ರಾಜ್ಯಪಾಲರನಿಲುವುಖಂಡಿಸಿ ಜಿಲ್ಲಾಕಾಂಗ್ರೆಸ್ ನೇತೃತ್ವದಲ್ಲಿಪ್ರತಿಭಟನೆ
Team Udayavani, May 18, 2018, 11:08 AM IST
ಮಹಾನಗರ: ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ನಡೆಸಲು ರಾಜ್ಯಪಾಲರು ಅವಕಾಶ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ಸಂಜೆ ಮಂಗಳೂರು ಪುರಭವನ ಮುಂಭಾಗದ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.
ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ದೇಶದಲ್ಲಿ ಪ್ರಜಾ ಪ್ರಭುತ್ವ ವಿರೋಧಿ ನಿಲುವು ಹಾಗೂ ನಡವಳಿಕೆಗಳು ನಡೆಯುತ್ತಲೇ ಇವೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತವಿಲ್ಲದ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟಿರುವುದು ಪ್ರಜಾ ಪ್ರಭುತ್ವದ ದುರಂತ. ರಾಜ್ಯಪಾಲ ಹುದ್ದೆಯಲ್ಲಿ ಕುಳಿತವರು ಪ್ರಜಾಪ್ರಭುತ್ವ ಮೌಲ್ಯವನ್ನು ಎತ್ತಿಹಿಡಿಯುವುದರ ಜತೆಗೆ ಗೌರವಯುತವಾಗಿ, ಸಂವಿಧಾನಾತ್ಮಕವಾಗಿ ನಡೆದುಕೊಳ್ಳಬೇಕು ಎಂದರು.
ನಿರ್ಧಾರವನ್ನು ಪರಾಮರ್ಶೆ ಮಾಡಲಿ
ರಾಜ್ಯಪಾಲರ ನಿರ್ಧಾರವನ್ನು ಖಂಡಿಸಿ ಇಂದು ಜನರು ಬೀದಿಗೆ ಬಂದು ನಿಂತಿದ್ದಾರೆ. ಬೇರೆ ರಾಜ್ಯಗಳಲ್ಲಿ ಸರಕಾರ ರಚನೆ ಸಂಬಂಧ ಯಾವ ರೀತಿಯ ನೀತಿ ನಿಯಮಗಳನ್ನು ಪಾಲಿಸಲಾಗಿದೆಯೋ ಅದೇ ನಿಲುವುಗಳನ್ನು ರಾಜ್ಯದಲ್ಲಿಯೂ ಪಾಲಿಸಬೇಕು. ಬಹುಮತ ತೋರಿಸಿದ ಪಕ್ಷಗಳಿಗೆ ಸರಕಾರ ನಡೆಸಲು ಅವಕಾಶ ನೀಡಬೇಕು. ರಾಜ್ಯದಲ್ಲಿ ಜನಾಂದೋಲನ ಆಗುವ ಮೊದಲು ರಾಜ್ಯಪಾಲರು ತನ್ನ ಈಗಿನ ನಿರ್ಧಾರವನ್ನು ಪರಾಮರ್ಶೆ ಮಾಡಬೇಕು. ರಾಜ್ಯಪಾಲರು ತನ್ನ ವ್ಯಕ್ತಿ ಮತ್ತು ಹುದ್ದೆಯ ಗೌರವ ಕಾಪಾಡಲಿ. ಇದು ಸಾಂಕೇತಿಕ ಮುಷ್ಕರ ಆಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮೇಯರ್ ಭಾಸ್ಕರ್ ಕೆ., ಉಪಮೇಯರ್ ಕೆ. ಮಹಮ್ಮದ್, ಮುಖ್ಯ ಸಚೇತಕ ಎಂ.ಶಶಿಧರ ಹೆಗ್ಡೆ, ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ರಜನೀಶ್, ಸದಾಶಿವ ಉಳ್ಳಾಲ್, ಹರಿನಾಥ್, ವಿಶ್ವಾಸ್ ದಾಸ್, ಶಾಲೆಟ್ ಪಿಂಟೋ, ಅಪ್ಪಿ, ಮರಿಯಮ್ಮ ಥೋಮಸ್, ಅಬ್ದುಲ್ ಲತೀಫ್, ಅಬ್ದುಲ್ ಸಲೀಂ, ಸಂತೋಷ್ ಶೆಟ್ಟಿ, ಟಿ.ಕೆ. ಸುಧೀರ್, ಪ್ರವೀಣ್ ಆಳ್ವ, ನೀರಜ್ ಪಾಲ್, ಆರಿಫ್ ಬಾವಾ, ಮಹಮ್ಮದ್ ಹನೀಫ್, ನಝೀರ್ ಬಜಾಲ್, ವಸಂತ್ ಬೆರ್ನಾಡ್, ಉಮ್ಮರ್ ಫಾರೂಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ