ಮತದಾನದಲ್ಲೂ ಪರಿಸರ ಪ್ರೇಮ!


Team Udayavani, May 14, 2018, 5:28 PM IST

shiv.jpg

ಶಿವಮೊಗ್ಗ: ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಇದೇ ಪ್ರಪ್ರಥಮ ಬಾರಿಗೆ ಮತ ಚಲಾಯಿಸುತ್ತಿರುವ ಯುವಕ-
ಯುವತಿಯರಲ್ಲಿ ಸಾಕಷ್ಟು ಸಂಭ್ರಮ ಮನೆ ಮಾಡಿತ್ತು. ಬಹುತೇಕರು ಮತದಾನ ಮಾಡಿದ ಬಳಿಕ ಉಗುರಿಗೆ
ಹಾಕಿದ ಶಾಹಿಯ ಗುರುತನ್ನು ಮೊಬೈಲ್‌ನಲ್ಲಿ “ಸೆಲ್ಫಿ’ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ, ಮೊದಲ ಮತದಾನದ ಖುಷಿಯನ್ನು ಹಂಚಿಕೊಂಡರು.

ಮತ್ತೆ ಕೆಲವರು ಪ್ರಥಮ ಮತದಾನದ ಅನುಭವವನ್ನು ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವ
ಮೂಲಕ ಸದಾ ನೆನಪಿನಲ್ಲುಳಿಯುವ ಮಾದರಿ ಕೆಲಸ ಮಾಡಿದ್ದಾರೆ. ಇದಕ್ಕೆ ತಾಜಾ ನಿದರ್ಶನವೆಂಬಂತೆ, ಶಿವಮೊಗ್ಗ
ನಗರದ ಪಾರ್ಕ್‌ ಬಡಾವಣೆ ನಿವಾಸಿ ಹಾಗೂ ಬಿಕಾಂ ವಿದ್ಯಾರ್ಥಿನಿ ವೈಭವಿ ತನ್ನ ಮೊದಲ ಮತದಾನದ ನೆನಪಿಗಾಗಿ
ವ್ಯಕ್ತಪಡಿಸಿದ ಪರಿಸರ ಕಾಳಜಿ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಮೊದಲ ಮತದಾನದ ಸಂಭ್ರಮವನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಉದ್ದೇಶದಿಂದ ವೈಭವಿ ಸೋಮಿನಕೊಪ್ಪದ
ಕೆಎಚ್‌ಬಿ ಕಾಲೋನಿಯಲ್ಲಿ ಹೊಂಗೆ ಗಿಡ ನೆಟ್ಟಿದ್ದಾರೆ. ತಾವು ನೆಟ್ಟ ಗಿಡದ ಪಕ್ಕ ಕುಳಿತುಕೊಂಡು, ಕಪ್ಪು ಶಾಹಿ ಹಾಕಿದ
ಬೆರಳನ್ನು ತೋರ್ಪಡಿಸಿ ಫೋಟೋ ತೆಗೆಸಿಕೊಂಡಿದ್ದಾರೆ. ಇದೇ ಪ್ರಪ್ರಥಮ ಬಾರಿಗೆ ಮತದಾನ ಮಾಡುತ್ತಿರುವ
ಕಾರಣ ಸಾಕಷ್ಟು ಎಗ್ಸೆ„ಟ್‌ ಆಗಿದ್ದೆ. ಜೊತೆಗೆ ಕುತೂಹಲವಿತ್ತು.

ಮತದಾನ ಮಾಡಿದ ನಂತರ ಖುಷಿಯಾಯ್ತು. ಈ ಖುಷಿಯನ್ನು ಒಳ್ಳೆಯ ಕೆಲಸ ಮಾಡುವ ಮೂಲಕ  ನೆನಪಿಟ್ಟುಕೊಳ್ಳುವ ಕೆಲಸ ಮಾಡುವಂತೆ ತಂದೆ ಸಲಹೆ ನೀಡಿದರು. ಅದರಂತೆ ತಂದೆಯ ಜೊತೆ ತೆರಳಿ ಹೊಂಗೆ
ಗಿಡಗಳನ್ನು ಖರೀದಿಸಿ ನೆಟ್ಟಿದ್ದೇನೆ. ಆ ಗಿಡಗಳನ್ನು ದೊಡ್ಡದಾಗಿ ಮಾಡುವವರಿಗೂ ಪೋಷಣೆ ಮಾಡುತ್ತೇನೆ. ತಂದೆ ನೀಡಿದ ಸಲಹೆಯಿಂದ ತಮ್ಮಲ್ಲಿ ಪರಿಸರ ಪ್ರಜ್ಞೆ ಜಾಗೃತವಾಗುವಂತೆ ಮಾಡಿತು. ಜೊತೆಗೆ ಮತದಾನದ ಮಹತ್ವದ ಬಗ್ಗೆಯೂ ಅರಿವು ಉಂಟು ಮಾಡಿತು ಎಂದು ವೈಭವಿ ತಿಳಿಸಿದ್ದಾರೆ. 

ಪ್ರಪ್ರಥಮ ಬಾರಿಗೆ ಮತದಾನ ಮಾಡುವ ಯುವಕ- ಯುವತಿಯರು ಮೊದಲ ಮತದಾನದ ಸವಿನೆನಪಿಗಾಗಿ
ಪ್ರಕೃತಿ ಸಂರಕ್ಷಣೆಯ ಕಾರ್ಯ ಮಾಡಬೇಕೆಂಬ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಓದಿದ್ದೆ.
ಈ ವಿಷಯವನ್ನು ತಮ್ಮ ಪುತ್ರಿಗೆ ತಿಳಿಸಿದ್ದೆ. ಅದರಂತೆ ಆಕೆ ಗಿಡಗಳನ್ನು ನೆಡುವುದರ ಜೊತೆಗೆ, ಪೋಷಣೆಯ ಜವಾಬ್ದಾರಿ ಹೊತ್ತಿಕೊಂಡಿದ್ದಾಳೆ. ಇದು ತಮ್ಮಲ್ಲಿ ಸಂತಸ ಉಂಟು ಮಾಡಿದೆ ಎಂದು ವೈಭವಿ ಅವರ ತಂದೆ ಕುಶಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.