ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಕೋಳಿವಾಡ ವಾಗ್ಧಾಳಿ !
Team Udayavani, May 16, 2018, 3:22 PM IST
ಬೆಂಗಳೂರು : ರಾಣಿ ಬೆನ್ನೂರು ಕ್ಷೇತ್ರದಲ್ಲಿ ಕೆಪಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿರುವ ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಅವರು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬುಧವಾರ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೋಳಿವಾಡ ಅವರು ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ‘ಪಕ್ಷ ಈ ಸ್ಥಿತಿಗೆ ಬರಲು ಇವನೇ ಸಿದ್ದರಾಮಯ್ಯ ಕಾರಣ. ಸರ್ವಾಧಿಕಾರಿ ಧೋರಣೆ ಅವನದ್ದು’ ಎಂದರು.
‘ಹಿಂದೇ ಪರಮೇಶ್ವರ್ ಸೋಲಿಗೂ ಇವನೇ ಕಾರಣ , ಕಳೆದ ಬಾರಿ ನನ್ನನ್ನು ,ಇನಾಮ್ದಾರ್ನನ್ನು ಸೋಲಿಸಲು ಬಹಳ ಪ್ರಯತ್ನ ಮಾಡಿದ ಆಗಲಿಲ್ಲ.ಈ ಬಾರಿ ಟಿಕೆಟ್ ತಡೆಯಲು ಪ್ರಯತ್ನ ಮಾಡಿದ. ನೇರವಾಗಿ ರಾಹುಲ್ ಗಾಂಧಿ ಜೊತೆ ಮಾತನಾಡಿ ಟಿಕೆಟ್ ಪಡೆದೆ ಆದರೆ ಕೆಪಿಜೆಪಿಯ ಶಂಕರ್ಗೆ ಬೆಂಬಲ ನೀಡಿ ನಾನು ಸೋಲುವಂತೆ ಮಾಡಿದ’ ಎಂದರು.
‘ಈ ಮನುಷ್ಯನಿಂದ ಕಾಂಗ್ರೆಸ್ ಪಕ್ಷಕ್ಕೆ ಉಪಯೋಗ ಆಗುವುದಿಲ್ಲ.ಅವನಿಗೆ ಪಕ್ಷದಲ್ಲಿ ಮಹತ್ವ ಕೊಟ್ಟರೆ ಪಕ್ಷದ ಅವನತಿಗೆ ಕಾರಣ ಆಗುತ್ತದೆ. ಜೆಡಿಎಸ್ಗೆ ಮೋಸ ಮಾಡಿ ಬಂದ’ ಎಂದರು.
‘ನನ್ನ ಮೇಲೆ ಕ್ರಮ ಕೈಗೊಳ್ಳಲು ಅವನ ಅಪ್ಪನಾಣೆ ಸಾಧ್ಯವಿಲ್ಲ. ನಾನು ಹುಟ್ಟು ಕಾಂಗ್ರೆಸಿಗ’ ಎಂದು ಕಿಡಿ ಕಾರಿದರು.
‘ಕುಮಾರಸ್ವಾಮಿಗೆ ಅಧಿಕಾರ ಕೊಡಲು ಸಿದ್ದರಾಮಯ್ಯ ಬಿಡುವುದಿಲ್ಲ. ಅವನನ್ನು ದೂರ ಇಡಬೇಕು’ ಎಂದರು.
‘ಏನೇನೆಲ್ಲಾ ಮಾಡಾಕ್ ಹೋದ,ಏನೆಲ್ಲಾ ಮಾಡ್ದ,ಇಲ್ಲಸಲ್ಲದ್ದೆಲ್ಲಾ ಹುಟ್ಟು ಹಾಕಿದ. ಮಾಡಿ ಅನುಭವಿಸಿದ ಈ ಮನುಷ್ಯನ ನಡವಳಿಕೆ ಅಹಂ, ಇವನ ಭಾಷಣ ಗೆಲ್ಲಿಸಬೇಕಿತ್ತಲ್ಲ. ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತ, ಬಾದಾಮಿಯಲ್ಲಿ ಕೆಲವೇ ಮತಗಳ ಅಂತರದಿಂದ ಗೆದ್ದ, ನಾಚಿಗೆಯಾಗಬೇಕು’ ಎಂದು ಕಿಡಿ ಕಾರಿದರು.
‘ಅವನದ್ದು ಕಾಂಗ್ರೆಸ್ ರಕ್ತ ಅಲ್ಲ, ಇಂತಹ ಮನುಷ್ಯನನ್ನು ಕಾಂಗ್ರೆಸ್ನಲ್ಲಿ ಉಳಿಸಿಕೊಳ್ಳಬಾರದು, ಲೋಕಸಭೆ ಚುನಾವಣೆಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಹೋಗಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !