ಕರಾವಳಿ ಶಾಸಕರು ಬೆಂಗಳೂರಿಗೆ ದೌಡು
Team Udayavani, May 17, 2018, 11:21 AM IST
ಮಂಗಳೂರು: ಗೆದ್ದ ಬೆನ್ನಲ್ಲೇ ಕರಾವಳಿ ಭಾಗದ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ತೆರಳಿದ್ದು, ಆಯಾ ಪಕ್ಷದವರಿಂದ ಸರಕಾರ ರಚನೆಗೆ ನಡೆಯುತ್ತಿರುವ ಕಸರತ್ತು ನಡುವೆ ಕ್ಷಣಕ್ಷಣಕ್ಕೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಬಿಝಿಯಾಗಿದ್ದಾರೆ.
ಮಂಗಳವಾರ ಮತ ಎಣಿಕೆಯ ಫಲಿತಾಂಶ ಘೋಷಣೆಯಾದ ಬಳಿಕ ನೂತನ ಶಾಸಕರು ತಮ್ಮ ಕ್ಷೇತ್ರಗಳಿಗೆ ತೆರಳಿ ವಿಜಯೋತ್ಸಾಹದಲ್ಲಿ ಭಾಗಿಯಾಗಿದ್ದರು. ಆದರೆ ಸರಕಾರ ರಚಿಸುವಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭಿಸದೆ ಅತಂತ್ರ ಸ್ಥಿತಿ ನಿರ್ಮಾಣವಾಗಿರುವುದರಿಂದ ಬೆಂಗಳೂರಿನಲ್ಲಿ ಈಗ ಆಯಾ ಪಕ್ಷಗಳಲ್ಲಿ ಎಲ್ಲಿಲ್ಲದ ಕಸರತ್ತು-ತಂತ್ರಗಾರಿಕೆ ರೂಪುಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ, ರಾಜೇಶ್ ನಾೖಕ್, ಸಂಜೀವ ಮಠಂದೂರು, ಎಸ್. ಅಂಗಾರ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಸದ್ಯ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಐವರು ಬಿಜೆಪಿ ಶಾಸಕರಾದ ರಘುಪತಿ ಭಟ್, ಸುನಿಲ್ ಕುಮಾರ್, ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ ಕೂಡ ಬೆಂಗಳೂರಿಗೆ ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ತೆರಳಿದ್ದಾರೆ.
ಬಿಜೆಪಿ ಶಾಸಕರಲ್ಲಿ ಕೆಲವು ಮಂದಿ ಮಂಗಳವಾರ ರಾತ್ರಿ ಹಾಗೂ ಇನ್ನು ಕೆಲವರು ಬುಧವಾರ ಮುಂಜಾನೆ ಬೆಂಗಳೂರಿಗೆ ತೆರಳಿದ್ದಾರೆ. ಕಾಂಗ್ರೆಸ್ನ ಖಾದರ್ ಬುಧವಾರ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು