ಸಿಬಂದಿ ಜತೆ ಊಟ ಮಾಡಿದ ಹಾಲಾಡಿ, ಭಟ್‌, ಲಾಲಾಜಿ


Team Udayavani, May 16, 2018, 6:20 AM IST

150518astro34.jpg

ಉಡುಪಿ: ಮತ ಎಣಿಕೆ ಕೇಂದ್ರದಲ್ಲಿ ಮಂಗಳವಾರ ಬಿಜೆಪಿ ವಿಜೇತ ಅಭ್ಯರ್ಥಿಗಳಾದ  ಹಾಲಾಡಿ ಶ್ರೀನಿವಾಸ ಶೆಟ್ಟಿ, ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಅವರು ಚುನಾವಣಾಧಿಕಾರಿಗಳು, ಸಿಬಂದಿ, ಪೊಲೀಸರು, ಪತ್ರಕರ್ತರು, ಮತ ಎಣಿಕೆ ಏಜೆಂಟರೊಂದಿಗೆ ಸರತಿಯಲ್ಲಿ ನಿಂತು ಊಟ ಮಾಡಿದ್ದು ವಿಶೇಷವಾಗಿತ್ತು. 

ತಂದೆ ನೆನಪಲ್ಲಿ ಕಣ್ಣೀರಾದ ಶಿಲ್ಪಾ 
ಜಿ.ಪಂ. ಸದಸ್ಯೆ, ಮಾಜಿ ಸಚಿವ ವಸಂತ ವಿ. ಸಾಲ್ಯಾನ್‌ ಅವರ ಪುತ್ರಿ ಶಿಲ್ಪಾ ಜಿ. ಸುವರ್ಣ ಅವರು ಲಾಲಾಜಿ ಅವರ ಜತೆಗೆ ಮತ ಎಣಿಕೆ ಕೇಂದ್ರದಿಂದ ಹೊರಗೆ ಬರುವ ಸಂದರ್ಭದಲ್ಲಿ ದುಃಖ ತಡೆಯಲಾದರೆ ಅತ್ತು ಬಿಟ್ಟರು. ಅನಂತರ ಕೆಲವು ಹೊತ್ತಿನ ಬಳಿಕ ಸಮಾಧಾನಗೊಂಡ ಶಿಲ್ಪಾ ಅವರನ್ನು ಪ್ರಶ್ನಿಸಿದಾಗ “ಕಾಪುವಿನಲ್ಲಿ ಕಾಂಗ್ರೆಸ್‌ನವರು ನನ್ನ ತಂದೆ ದಿ| ವಸಂತ ವಿ.ಸಾಲ್ಯಾನ್‌ ಅವರಿಗೆ ಮಾಡಿದ ದ್ರೋಹಕ್ಕೆ ಇಂದು ಕಾಪುವಿನ ಜನತೆ ಸರಿಯಾದ ಉತ್ತರ 
ನೀಡಿದ್ದಾರೆ.ಲಾಲಾಜಿ ಗೆಲುವು ಅತ್ಯಂತ ಸಂತಸ ನೀಡಿದೆ’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯೆ ನಿರಾಕರಿಸಿದ ಸೊರಕೆ
ಮತ ಎಣಿಕೆ ಪೂರ್ಣಗೊಳ್ಳುವವರೆಗೂ ಮತ ಎಣಿಕೆ ಕೇಂದ್ರದಲ್ಲಿಯೇ ಇದ್ದ ವಿನಯ ಕುಮಾರ್‌ ಸೊರಕೆ ಅವರು ಅಲ್ಲಿಂದ ಹೊರ ಹೋಗುವಾಗ ಮಾಧ್ಯಮದವರು ಎದುರಾಗಿ ಪ್ರಶ್ನಿಸಿ ದರೂ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.
 
ಲೆಕ್ಕಾಚಾರ ತಪ್ಪಿದ್ದೆಲ್ಲಿ ಗೊತ್ತಿಲ್ಲ 
ಮತ ಎಣಿಕೆ ಕೇಂದ್ರದಿಂದ ಹೊರಬಂದ ಕಾಂಗ್ರೆಸ್‌ನ ವೆರೋನಿಕಾ ಕರ್ನೇಲಿಯೋ ಅವರು “ನಮಗೆ ಯಾಕೆ ಸೋಲಾಯಿತೆಂದು ಗೊತ್ತಿಲ್ಲ. ಭ್ರಷ್ಟಾಚಾರ ರಹಿತವಾದ ಅಭಿವೃದ್ಧಿ ಕೆಲಸಗಳು ನಡೆದಿವೆ. ಬಹುಶಃ ಹಿಂದುತ್ವದ ಅಲೆಯೇ ಸೋಲಿಗೆ ಕಾರಣವಾಗಿರಬಹುದು’ ಎಂದು ಪ್ರತಿಕ್ರಿಯಿಸಿದರು. 

ಗೆದ್ದ ಬಳಿಕ ರೋಗಿ ಭೇಟಿ
ಗೆಲುವು ಸಾಧಿಸಿದ ಬಳಿಕ ರಘುಪತಿ ಭಟ್‌ ಅವರು ಶ್ರೀಕೃಷ್ಣಮಠ, ಮಲ್ಪೆ ವಡಭಾಂಡೇಶ್ವರ ದೇವಸ್ಥಾನಕ್ಕೆ ಹೋದ ಬಳಿಕ ಕಾರ್ಯಕರ್ತ ಪಾರ್ಶ್ವವಾಯುಪೀಡಿತ ಮಲ್ಪೆಯ ಪ್ರಶಾಂತ್‌ ಭಂಡಾರ್‌ಕರ್‌ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. 

ಎಣಿಕೆ ಕೇಂದ್ರಕ್ಕೆ ಆಗಮಿಸದ ಪ್ರಮೋದ್‌
ಬಿಜೆಪಿಯ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕಾಂಗ್ರೆಸ್‌ನ ರಾಕೇಶ್‌ ಮಲ್ಲಿ, ವಿನಯಕುಮಾರ್‌ ಸೊರಕೆ ಅವರು ಬೆಳಗ್ಗೆ 8 ಗಂಟೆಗೇ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದರು. ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌, ಗೋಪಾಲ ಪೂಜಾರಿ, ಗೋಪಾಲ ಭಂಡಾರಿ ಅವರು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿರಲಿಲ್ಲ. ಬಿಜೆಪಿಯ ಸುನಿಲ್‌ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ.ಸುಕುಮಾರ ಶೆಟ್ಟಿಯವರು ಗೆಲುವಿನ ವಾರ್ತೆ ತಿಳಿಯುತ್ತಲೇ ಕೇಂದ್ರಕ್ಕೆ ಆಗಮಿಸಿದರು. 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.