ಮತದಾನ: ಜಿಲ್ಲೆಗೆ ಪಿರಿಯಾಪಟ್ಟಣ ನಂ.1


Team Udayavani, May 14, 2018, 2:21 PM IST

m4-matadana.jpg

ಮೈಸೂರು: ತೀವ್ರ ಕುತೂಹಲ ಮೂಡಿಸಿರುವ ವಿಧಾನಸಭಾ ಚುನಾವಣೆಯಲ್ಲಿ ನಗರ ಪ್ರದೇಶದ ಜನರು ಮತದಾರರು ತಮ್ಮ ಹಕ್ಕು ಚಲಾಯಿಸಲು ನಿರಾಸಕ್ತಿ ತೋರಿದ್ದು, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ನಗರದ ಮೂರು ಕ್ಷೇತ್ರಗಳಲ್ಲಿ ಅತಿ ಕಡಿಮೆ ಮತದಾನ ನಡೆದಿದೆ.

ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಪುರುಷರು 12,51,642, ಮಹಿಳೆಯರು 12,41,576 ಹಾಗೂ ಇತರರು 189 ಮಂದಿ ಸೇರಿದಂತೆ ಒಟ್ಟು 24,93,407 ಮಂದಿ ಮತ ಚಲಾಯಿಸುವ ಹಕ್ಕು ಪಡೆದಿದ್ದರು. ಇವರಲ್ಲಿ 9,39,706 ಪುರುಷರು, 9,06,679 ಮಹಿಳೆಯರು ಹಾಗೂ 12 ಮಂದಿ ಇತರರು ಸೇರಿದಂತೆ ಒಟ್ಟು 18,46,397 ಮಂದಿ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲಾದ್ಯಂತ ಶೇ.74.05 ಮತದಾನ ನಡೆದಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ ಪಿರಿಯಾಪಟ್ಟಣದಲ್ಲಿ ಶೇ.85.80 ಹೆಚ್ಚಿನ ಮತದಾನ ನಡೆದಿದೆ. ಇದರೊಂದಿಗೆ ಹೆಚ್ಚಿನ ಮತದಾನದ ತಾಲೂಕು ಎಂಬ ಹೆಗ್ಗಳಿಕೆ ಪಡೆದಿರುವುದು ಗಮನಾರ್ಹ ಸಂಗತಿ.

ನಗರ ಜನರ ನಿರಾಸಕ್ತಿ: ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಹೋಲಿಸಿದರೆ ನಗರ ಪ್ರದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಿಂದ ದೂರ ಸರಿದಿದ್ದಾರೆ. ಅದರಲ್ಲೂ ಅಕ್ಷರಸ್ಥರು, ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎನ್ನಲಾಗುತ್ತಿದ್ದ ನಗರದ ಕೃಷ್ಣರಾಜ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ಕಡಿಮೆ ಮತದಾನ ನಡೆದಿದೆ.

ಈ ಪೈಕಿ 2,47,082 ಮತದಾರರಿರುವ ಕೃಷ್ಣರಾಜ ಕ್ಷೇತ್ರದಲ್ಲಿ 1,45,196 ಮಂದಿ ಮಾತ್ರವೇ ಮತದಾನ ಮಾಡಿದ್ದು, ಶೇ.58.76 ಮತದಾನ ನಡೆದಿದೆ. ಇನ್ನು ಚಾಮರಾಜ ಕ್ಷೇತ್ರದ 2,35,647 ಮತದಾರರಲ್ಲಿ 1,39,455 ಮತದಾರರು ಮಾತ್ರ ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟಾರೆ ಶೇ.59.18 ಮತದಾನವಾಗಿದೆ. ಇನ್ನು ನಗರ ವ್ಯಾಪ್ತಿಗೊಳಪಡುವ ನರಸಿಂಹರಾಜ ಕ್ಷೇತ್ರದಲ್ಲೂ ಹೆಚ್ಚಿನ ಪ್ರಮಾಣದ ಮತದಾನ ನಡೆದಿಲ್ಲ.

ಕ್ಷೇತ್ರದ ಒಟ್ಟು 2,62,300 ಮತದಾರರಲ್ಲಿ 1,60,957 ಮಂದಿ ಮತದಾನದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದ್ದು, ಪರಿಣಾಮ ಶೇ.61.36 ಮತಗಳು ಚಲಾವಣೆಗೊಂಡಿವೆ. ಈ ಮೂರು ಕ್ಷೇತ್ರಗಳ ಶೇಖವಾರು ಅಂಕಿಅಂಶಗಳ ಪ್ರಕಾರ ಪುರುಷ ಹಾಗೂ ಮಹಿಳಾ ಮತದಾರರು ಸಮಾನವಾಗಿ ಮತದಾನದಿಂದ ಹೊರಗುಳಿದಿರುವುದು ಕಂಡುಬರುತ್ತಿದೆ.

ಕ್ಷೇತ್ರವಾರು ವಿವರ: ಜಿಲ್ಲೆಯ ಹನ್ನೊಂದು ಕ್ಷೇತ್ರಗಳಲ್ಲಿ ಪಿರಿಯಾಪಟ್ಟಣದಲ್ಲಿ ಅತಿ ಹೆಚ್ಚು ಶೇ.85.80 ಮತದಾನವಾಗಿರುವುದು ಗಮನಾರ್ಹ. ಕೆ.ಆರ್‌.ನಗರ ಶೇ.84.79, ಹುಣಸೂರು ಕ್ಷೇತ್ರದಲ್ಲಿ ಶೇ.82.73, ಹೆಗ್ಗಡದೇವನಕೋಟೆ ಶೇ.79.11, ನಂಜನಗೂಡು ಶೇ.78.16, ಚಾಮುಂಡೇಶ್ವರಿ ಶೇ.76.05, ಕೃಷ್ಣರಾಜ ಶೇ.58.76, ಚಾಮರಾಜ ಶೇ.59.18, ನರಸಿಂಹರಾಜ ಶೇ.61.43, ವರುಣ ಕ್ಷೇತ್ರದಲ್ಲಿ ಶೇ.78.59, ತಿ.ನರಸೀಪುರ ಶೇ.78.08 ಮತದಾನ ನಡೆದಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.