ಅಪಾಯಕಾರಿ ಸ್ಥಿತಿಯಲ್ಲಿರುವ ಸತ್ತ ಮರಗಳ ತೆರವಿಗೆ ಆಗ್ರಹ
Team Udayavani, May 15, 2018, 6:35 AM IST
ಕೋಟ: ಸಾೖಬ್ರಕಟ್ಟೆ-ಬಿದ್ಕಲ್ಕಟ್ಟೆ ಜಿಲ್ಲಾ ಮುಖ್ಯರಸ್ತೆಯ ಶಿರಿಯಾರ ಮದಗದಲ್ಲಿ ರಸ್ತೆಗೆ ತಾಗಿಕೊಂಡು 10ಕ್ಕೂ ಹೆಚ್ಚು ಗಾಳಿ ಮರಗಳು ಸಂಪೂರ್ಣ ಸತ್ತು ಹೋಗಿ ಒಣಗಿ ಬೀಳುವ ಸ್ಥಿತಿಯಲ್ಲಿದ್ದು ಅದನ್ನು ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಹಿಂದೆ ಮರಗಳನ್ನು ತೆರವುಗೊಳಿಸಲು ಸ್ಥಳೀಯರು ಗ್ರಾ.ಪಂ.ಗೆ ಮನವಿ ನೀಡಿದ್ದು, ಅದನ್ನು ಅರಣ್ಯ ಇಲಾಖೆಗೆ ರವಾನಿಸಲಾಗಿದೆ. ಆದರೆ ಅರಣ್ಯ ಇಲಾಖೆಯವರು ಈ ಕುರಿತು ಇನ್ನೂ ಕೂಡ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ. ಈ ಬಾರಿ ಮಳೆಗಾಲದಲ್ಲಿ ಮರಗಳು ಖಂಡಿತವಾಗಿ ರಸ್ತೆಗೆ ಉರುಳಲಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.
ಅಪಾಯ ಸಂಭವ
ಒಂದು ವೇಳೆ ಮರಗಳು ರಸ್ತೆಗುರುಳಿದಲ್ಲಿ ವಾಹನಗಳು, ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಎದುರಾಗಲಿದೆ ಅಥವಾ ವಿದ್ಯುತ್ ತಂತಿಯ ಮೇಲೆ ಬಿದ್ದು ಅನಾಹುತ ಉಂಟಾಗುವ ಸಂಭವವಿದೆ. ಹೀಗಾಗಿ ದೊಡ್ಡ ಮಟ್ಟದ ಅಪಾಯ ಉಂಟಾಗುವ ಮುನ್ನ ಸಂಬಂಧಪಟ್ಟ ಇಲಾಖೆಯವರು ಕ್ರಮಕೈಗೊಳ್ಳಬೇಕು ಎನ್ನುವುದು ನಾಗರಿಕರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ