ರಮ್ಜಾನ್‌ ವೇಳೆ ಕದನ ವಿರಾಮಕ್ಕೆ ಕೇಂದ್ರ ಅಸ್ತು


Team Udayavani, May 17, 2018, 6:00 AM IST

jk-ramzan.jpg

ಹೊಸದಿಲ್ಲಿ: ರಂಜಾನ್‌ ಅವಧಿಯಲ್ಲಿ ಜಮ್ಮು-ಕಾಶ್ಮೀರದಾದ್ಯಂತ ಕದನ ವಿರಾಮ ಘೋಷಿಸಬೇಕು ಎನ್ನುವ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಸ್ತಾಪವನ್ನು ಕೇಂದ್ರ ಸರಕಾರ ಒಪ್ಪಿದೆ. ಸಿಎಂ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸಲಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೀಮಿತ ಕದನ ವಿರಾಮ ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಬುಧವಾರ ತಿಳಿಸಿದೆ.

ರಮ್ಜಾನ್‌ ಅನ್ನು ಶಾಂತಿಯುತ ವಾತಾವರಣದಲ್ಲಿ ಆಚರಿಸಲು ಶಾಂತಿಪ್ರಿಯ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಈ ಕುರಿತು ಸಿಎಂ ಮೆಹಬೂಬಾರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಗೃಹ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಈ ನಿರ್ಧಾರವನ್ನು ಹಾಲಿ ಸಿಎಂ ಮೆಹಬೂಬಾ ಹಾಗೂ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ ಸೇರಿದಂತೆ ಪ್ರಮುಖರು ಸ್ವಾಗತಿಸಿದ್ದಾರೆ.

ದಾಳಿ ಮಾಡಿದರೆ ಪ್ರತ್ಯುತ್ತರ: ರಂಜಾನ್‌ ಅವಧಿಯಲ್ಲಿ ಕಣಿವೆ ರಾಜ್ಯಾದ್ಯಂತ ಯಾವುದೇ ಕಾರ್ಯಾಚರಣೆ ನಡೆಸದಂತೆ ಭದ್ರತಾ ಪಡೆಗಳಿಗೆ ಸರಕಾರ ಸೂಚಿಸಿದೆ. ಆದರೆ, ಒಂದು ವೇಳೆ ಭದ್ರತಾ ಪಡೆಗಳ ಮೇಲೆ ಯಾರಾದರೂ ದಾಳಿ ನಡೆಸಿದರೆ, ಅಂಥ ಸಂದರ್ಭದಲ್ಲಿ ತಕ್ಕ ಪ್ರತ್ಯುತ್ತರ ನೀಡಬಹುದು. ಅಷ್ಟೇ ಅಲ್ಲ, ಅಮಾಯಕರ ಜೀವವನ್ನು ರಕ್ಷಿಸಬೇಕಾದ ಸಂದರ್ಭ ಬಂದಾಗಲೂ ಸೂಕ್ತ ಕ್ರಮ ಕೈಗೊಳ್ಳಬಹುದು ಎಂದೂ ಸಚಿವಾಲಯ ಹೇಳಿದೆ. ಶಾಂತಿ ನೆಲೆಸುವ ಉದ್ದೇಶದಿಂದ ಕೈಗೊಂಡಿರುವ ಈ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು ಹಾಗೂ ಯಾವುದೇ ಸಮಸ್ಯೆಯಿಲ್ಲದೇ ರಂಜಾನ್‌ ಆಚರಿಸಲು ಮುಸ್ಲಿಂ ಸಹೋದರ, ಸಹೋದರಿಯರಿಗೆ ನೆರವಾಗಬೇಕು ಎಂದೂ ಗೃಹ ಇಲಾಖೆ ಹೇಳಿದೆ. ಮೇ 19ರಂದು ಪ್ರಧಾನಿ ಮೋದಿ ಅವರು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಇದರ ನಡುವೆಯೇ ಇಂಥ ಬೆಳವಣಿಗೆ ನಡೆದಿದೆ.

ಆಗಲ್ಲ ಎಂದಿದ್ದ ಬಿಜೆಪಿ: ಇತ್ತೀಚೆಗೆ ಸಿಎಂ ಮೆಹಬೂಬಾ ಅವರು ಕದನ ವಿರಾಮ ಘೋಷಣೆ ಪ್ರಸ್ತಾವ ಮಾಡಿದ್ದಾಗ ಅದನ್ನು ಬಿಜೆಪಿ ವಿರೋಧಿಸಿತ್ತು. ಇದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದೂ ಹೇಳಿತ್ತು. ಮಾನವ ಹಕ್ಕು ಸಂಸ್ಥೆಯೊಂದರ ವರದಿಯಂತೆ, ಕಣಿವೆ ರಾಜ್ಯದಲ್ಲಿ ನಡೆದ ಪ್ರತಿಭಟನೆಗಳು ಹಾಗೂ ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ 2016ರಲ್ಲಿ 145 ಮಂದಿ ನಾಗರಿಕರು, 2017ರಲ್ಲಿ 51 ಮಂದಿ ಮತ್ತು ಪ್ರಸಕ್ತ ವರ್ಷದ ಮೊದಲ 5 ತಿಂಗಳಲ್ಲಿ 39 ಮಂದಿ ಮೃತಪಟ್ಟಿದ್ದಾರೆ.

ಶೋಪಿಯಾನ್‌ನಲ್ಲಿ ಎನ್‌ಕೌಂಟರ್‌
ಬುಧವಾರ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್‌ ನಡೆದಿದೆ. ಸೇನಾ ಗಸ್ತು ವಾಹನದ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

ರಂಜಾನ್‌ ಸೀಮಿತ ಕದನ ವಿರಾಮವನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ವಿಚಾರದಲ್ಲಿ ವೈಯಕ್ತಿಕವಾಗಿ ಮಧ್ಯಪ್ರವೇಶ ಮಾಡಿದ ಪ್ರಧಾನಿ ಮೋದಿ ಹಾಗೂ ಸಚಿವ ರಾಜನಾಥ್‌ಗೆ ಧನ್ಯವಾದಗಳು.
ಮೆಹಬೂಬಾ ಮುಫ್ತಿ, 
ಜಮ್ಮು-ಕಾಶ್ಮೀರ ಸಿಎಂ

ಕೇಂದ್ರ ಸರಕಾರವು ಈಗ ಏಕಪಕ್ಷೀಯ ಕದನ ವಿರಾಮ ಘೋಷಿಸಿದೆ. ಉಗ್ರರೇನಾದರೂ ಕಾಲ್ಕೆರೆದುಕೊಂಡು ಬಂದರೆ, ಅವರ ನಿಜಬಣ್ಣ ಬಯಲಾಗುತ್ತದೆ. ಅವರು ನಿಜವಾಗಿಯೂ ಜನರ ಶತ್ರುಗಳು ಎಂಬುದು ಸಾಬೀತಾಗುತ್ತದೆ.
– ಒಮರ್‌ ಅಬ್ದುಲ್ಲಾ, 
ಜಮ್ಮು-ಕಾಶ್ಮೀರ ಮಾಜಿ ಸಿಎಂ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.