ಪನ್ನೆಯ ಎರಡು ಕುಟುಂಬಗಳಿಗೆ ಕತ್ತಲೆಯೇ ಬದುಕು


Team Udayavani, May 18, 2018, 8:05 AM IST

family-18-5.jpg

ಸುಬ್ರಹ್ಮಣ್ಯ: ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಳುಗೋಡು ಗ್ರಾಮದ ಪನ್ನೆ ಎಂಬಲ್ಲಿ ಪರಿಶಿಷ್ಟ ಜಾತಿಯ ಎರಡು ಕುಟುಂಬಗಳು ವಾಸಿಸುತ್ತಿವೆ. ಈ ಕುಟುಂಬಗಳಿಗೆ ಮೂಲಸೌಕರ್ಯಗಳೇ ಇಲ್ಲದೆ ಕತ್ತಲೆಯೇ ಬದುಕಾಗಿದೆ. ಕಾಳಿ (80) ಎಂಬ ವೃದ್ಧೆ ತನ್ನ ಕುಟುಂಬದ ಜತೆ ಇಲ್ಲಿ ವಾಸವಿದ್ದರೆ, ಪಕ್ಕದಲ್ಲೇ ಮಗ ಚಂದ್ರಶೇಖರ್‌ ಕುಟುಂಬದ ಮನೆಯಿದೆ. ದಶಕಗಳಿಂದ ಇಲ್ಲಿ ವಾಸವಿರುವ ಈ ಕುಟುಂಬಗಳ ಬಳಿಗೆ ಸೌಕರ್ಯಗಳು ಸುಳಿದಿಲ್ಲ. ಈ ಕುಟುಂಬಗಳಲ್ಲಿ ಎಳೆಯ ವಯಸ್ಸಿನ ಮಕ್ಕಳು, ವೃದ್ಧೆ, ಪುರುಷರು, ಮಹಿಳೆಯರ ಸಹಿತ 10ಕ್ಕೂ ಅಧಿಕ ಜನರಿದ್ದಾರೆ. ಶಾಲೆಗೆ ತೆರಳುವ ವಿದ್ಯಾರ್ಥಿಗಳೂ ಇದ್ದಾರೆ. ಮಳೆಗಾಲದಲ್ಲಿ ಒಳನುಗ್ಗುವ ಮಳೆ ನೀರು ಇವರ ನಿದ್ದೆಗೆಡಿಸುತ್ತಿದೆ.

ಹಲವು ವರ್ಷಗಳಿಂದ ಜನಪ್ರತಿನಿಧಿಗಳನ್ನು ಒತ್ತಾಯಿಸುತ್ತಿದ್ದರೂ ಸೌಲಭ್ಯಗಳು ಸಿಕ್ಕಿಲ್ಲ. ಕೆಲ ದಿನಗಳ ಹಿಂದೆಯಷ್ಟೆ ವಿಧಾನಸಭಾ ಚುನಾವಣೆ ನಡೆದಿದೆ. ಮತ ಕೇಳಲು ಬಂದವರ ಬಳಿಯೂ ಇವರು ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಬಾರಿ ಖಂಡಿತ ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ ಎಂಬ ಭರವಸೆಯೂ ದೊರಕಿದೆ. ಇನ್ನಾದರೂ ನಮ್ಮ ಕುಟುಂಬಗಳಿಗೆ ಬೆಳಕು ಹರಿಯಬಹುದು, ಸಮಸ್ಯೆ ಸುಧಾರಿಸ ಬಹುದು ಎಂಬ ನಿರೀಕ್ಷೆ ಯಲ್ಲಿ ಮನೆ ಮಂದಿ ಇದ್ದಾರೆ.


ಶೌಚಾಲಯ, ನೀರು, ವಿದ್ಯುತ್ತಿಲ್ಲ

ರಸ್ತೆಗೆ ಹೊಂದಿಕೊಂಡೆ ಮನೆಗಳಿವೆ. ಆದರೂ ಸೌಕರ್ಯಗಳು ಇಲ್ಲ. ಕಾಲನಿಯಲ್ಲಿ ಶೌಚಾಲಯವಿದ್ದರೂ ನೆಪಕ್ಕಷ್ಟೇ ಎಂಬಂತಿದೆ. ಅದು ಸೂಕ್ತವಾಗಿಲ್ಲ. ನಿರಂತರ ನೀರು, ವಿದ್ಯುತ್‌ ವ್ಯವಸ್ಥೆ ಇಲ್ಲ.  ಇನ್ನೂ ವಿಶೇಷವೆಂದರೆ, ಈ ಮನೆಗಳಿಗೆ ಇದುವರೆಗೂ ಹಕ್ಕುಪತ್ರ ಸಿಕ್ಕಿಲ್ಲ. ಸಲ್ಲಿಸಿರುವ ಅರ್ಜಿಯ ಸ್ಥಿತಿಗತಿ ಏನು ಎಂಬ ಬಗ್ಗೆಯೂ ಮಾಹಿತಿಯಿಲ್ಲ. 

ಪಡಿತರ ಚೀಟಿ ಹೊರತುಪಡಿಸಿದರೆ ಬೇರಾವ ಸೌಕರ್ಯವೂ ಒದಗಿಲ್ಲ. ಕುಡಿಯುವ ನೀರೇನೋ ಬರುತ್ತಿದೆ. ಆದರೆ, ಬಟ್ಟೆ ಒಗೆಯಲು, ಸ್ನಾನಕ್ಕೆ ಸಮೀಪದ ಹೊಳೆಗೋ ಯಾರದಾದರೂ ಮನೆಗೋ ಹೋಗಬೇಕು. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಸರಕಾರ, ಸ್ಥಳೀಯಾಡಳಿತ ನೂರಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ನಮ್ಮ ಸಮಸ್ಯೆಗೂ ಸ್ಪಂದಿಸಿ ಎನ್ನುತ್ತಾರೆ ಸ್ಥಳೀಯರು.

ಭರವಸೆ ಇಲ್ಲದಂತಾಗಿದೆ
ಸೌಲಭ್ಯ ದೊರೆಯುತ್ತದೆ ಎಂದು ನಂಬಿದ್ದೆವು ಹಕ್ಕು ಪತ್ರಕ್ಕೆ 94 ಸಿ ಮೂಲಕ ಅರ್ಜಿ ಸಲ್ಲಿಸಿದ್ದೆವು. ಅದಾದರೂ ದೊರೆಯುತ್ತದೆ ಎಂಬ ಆಶಾವಾದವಿತ್ತು. ಈಗ ಭರವಸೆ ಕಳೆದುಹೋಗುತ್ತಿದೆ ಎನ್ನುತ್ತಾರೆ, ಕುಟುಂಬದ ನಿವಾಸಿ ಚಂದ್ರಶೇಖರ ಪನ್ನೆ.

ಚುನಾವಣೆ ವೇಳೆ ಎಲ್ಲರೂ ಬಂದು ಭರವಸೆಗಳನ್ನು ನೀಡುತ್ತಾರೆ. ಎಲ್ಲ ಸೌಲಭ್ಯ ಕಲ್ಪಿಸುತ್ತೇವೆಂದು ಹೇಳುತ್ತಾರೆ. ಚುನಾವಣೆ ಮುಗಿದ ಮೇಲೆ ಇತ್ತ ಗಮನ ಹರಿಸುವುದಿಲ್ಲ. ಇದು ಬೇಸರ ತರಿಸುತ್ತಿದೆ ಎನ್ನುತ್ತಾರೆ ವೃದ್ಧೆ ಕಾಳಿ ಅವರು. ಈ ಬಾರಿ ಕುಟುಂಬದ ಸದಸ್ಯರೆಲ್ಲರೂ ಮತ ಚಲಾಯಿಸಿದ್ದಾರೆ. ಅದೇ ರೀತಿ, ಜನಪ್ರತಿನಿಧಿಗಳೂ ತಮ್ಮ ಜವಾಬ್ದಾರಿ ನಿರ್ವಹಿಸಲಿ ಎಂದು ಆಗ್ರಹಿಸಿದ್ದಾರೆ.

ಮುರುಕು ಜೋಪಡಿಗಳು
ಎರಡು ಮನೆಗಳಲ್ಲಿ ಛಾವಣಿಗೆ ಟಾರ್ಪಲ್‌ ಹಾಸಿಕೊಂಡಿವೆ. ಮಣ್ಣಿನಿಂದ ನಿರ್ಮಿಸಿದ ಗೋಡೆಗಳು ಬಿರುಕು ಬಿಟ್ಟಿವೆ. ಮನೆಯೊಳಕ್ಕೆ ಹೊಕ್ಕು ಮೇಲಕ್ಕೆ ನೋಡಿದರೆ ಛಾವಣಿಯಲ್ಲಿನ ರಂಧ್ರಗಳು ಆಕಾಶದಲ್ಲಿನ ನಕ್ಷತ್ರಗಳನ್ನು ಎಣಿಸಲು ಅನುಕೂಲವಾದಂತಿವೆ. ಧರೆಗುರುಳಲು ಸಿದ್ಧವಾದ ಜೋಪಡಿಗಳ ಒಳಗೆ ದಶಕಗಳಿಂದ ಎರಡೂ ಕುಟುಂಬಗಳು ಅಸಹಾಯಕ ಸ್ಥಿತಿಯಲ್ಲಿ ದಿನ ದೂಡುತ್ತಿವೆ.

ಪರಿಶೀಲಿಸುವೆ
ಸೌಕರ್ಯ ವಂಚಿತ ಎರಡು ಕುಟುಂಬಗಳು ಮೂಲ ಸವಲತ್ತು ಕೋರಿ ಪಂಚಾಯತ್‌ ಗೆ ಅರ್ಜಿ ಸಲ್ಲಿಸಿವೆಯೇ ಎಂಬ ಕುರಿತು ಪರಿಶೀಲಿಸುತ್ತೇನೆ. ಅರ್ಜಿ ಸಲ್ಲಿಸದೆ ಇದ್ದಲ್ಲಿ ಅವರ ಗಮನಕ್ಕೆ ತಂದು ಅರ್ಜಿ ಸಲ್ಲಿಸುವಂತೆ ತಿಳಿಸುತ್ತೇನೆ. ಸಮಸ್ಯೆಗಳಿದ್ದಲ್ಲಿ ಈ ಬಗ್ಗೆ ಗಮನ ಹರಿಸುತ್ತೇನೆ.
-ವಿದ್ಯಾಧರ, ಪಿಡಿಒ, ಹರಿಹರ ಗ್ರಾ.ಪಂ.

— ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.