ಒಂದೇ ಎಲೆಯುಳ್ಳ ಪುಟ್ಟ ಮೂಲಿಕಾ ಸಸ್ಯ…ಒಂದೆಲಗ ರುಚಿ ಹಲವು


Team Udayavani, Nov 30, 2020, 5:28 PM IST

coocking.jpg

ಮಲೆನಾಡು ಮತ್ತು ಕರಾವಳಿಯ ಅಡಕೆ ತೋಟಗಳಲ್ಲಿ, ಗದ್ದೆಯ ಬದುವಿನಲ್ಲಿ, ಅಂಗಳದಲ್ಲಿ… ಹೀಗೆ ನೀರಿನ ಲಭ್ಯತೆ ಇರುವಲ್ಲಿ ಹುಲುಸಾಗಿ ಬೆಳೆಯುವ, ಉರುಟಾದ ಒಂದೇ ಎಲೆಯುಳ್ಳ ಪುಟ್ಟ ಮೂಲಿಕಾ ಸಸ್ಯ ಒಂದೆಲಗ’. ಇದಕ್ಕೆ ಬ್ರಾಹ್ಮಿ, ಉರಗೆ ಎಂಬ ಹೆಸರುಗಳೂ ಇವೆ.

ಒಂದೆಲಗದ ಅಡುಗೆಗಳು ಬಾಯಿಗೆ ರುಚಿ, ಶರೀರಕ್ಕೆ ತಂಪು ಹಾಗೂ ಬೇಸಗೆಯಲ್ಲಿ ಆರೋಗ್ಯಕ್ಕೆ ಹಿತಕಾರಿ. ಕೆಲವೊಮ್ಮೆ ಸೊಪ್ಪು ಮಾರುವವರ ಬಳಿ ಒಂದೆಲಗ ಸಿಗುತ್ತದೆ. ಮನೆಯಲ್ಲಿಯೇ ಕುಂಡಗಳಲ್ಲೂ ಒಂದೆಲಗ ಬೆಳೆಸಬಹುದು. ಒಂದೆಲಗದಿಂದ ತಯಾರಿಸಬಹುದಾದ ಕೆಲವು ತಿನಿಸುಗಳ ರೆಸಿಪಿ ಇಲ್ಲಿದೆ.

1.ಒಂದೆಲಗದ ಚಟ್ನಿ
ಬೇಕಾಗುವ ಸಾಮಗ್ರಿ: ತೊಳೆದು ಶುಚಿಗೊಳಿಸಿದ ಒಂದೆಲಗದ ಸೊಪ್ಪು- ಒಂದು ಹಿಡಿ, ತೆಂಗಿನತುರಿ- ಅರ್ಧ ಕಪ್‌, ಹಸಿಮೆಣಸು-2, ಕಾಳುಮೆಣಸಿನ ಪುಡಿ- ಅರ್ಧ ಚಮಚ, ಜೀರಿಗೆ- ಅರ್ಧ ಚಮಚ, ಕಡಲೇಬೇಳೆ-ಒಂದು ಚಮಚ, ಹುಣಸೇಹಣ್ಣು-ಸಣ್ಣ ಗೋಲಿಯಷ್ಟು, ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಒಣಮೆಣಸು, ಕರಿಬೇವಿನ ಸೊಪ್ಪು.

ತಯಾರಿಸುವ ವಿಧಾನ: ಮಸಾಲೆ ವಸ್ತುಗಳನ್ನು ಬಾಣಲೆಗೆ ಹಾಕಿ ಸುವಾಸನೆ ಬರುವಷ್ಟು ಹುರಿಯಿರಿ. ಸಾಮಾನ್ಯವಾಗಿ ಒಂದೆಲಗವನ್ನು ಹಸಿಯಾಗಿ ಬಳಸುವುದು ರೂಢಿ. ಬೇಕೆನಿಸಿದರೆ, ಬಾಣಲೆಗೆ ಹಾಕಿ ಸ್ವಲ್ಪ ಬಾಡಿಸಿಕೊಳ್ಳಬಹುದು. ಹುರಿದ ಮಸಾಲೆಗೆ ತುರಿದ ತೆಂಗಿನಕಾಯಿ, ಹಸಿಮೆಣಸು, ಒಂದೆಲಗದ ಸೊಪ್ಪು, ಹುಣಸೆಹಣ್ಣು ಮತ್ತು ಉಪ್ಪು ಸೇರಿಸಿ, ಬೇಕಾದರೆ ಸ್ವಲ್ಪ ನೀರನ್ನು ಸೇರಿಸಿ ಗಟ್ಟಿಯಾಗಿ ರುಬ್ಬಿ. ಕರಿಬೇವು, ಸಾಸಿವೆ ಹಾಕಿ ಒಗ್ಗರಣೆ ಕೊಟ್ಟರೆ ಹಸಿರು ಬಣ್ಣದ ಒಂದೆಲಗದ ಚಟ್ನಿ ಸಿದ್ಧ.

2.ಒಂದೆಲಗದ ತಂಬುಳಿ 
ಬೇಕಾಗುವ ಸಾಮಗ್ರಿ:
ಒಂದೆಲಗದ ಚಟ್ನಿ- ಅರ್ಧ ಕಪ್‌, ಮೊಸರು/ಮಜ್ಜಿಗೆ-2 ಕಪ್‌, ರುಚಿಗೆ ತಕ್ಕಷ್ಟು ಉಪ್ಪು

ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಒಣಮೆಣಸು, ಕರಿಬೇವಿನ ಸೊಪ್ಪು

ತಯಾರಿಸುವ ವಿಧಾನ: ಮೊದಲು ಒಂದೆಲಗದ ಚಟ್ನಿ ತಯಾರಿಸಿ. ಅರ್ಧ ಕಪ್‌ನಷ್ಟು ಚಟ್ನಿಗೆ 2 ಕಪ್‌ ಮೊಸರು ಅಥವಾ ಮಜ್ಜಿಗೆ ಬೆರೆಸಿ ಕದಡಿ. ಬೇಕಿದ್ದರೆ ಹೆಚ್ಚುವರಿ ನೀರು ಮತ್ತು ಉಪ್ಪು ಸೇರಿಸಿ ತಂಬುಳಿಯ ಹದಕ್ಕೆ ಬೆರೆಸಿ.  ಈ ಮಿಶ್ರಣಕ್ಕೆ ಸಾಸಿವೆ, ಕರಿಬೇವು ಸೇರಿಸಿದ ಒಗ್ಗರಣೆ ಕೊಟ್ಟರೆ ಒಂದೆಲಗದ ತಂಬುಳಿ ತಯಾರಾಗುತ್ತದೆ. ಇದಕ್ಕೆ ಬೇಕೆನಿಸಿದರೆ ಬೆಳ್ಳುಳ್ಳಿಯ ಒಗ್ಗರಣೆಯನ್ನೂ ಕೊಡಬಹುದು.

3. ಒಂದೆಲಗದ ತಿಳಿಸಾರು
ಬೇಕಾಗುವ ಸಾಮಗ್ರಿಗಳು:
ಒಂದೆಲಗದ ಚಟ್ನಿ-ಅರ್ಧ ಕಪ್‌ , ಟೊಮ್ಯಾಟೋ-2,ಸಾರಿನ ಪುಡಿ-ಒಂದು ಚಮಚ, ಬೆಂದ ತೊಗರಿಬೇಳೆ-ಕಾಲು ಕಪ್‌, ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಚಿಟಿಕೆ ಬೆಲ್ಲ, ಹೆಚ್ಚಿದ ಕೊತ್ತಂಬರಿ ಸೊಪ್ಪು ಸ್ವಲ್ಪ, ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಕರಿಬೇವು, ಆಯ್ಕೆಗೆ ತಕ್ಕಂತೆ ಇಂಗು ಅಥವಾ ಬೆಳ್ಳುಳ್ಳಿ.

ತಯಾರಿಸುವ ವಿಧಾನ: ಒಂದೆಲಗದ ಚಟ್ನಿ, ಹೆಚ್ಚಿದ ಟೊಮ್ಯಾಟೊ, ಬೆಂದ ತೊಗರಿಬೇಳೆ, ಸಾರಿನ ಪುಡಿ ಎಲ್ಲವನ್ನೂ ಸೇರಿಸಿ, ಬೇಕಾದಷ್ಟು ನೀರು ಸೇರಿಸಿ ಚೆನ್ನಾಗಿ ಕುದಿಸಿ. ರುಚಿಗೆ ತಕ್ಕಷ್ಟು ಉಪ್ಪು, ಬೇಕೆನಿಸಿದರೆ ಚಿಟಿಕೆ ಬೆಲ್ಲ ಸೇರಿಸಿ ಪುನ: ಕುದಿಸಿ. ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ. ಆಯ್ಕೆಗೆ ತಕ್ಕಂತೆ ಸಾಸಿವೆ, ಕರಿಬೇವು, ಇಂಗು ಅಥವಾ  ಬೆಳ್ಳುಳ್ಳಿ ಸೇರಿಸಿದ ಒಗ್ಗರಣೆ ಕೊಟ್ಟರೆ  ಒಂದೆಲಗದ ತಿಳಿಸಾರು ತಯಾರಾಗುತ್ತದೆ.

4. ಒಂದೆಲಗದ ಚಿತ್ರಾನ್ನ
ಬೇಕಾಗುವ ಸಾಮಗ್ರಿ:
ಒಂದಲಗದ ಚಟ್ನಿ-ಅರ್ಧ ಕಪ್‌,  ಉದುರಾದ ಅನ್ನ- 2 ಕಪ್‌,  ರುಚಿಗೆ ತಕ್ಕಷ್ಟು ಉಪ್ಪು, ಲಿಂಬೆಹಣ್ಣು-1, ಹೆಚ್ಚಿದ  ಕೊತ್ತಂಬರಿ ಸೊಪ್ಪು ಸ್ವಲ್ಪ, ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಕರಿಬೇವು, ಕಡಲೇಕಾಯಿ, ಉದ್ದಿನಬೇಳೆ, ಕಡಲೇಬೇಳೆ.

ತಯಾರಿಸುವ ವಿಧಾನ: ಒಂದೆಲಗದ ಚಟ್ನಿ ಮತ್ತು ಅನ್ನವನ್ನು ತಯಾರಿಸಿಟ್ಟುಕೊಳ್ಳಿ. ಬಾಣಲಿಯಲ್ಲಿ ಎಣ್ಣೆ, ಸಾಸಿವೆ, ಉಪ್ಪಿನಬೇಳೆ, ಕಡಲೇಬೇಳೆ, ಕಡಲೇಕಾಯಿ, ಕರಿಬೇವು ಹಾಕಿ ಒಗ್ಗರಣೆ ಮಾಡಿ, ಅದಕ್ಕೆ ಅನ್ನ ಮತ್ತು ಒಂದೆಲಗದ ಚಟ್ನಿ ಬೆರೆಸಿ. ಚಟ್ನಿಯಲ್ಲಿ  ಉಪ್ಪು, ಹುಳಿ  ಇರುವುದರಿಂದ ಅಗತ್ಯವಿದ್ದರೆ ಮಾತ್ರ ಹೆಚ್ಚುವರಿ ಉಪ್ಪು,  ನಿಂಬೆಹಣ್ಣಿನ ರಸ ಸೇರಿಸಿ ಪುನ: ಬೆರೆಸಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಹಸಿರು ಬಣ್ಣದ  ಒಂದೆಲಗದ ಚಿತ್ರಾನ್ನ ಸಿದ್ಧ.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.