ಪಾಕ್ ಗುಂಡಿನ ದಾಳಿಗೆ ಓರ್ವ ಬಿಎಸ್ಎಫ್ ಜವಾನ ಹುತಾತ್ಮ
Team Udayavani, May 18, 2018, 11:29 AM IST
ಜಮ್ಮು : ಜಮ್ಮುವಿನ ಆರ್ನಿಯಾ ವಲಯದಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೈನಿಕರು ಅಪ್ರಚೋದಿತವಾಗಿ ನಡೆಸಿದ ಗುಂಡಿನ ದಾಳಿಗೆ ಬಿಎಸ್ಎಫ್ ಯೋಧ ಹುತಾತ್ಮನಾಗಿರುವ ಘಟನೆ ಇಂದು ಶುಕ್ರವಾರ ನಸುಕಿನ ವೇಳೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವ ಒಂದು ದಿನ ಮೊದಲು ಈ ಘಟನೆ ನಡೆದಿರುವುದು ಗಮನಾರ್ಹವಾಗಿದೆ.
ಹಿರಿಯ ಬಿಎಸ್ಎಫ್ ಅಧಿಕಾರಿಯೋರ್ವರು ಹೇಳಿರುವ ಪ್ರಕಾರ ಮೇ 16 ಮತ್ತು 17ರ ನಡುವಿನ ರಾತ್ರಿ ಅಂತಾರಾಷ್ಟ್ರೀಯ ಗಡಿಯಲ್ಲಿನ ಹೀರಾನಗರ ಪ್ರದೇಶದಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಪಾಕ್ ಸೈನಿಕರು ನಡೆಸಿರುವ ಈ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಜವಾನ, ಕಾನ್ಸ್ಟೆಬಲ್ ಸೀತಾರಾಮ ಉಪಾಧ್ಯಾಯ ಮೃತಪಟ್ಟರು. ಇವರು 1991ರಲ್ಲಿ ಜಾರ್ಖಂಡ್ನ ಗಿರೀಧ್ನಲ್ಲಿ ಜನಿಸಿದ್ದರು. 2011ರಲ್ಲಿ ಸೇನಾ ಸಮವಸ್ತ್ರಧಾರಿಯಾದ ಅವರು ಮೂರು ವರ್ಷದ ಪುತ್ರಿ ಮತ್ತು 1 ವರ್ಷದ ಪುತ್ರನನ್ನು ಅಗಲಿದ್ದಾರೆ.
ಮುಂದುವರಿದ ಪಾಕ್ ಗುಂಡಿನ ದಾಳಿಗೆ ಬೆಳಗ್ಗೆ ಸುಮಾರು 6.45 ರ ಹೊತ್ತಿಗೆ ಆರ್ನಿಯಾ ವಲಯದ ಪಿತ್ತಲ್ ಎಂಬಲ್ಲಿನ ಸೇನಾ ಹೊರಠಾಣೆಯ ಬಿಎಸ್ಎಫ್ ಜವಾನನೊಬ್ಬ ಗಾಯಗೊಂಡ. ಆತನನ್ನು ಕೂಡಲೇ ಸೇನಾ ಆಸ್ಪತ್ರೆಗೆ, ಒಯ್ಯಲಾಗಿ ಆತ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿರುವುದಾಗಿ ಮೂಲಗಳು ತಿಳಿಸಿವೆ.
ಆರ್ನಿಯಾ ವಲಯದ ತ್ರೇವಾ ಗ್ರಾಮದಲ್ಲಿ ಇಬ್ಬರು ಮತ್ತು ಆರ್ ಎಸ್ ಪುರ ವಲಯದ ಸಾಮ್ಕಾ ಹಾಗೂ ಜೋರ್ಧಾ ದಲ್ಲಿ ತಲಾ ಒಬ್ಬರು ಸೇರಿದಂತೆ ಒಟ್ಟು ನಾಲ್ಕು ಪೌರರು ಪಾಕ್ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಮುನ್ನೆಚ್ಚರಿಕೆಯ ಕ್ರಮವಾಗಿ ಅಂತಾರಾಷ್ಟ್ರೀಯ ಗಡಿಯಿಂದ ಮೂರು ಕಿ.ಮೀ. ಫಾಸಲೆಯಲ್ಲಿರುವ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಮುಂದಿನ ಆದೇಶದ ತನಕ ಸುಮಾರು 200 ಶಾಲೆಗಳನ್ನು ಮುಚ್ಚುವಂತೆಯೂ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್