team Udayavani, May 14, 2018, 6:00 AM IST

Siddaramaiah-BSY-HDK–1.jpg

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತ್ತೆ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ, “”ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ಥಾನ ಬಿಟ್ಟುಕೊಡಲು ಸಿದ್ಧ” ಎಂದು ಹೇಳುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಜೆಡಿಎಸ್‌ ಜತೆ ಸೇರಿ ಕಾಂಗ್ರೆಸ್‌ ಸರ್ಕಾರ ರಚಿಸಲು ಇದು ಮುನ್ನುಡಿ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಸ್ವಾಗತಿಸಿದರೆ, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನೆಂದೂ ಮುಖ್ಯಮಂತ್ರಿ ಹುದ್ದೆಗೆ ಅರ್ಜಿ ಹಾಕಿಲ್ಲ, ಹಾಕುವುದೂ ಇಲ್ಲ. ದಲಿತ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆ ನೀಡುವ ಬದಲು ಕಾಂಗ್ರೆಸ್‌ ಕಾರ್ಯಕರ್ತ, ಮುಖಂಡ ಎಂದು ನೀಡಿದರೆ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇದರಿಂದಾಗಿ ಕಾಂಗ್ರೆಸ್‌ನಲ್ಲಿ ದಲಿತ ಮುಖ್ಯಮಂತ್ರಿ ಪ್ರಸ್ತಾಪ ಮತ್ತೆ ಚರ್ಚೆಯ ಮುಂಚೂಣಿಗೆ ಬಂದಂತಾಗಿದೆ ಮಾತ್ರವಲ್ಲ, ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಬಿಜೆಪಿ ಮತ್ತು ಜೆಡಿಎಸ್‌ ಸೇರಿ ಸರ್ಕಾರ ರಚನೆ ಮಾಡದಂತೆ ನೋಡಿಕೊಳ್ಳುವ ಉದ್ದೇಶವೂ ಮುಖ್ಯಮಂತ್ರಿಗಳ ಹೇಳಿಕೆ ಹಿಂದಿದೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್‌ ಜತೆ ಮೈತ್ರಿಗೆ ಸಿಎಂ ಅಡ್ಡಿ:
ಸಿದ್ದರಾಮಯ್ಯ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿ ಮುಖ್ಯಮಂತ್ರಿಯಾಗಿರುವುದು ಮತ್ತು ನಂತರದಲ್ಲಿ ಜೆಡಿಎಸ್‌ನ ಏಳು ಶಾಸಕರನ್ನು ಕಾಂಗ್ರೆಸ್‌ಗೆ ಸೆಳೆದುಕೊಂಡಿರುವುದು ಜೆಡಿಎಸ್‌ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕೂಡ ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡಿದ್ದಾರೆ. ಈ ಮಧ್ಯೆ ಚುನಾವಣಾ ಪ್ರಚಾರದ ವೇಳೆ ದೇವೇಗೌಡರು ಮತ್ತು ಆ ಪಕ್ಷದ ವಿರುದ್ಧ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗಳು, ಅವರ ವರ್ತನೆ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಸಿಟ್ಟನ್ನು ಹೆಚ್ಚಿಸಿದೆ. ಈ ಕಾರಣಕ್ಕಾಗಿಯೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಎಲ್ಲ ರೀತಿಯ ಕಾರ್ಯತಂತ್ರಗಳನ್ನೂ ಜೆಡಿಎಸ್‌ ಹೆಣೆದಿತ್ತು.

ಈ ಎಲ್ಲಾ ಕಾರಣಗಳಿಂದಾಗಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಜತೆ ಹೋಗಲು ದೇವೇಗೌಡ ಮತ್ತು ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ. ಅಲ್ಲದೆ, ಜೆಡಿಎಸ್‌ ಅಧಿಕಾರಕ್ಕೆ ಬಂದರೆ ದಲಿತರೊಬ್ಬರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಜೆಡಿಎಸ್‌ ಈಗಾಗಲೇ ಘೋಷಿಸಿದೆ. ಇದನ್ನೇ ಮುಂದಿಟ್ಟುಕೊಂಡು ದಲಿತರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ಜೆಡಿಎಸ್‌ ಪಕ್ಷವನ್ನು ಕಾಂಗ್ರೆಸ್‌ನ ಸಮೀಪ ಬರುವಂತೆ ಮಾಡಿ ತಾವು ಮುಖ್ಯಮಂತ್ರಿ ಹುದ್ದೆಯಿಂದ ದೂರ ಉಳಿಯುವುದು. ಒಂದೊಮ್ಮೆ ದಲಿತರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿದರೂ, ಜೆಡಿಎಸ್‌ ಬೆಂಬಲಿಸದಿದ್ದರೆ ಅವರು ಕೋಮುವಾದಿಗಳೊಂದಿಗೆ ಕೈಜೋಡಿಸಿದ್ದಾರೆ ಎಂಬ ತಮ್ಮ ಈಗಿನ ಆರೋಪ ನಿಜವಾಗಿದೆ ಎಂದು ಹೇಳಿಕೊಳ್ಳುವುದು ಸಿದ್ದರಾಮಯ್ಯ ಅವರ ಈ ಹೇಳಿಕೆ ಹಿಂದಿರುವ ಮರ್ಮ ಎಂದು ಹೇಳಲಾಗುತ್ತಿದೆ.

ಮೇ 15ರಂದು ಪೂರ್ಣ ಪ್ರಮಾಣದ ಫ‌ಲಿತಾಂಶ ಬರಲಿದ್ದು, ಸಂಜೆಯ ವೇಳೆ ಬಿಜೆಪಿ ನೇತೃತ್ವದ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬರಲಿದೆ.
– ಅಮಿತ್‌ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ದಲಿತರು ಸಿಎಂ ಆಗುವುದಾದರೆ ನನ್ನ ತಕರಾರಿಲ್ಲ. ಇದಕ್ಕೆ ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್‌ ಒಪ್ಪಿಗೆ ಬೇಕಾಗುತ್ತದೆ. ಹೈಕಮಾಂಡ್‌ ದಲಿತ ಮುಖ್ಯಮಂತ್ರಿ ಮಾಡುವುದಾಗಿ ಹೇಳಿದರೆ ಸ್ಥಾನ ಬಿಟ್ಟು ಕೊಡಲು ಸಿದ್ಧ, ಈ ವಿಷಯದಲ್ಲಿ ನನ್ನ ತಕರಾರು ಏನೂ ಇಲ್ಲ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ನಾನೆಂದೂ ಸಿಎಂ ಹುದ್ದೆಗೆ ಅರ್ಜಿ ಹಾಕಿಲ್ಲ, ಹಾಕುವುದೂ ಇಲ್ಲ. ನನ್ನನ್ನು ಕಾಂಗ್ರೆಸ್‌ ಹಿರಿಯ ನಾಯಕ ಎಂದು ಕರೆಯಲು ಮುಜುಗರವಾಗುತ್ತಿದ್ದರೆ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ ಎಂದು ಹೇಳಲಿ. ದಲಿತ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆ ಬೇಡ.
– ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್‌ ನಾಯಕ

ಪಕ್ಷಗಳ ಸಮೀಕ್ಷೆಯ ನಂಬರ್‌ ಎಷ್ಟು?
ಕಾಂಗ್ರೆಸ್‌/ 122:
130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದ ಕಾಂಗ್ರೆಸ್‌ ಈಗ 122 ಸ್ಥಾನ ಉಳಿಸಿಕೊಳ್ಳುತ್ತೇವೆ ಎನ್ನುತ್ತಿದೆ.
ಬಿಜೆಪಿ/ 120: ಮಿಷನ್‌ 150+ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಈಗ 120 ಸ್ಥಾನ ಖಡಾಖಂಡಿತವಾಗಿ ಗೆಲ್ಲುತ್ತೇವೆ ಎಂದು ಹೇಳಿದೆ.
ಜೆಡಿಎಸ್‌: 113: ಜೆಡಿಎಸ್‌ ಮಾತ್ರ ಈಗಲೂ ಬಹುಮತ ನಮ್ಮದೇ ಎನ್ನುವುದರ ಜತೆಗೆ 113 ಸ್ಥಾನ ಗೆಲ್ಲೋದು ಗ್ಯಾರಂಟಿ ಎಂದಿದೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.