ಮೀಸಲು ಬೋಗಿಯಲ್ಲಿ ಅಕ್ರಮ ಪ್ರಯಾಣ


Team Udayavani, May 15, 2018, 10:01 AM IST

15-May-1.jpg

ಮಹಾನಗರ: ಬೇಸಗೆಯ ಹಿನ್ನೆಲೆಯಲ್ಲಿ ಮಂಗಳೂರು- ಮುಂಬಯಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು, ರಿಸರ್ವೇಶನ್‌ ಬೋಗಿಗಳಲ್ಲಿ ವೈಟಿಂಗ್‌ ಲಿಸ್ಟ್‌ ಟಿಕೆಟ್‌ ಪ್ರಯಾಣಿಕರು ಅನಧಿಕೃತವಾಗಿ ಪ್ರಯಾಣಿಸಲು ಆರಂಭಿಸಿರುವುದರಿಂದ ರಿಸರ್ವ್‌ ರೈಲು ಬೋಗಿಗಳು ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿ ತುಳುಕುತ್ತಿವೆ. ಇದರಿಂದ ರಿಸರ್ವೇಶನ್‌ ಟಿಕೆಟ್‌ ಪಡೆದು ಪ್ರಯಾಣಿಸುವವರು ಹೈರಾಣಾಗಿ ಹೋಗಿದ್ದಾರೆ.

ಸಾಮಾನ್ಯವಾಗಿ ರೈಲು ಹೊರಡುವ 3 ಗಂಟೆ ಮೊದಲು ರೈಲ್‌ ಚಾರ್ಟ್‌ ತಯಾರಾಗುತ್ತದೆ. ಬಳಿಕವೂ ಟಿಕೆಟ್‌ ವೈಟಿಂಗ್‌ ಲಿಸ್ಟ್‌ನಲ್ಲಿದ್ದರೆ ನಿಯಮಾವಳಿ ಪ್ರಕಾರ ಟಿಕೆಟ್‌ನ್ನು ಕೌಂಟರ್‌ಗೆ ವಾಪಸ್‌ ಕೊಟ್ಟು ಹಣ ವಾಪಸ್‌ ಪಡೆಯಲು ಹಾಗೂ ಅನಿವಾರ್ಯವಾಗಿ ಪ್ರಯಾಣಿಸಲೇ ಬೇಕಿದ್ದರೆ ಜನರಲ್‌ ಟಿಕೆಟ್‌ ಪಡೆದು ಪ್ರಯಾಣಿಸಬಹುದು.

ಆದರೆ ಈಗ ಮಂಗಳೂರು- ಮುಂಬಯಿ ರೈಲುಗಳಲ್ಲಿ ರಿಸರ್ವೇಶನ್‌ ಕನ್‌ಫರ್ಮ್ ಆದ ಪ್ರಯಾಣಿಕರಿಗಿಂತ ಅಧಿಕ ವೈಟಿಂಗ್‌ ಲಿಸ್ಟ್‌ ಟಿಕೆಟ್‌ ಪಡೆದವರು ಪ್ರಯಾಣಿಸುತ್ತಿರುವುದು ಕಂಡು ಬರುತ್ತಿದೆ. ಟಿ.ಟಿ.ಇ.ಗಳು (ಟಿಕೆಟ್‌ ಪರಿವೀಕ್ಷಕರು) ತಪಾಸಣೆ ಬಿಗಿಗೊಳಿಸದಿರುವುದು ಇದಕ್ಕೆ ಮುಖ್ಯ ಕಾರಣ.

ದಂಡ ವಿಧಿಸಲು ಅವಕಾಶ
ರೈಲ್ವೇ ನಿಯಮಾವಳಿ ಪ್ರಕಾರ ವೈಟಿಂಗ್‌ ಲಿಸ್ಟ್‌ ಟಿಕೆಟ್‌ ಪ್ರಯಾಣಿಕರು ರಿಸರ್ವೇಶನ್‌ ಬೋಗಿಗೆ ಬಂದರೆ ಅವರನ್ನು ಟಿಕೆಟ್‌ ರಹಿತ ಪ್ರಯಾಣಿಕರೆಂದು ಪರಿಗಣಿಸಿ ಸಂಪೂರ್ಣ ಟಿಕೆಟ್‌ ದರದ ಜತೆಗೆ 250 ರೂ. ದಂಡ ವಿಧಿಸಲು ಅವಕಾಶವಿದೆ. ಆದರೆ ಮಂಗಳೂರು- ಮುಂಬಯಿ ಮಾರ್ಗದಲ್ಲಿ ಟಿಟಿಇಗಳು ಕಳೆದ ಎರಡು ದಶಕಗಳಿಂದಲೂ ನಿಯಮಗಳನ್ನು ಪಾಲಿಸುತ್ತಿಲ್ಲ; ಹಾಗಾಗಿ ವೈಟಿಂಗ್‌ ಲಿಸ್ಟ್‌ ಪ್ರಯಾಣಿಕರು ರಿಸರ್ವ್‌ ಬೋಗಿಯಲ್ಲಿ ಪ್ರಯಾಣಿಸುವುದು ರೂಢಿಯಾಗಿ ಬಿಟ್ಟಿದೆ ಎಂಬ ಆರೋಪಗಳು ಸತತವಾಗಿ ಕೇಳಿ ಬರುತ್ತಿವೆ.

ಶೋಚನೀಯ ಸ್ಥಿತಿ
ರೈಲು ಬೋಗಿಯ ಎರಡೂ ಸೀಟುಗಳ ಮಧ್ಯೆ ನೆಲದಲ್ಲಿ, ಒಂದು ಬಾಗಿಲಿನಿಂದ ಇನ್ನೊಂದು ಬಾಗಿಲಿಗೆ ಹೋಗುವ ಗ್ಯಾಂಗ್‌ವೇನಲ್ಲಿ ಮತ್ತು ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ಕುಳಿತು, ಮಲಗಿ ಪ್ರಯಾಣಿಸುತ್ತಾರೆ. ಯಾವುದೇ ಪುರುಷ ಪ್ರಯಾಣಿಕರು ಶೌಚಾಲಯಕ್ಕೆ ಹೋಗಬೇಕಾದರೆ ಲೋವರ್‌ ಬರ್ತ್‌ ಹಾಗೂ ಸೈಡ್‌ ಲೋವರ್‌ ಬರ್ತ್‌ನಲ್ಲಿ ಕಾಲೂರಿ ಸರ್ಕಸ್‌ ಮಾಡಿಕೊಂಡು ಹೋಗಬೇಕಾಗಿದೆ. ಇನ್ನು ರೋಗಿಗಳು, ಹಿರಿಯ ನಾಗರಿಕರು, ಗರ್ಭಿಣಿಯರು, ಸ್ಕರ್ಟ್‌ ಧರಿಸಿದ ಹುಡುಗಿಯರ ಪಾಡು ಶೋಚನೀಯ.

ಇಷ್ಟೇ ಅಲ್ಲದೆ ಲೋವರ್‌ ಬರ್ತ್‌ನ ಸೀಟಿನ ಅಡಿಯಲ್ಲಿರುವ ಬ್ಯಾಗ್‌ಗಳಿಂದ ಅಮೂಲ್ಯ ಸೊತ್ತುಗಳು ಕಳವಾಗುವ ಘಟನೆಗಳೂ ಸಂಭವಿಸುತ್ತವೆ. ಕಳೆದ ಫೆಬ್ರವರಿಯಲ್ಲಿ ಮುಂಬಯಿನಿಂದ ಮಂಗಳೂರಿಗೆ ರಿಸರ್ವ್‌ ಟಿಕೆಟ್‌ ಪಡೆದು ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ 4.5 ಲಕ್ಷ ರೂ.ಗಳ ಚಿನ್ನಾಭರಣ ಕಳವಾಗಿದ್ದು, ರೈಲು ಶಿರೂರು ತಲಪುವಾಗ ಗಮನಕ್ಕೆ ಬಂದಿತ್ತು. ಈ ಮಹಿಳೆ ತನ್ನ ಪುತ್ರನಿಗೆ ಎಂಜಿನಿಯರಿಂಗ್‌ ಓದಿಸಲು ಚಿನ್ನವನ್ನು ಮಂಗಳೂರಿನ ಬ್ಯಾಂಕ್‌ನಲ್ಲಿ ಅಡವು ಇರಿಸಲು ತೆರಳುತ್ತಿದ್ದರು. ಇಂತಹ ಹಲವು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಕೆಲವು ಮಾತ್ರ ಬೆಳಕಿಗೆ ಬರುತ್ತವೆ. 

ಹಲವು ಬಾರಿ ಮನವಿ
ರಿಸರ್ವ್‌ ಬೋಗಿಯಲ್ಲಿ ವೈಟಿಂಗ್‌ ಲಿಸ್ಟ್‌ ಟಿಕೆಟ್‌ ಪಡೆದವರು ಪ್ರಯಾಣಿಸುತ್ತಿರುವ ಬಗ್ಗೆ ಉಡುಪಿ, ಬೈಂದೂರು ಮತ್ತು ಮುಂಬಯಿ ರೈಲು ಯಾತ್ರಿ ಸಂಘಗಳು ಸೆಂಟ್ರಲ್‌ ಮತ್ತು ವೆಸ್ಟರ್ನ್ ರೈಲ್ವೇ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಆಗಿಲ್ಲ ಎಂದು ಮುಂಬಯಿ ರೈಲು ಯಾತ್ರಿ ಸಂಘದ ಕಾರ್ಯಕಾರಿ ಕಾರ್ಯದರ್ಶಿ ಒಲಿವರ್‌ ಡಿ’ಸೋಜಾ ಹೇಳುತ್ತಾರೆ.

ಗ್ರಾಹಕರ ನ್ಯಾಯಾಲಯದ ಮೊರೆ ಹೋಗಬಹುದು
ರಿಸರ್ವ್‌ ಬೋಗಿಯಲ್ಲಿ ಕನ್‌ಫರ್ಮ್ ಟಿಕೆಟ್‌ ಪಡೆದು ಪ್ರಯಾಣಿಸುವರು ತಮಗಾದ ಅನನುಕೂಲತೆಗಳ ಬಗ್ಗೆ ವೀಡೀಯೋ ಚಿತ್ರೀಕರಣ ಮಾಡಿ ಗ್ರಾಹಕರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದರೆ ರೈಲ್ವೇಯಿಂದ 30,000 ರೂ. ತನಕ ನಷ್ಟ ಪರಿಹಾರ ಪಡೆಯಲು ಅವಕಾಶವಿದೆ.

ಈಗಾಗಲೇ ಕೆಲವರು ಈ ರೀತಿ ಪರಿಹಾರವನ್ನು ಪಡೆದ ನಿದರ್ಶನಗಳಿವೆ. ಈ ರೀತಿ ಪ್ರತಿಯೊಬ್ಬ ಕನ್‌ ಫರ್ಮ್ ಪ್ರಯಾಣಿಕರು ತಮಗಾದ ಕೆಟ್ಟ ಪ್ರಯಾಣದ ಅನುಭವಕ್ಕಾಗಿ 30,000 ರೂ. ಪಡೆದರೆ ಮಾತ್ರ ಟಿಟಿಇಗಳು ವೈಟಿಂಗ್‌ ಲಿಸ್ಟ್‌ ಪ್ರಯಾಣಿಕರ ವಿರುದ್ಧ ಕ್ರಮ ಜರಗಿಸಲು ಮುಂದಾಗುವರು. ‘ರೋಹಾ- ತೋಕೂರು ನಡುವಣ ಕೊಂಕಣ ರೈಲು ಮಾರ್ಗದಲ್ಲಿ ಸುಮಾರು 72 ರೈಲು ನಿಲ್ದಾಣಗಳಿವೆ ಎನ್ನುತ್ತಾರೆ ಒಲಿವರ್‌ ಡಿ’ಸೋಜಾ.

ಮನವಿ ನೀಡಿದರೂ ಪ್ರಯೋಜನವಾಗಿಲ್ಲ
ವೈಟಿಂಗ್‌ ಲಿಸ್ಟ್‌ ಟಿಕೆಟ್‌ ಪಡೆದ ಪ್ರಯಾಣಿಕರು ರಿಸರ್ವ್‌ ಕೋಚ್‌ನಲ್ಲಿ ಪ್ರಯಾಣಿಸುವುದರಿಂದ ರಿಸರ್ವ್‌ ಟಿಕೆಟ್‌ ಪಡೆದು ಸಂಚರಿಸುವವರು ಅನುಭವಿಸುತ್ತಿರುವ ನೋವುಗಳನ್ನು ನಿವಾರಿಸುವ ನಿಟ್ಟಿನಲ್ಲಿ 2009ರಿಂದ ಪ್ರಯತ್ನಿಸುತ್ತಲೇ ಇದ್ದೇನೆ. ಸೆಂಟ್ರಲ್‌ ರೈಲ್ವೇ ಮತ್ತು ವೆಸ್ಟರ್ನ್ ರೈಲ್ವೇ ಕಮರ್ಶಿಯಲ್‌ ಮ್ಯಾನೇಜರ್‌ಗಳಿಗೆ ಮತ್ತು ಮಹಾರಾಷ್ಟ್ರದ ಸಂಸದ ಗೋಪಾಲ ಶೆಟ್ಟಿ ಅವರಿಗೂ ಮನವಿ ಸಲ್ಲಿಸುತ್ತಲೇ ಬಂದಿದ್ದೇನೆ. ಏನೂ ಪ್ರಯೋಜನವಾಗಿಲ್ಲ.
ಒಲಿವರ್‌ ಡಿ’ಸೋಜಾ,
  ಕಾರ್ಯಕಾರಿ ಕಾರ್ಯದರ್ಶಿ,
  ರೈಲು ಯಾತ್ರಿ ಸಂಘ, ಮುಂಬಯಿ

 ಕಟ್ಟು ನಿಟ್ಟಿನ ತಪಾಸಣೆ
ಮಂಗಳೂರು- ಮುಂಬಯಿ ರೈಲುಗಳಲ್ಲಿ ಈಗ ಪ್ರಯಾಣಿಕರ ಒತ್ತಡ ಜಾಸ್ತಿ ಇಲ್ಲ. ರಿಸರ್ವ್‌ ಕೋಚ್‌ಗಳಲ್ಲಿ ವೈಟಿಂಗ್‌ ಲಿಸ್ಟ್‌ ಟಿಕೆಟ್‌ನ ಪ್ರಯಾಣಿಕರು ಸಂಚರಿಸುತ್ತಿರುವುದನ್ನು ತಡೆಯಲು ಟಿ.ಟಿ.ಇ.ಗಳು ಆಗಿಂದಾಗ್ಗೆ ಕಟ್ಟು ನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ. ಆದರೆ ಕೆಲವೊಮ್ಮೆ ರಿಸರ್ವೇಶನ್‌ನಲ್ಲಿ ಟಿಕೆಟ್‌ ಪಡೆದವರ ಸಂಬಂಧಿಕರು ಎಂದು ಹೇಳಿ ಕೆಲವರು ರಿಸರ್ವ್‌ ಟಿಕೆಟ್‌ ಇರುವವರ ಅನುಮತಿ ಇದೆ ಎಂದು ಹೇಳಿ ಪ್ರಯಾಣಿಸುತ್ತಿದ್ದಾರೆ. ಇವರ ಹೊರತಾಗಿ ಬೇರೆ ಯಾರಿಗೂ ಅನುಮತಿ ಕೊಡುವುದಿಲ್ಲ. ಇತ್ತೀಚೆಗೆ ಬೇಸಗೆ ಕಾಲದ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಎರಡು ವಿಶೇಷ ಸಾಪ್ತಾಹಿಕ ರೈಲುಗಳ ಓಡಾಟ ಆರಂಭಿಸಲಾಗಿದೆ. ಒಂದು ರೈಲು ಪ್ರತಿ ಗುರುವಾರ ಮಧ್ಯರಾತ್ರಿ 2 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಡುತ್ತದೆ. ಇನ್ನೊಂದು ಕೊಚ್ಚುವೇಲಿ- ಮುಂಬಯಿ ಸಿಎಸ್‌ಟಿ ಮಧ್ಯೆ ಓಡಾಡುತ್ತಿದ್ದು, ಪ್ರತಿ ರವಿವಾರ ರಾತ್ರಿ 9.30ಕ್ಕೆ ಮಂಗಳೂರು ಜಂಕ್ಷನ್‌ನಿಂದ ನಿರ್ಗಮಿಸುತ್ತದೆ.
– ಸುಧಾ ಕೃಷ್ಣ ಮೂರ್ತಿ,
ಸಾರ್ವಜನಿಕ ಸಂಪರ್ಕ ಅಧಿಕಾರಿ, ಕೊಂಕಣ
ರೈಲ್ವೇ (ಮಂಗಳೂರು ರೈಲು ನಿಲ್ದಾಣ).

ಹಿಲರಿ ಕ್ರಾಸ್ತಾ 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.