ದೇಶಪಾಂಡೆ ಪ್ರತಿಷ್ಠಾನದಿಂದ ತಾಯಂದಿರ ದಿನಾಚರಣೆ
Team Udayavani, May 17, 2018, 5:40 PM IST
ಹುಬ್ಬಳ್ಳಿ: ನಗರದ ದೇಶಪಾಂಡೆ ಶಿಕ್ಷಣ ಪ್ರತಿಷ್ಠಾನ ಮತ್ತು ದೇಶಪಾಂಡೆ ಚೈತನ್ಯ ಫೆಲೋಶಿಪ್ ತರಬೇತಿ ಕಾರ್ಯಕ್ರಮ
ಸಹಯೋಗದಲ್ಲಿ ವಿಶ್ವ ತಾಯಂದಿರ ದಿನ ಆಚರಿಸಲಾಯಿತು.
ಪ್ರೊ | ಉಷಾ ಸರೋದ್ಯಾ ಮಾತನಾಡಿ, ಸಂಘ-ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾತೃತ್ವದ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ಆಕೆಯ ತ್ಯಾಗ ಮನೋಭಾವನೆಯು ಪ್ರತಿಯೊಬ್ಬ ಮಗುವಿಗೂ ಮಾರ್ಗದರ್ಶಿಯಾಗಿದೆ. ಆಕೆಗಿಂತ ಮಿಗಿಲಾದ ಜ್ಞಾನಧಾರೆ ಬೇರೆಲ್ಲೂ ಇಲ್ಲ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಿವಾನಂದ ಹರಳಯ್ಯ ಮಾತನಾಡಿ, ನಾವೆಲ್ಲರೂ ಅಮ್ಮನ ಎದೆಯಾಳದಲ್ಲಿ ಪುಟ್ಟ ಕಂದಮ್ಮಗಳು. ಜಗತ್ತಿಗೆ ತಾಯಿಯೇ ಸರ್ವಶಕ್ತಿ. ಅವಳು ಕಲಿಸಿದ ಸಂಸ್ಕಾರ ಪ್ರತಿಯೊಬ್ಬರಿಗೂ ಮಾರ್ಗದರ್ಶಿ ಎಂದರು. ಕಾರ್ಯಕ್ರಮ ವ್ಯವಸ್ಥಾಪಕ ಡಿ.ಬಿ. ವಣಗೇರಿ ಮತ್ತು ಆ್ಯನಿ ವರ್ಗಿಸ್ ಮಾತನಾಡಿದರು. ಪ್ರತಿಷ್ಠಾನದ ವಿದ್ಯಾರ್ಥಿಗಳು ತಾಯಿಯಾಧಾರಿತ ಕಿರುನಾಟಕ ಮತ್ತು ನೃತ್ಯ ನಡೆಸಿಕೊಟ್ಟರು. ಸಂತೋಷ ಬಿರಾದಾರ, ಶುಭಂ ಸಾಳುಂಕೆ, ಪ್ರವೀಣ ಪಾಟೀಲ , ಶ್ವೇತಾ ಕೆ., ಮಲ್ಲಿಕಾರ್ಜುನ ಅಂಬಲಗಿ, ಮೇಘಾ ಸೊಲಗಿ, ಮೇಘಾ ಎ.ಸಿ,. ಆಶಾ, ಪ್ರಿಯಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು