ರಾಜ್ಕೋಟ್: ವಾಲಾ ನಿವಾಸದ ಮುಂದೆ ಕೈ ಪ್ರತಿಭಟನೆ, 30 ಮಂದಿ ವಶಕ್ಕೆ
Team Udayavani, May 18, 2018, 3:47 PM IST
ರಾಜ್ಕೋಟ್: ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರ ಇಲ್ಲಿನ ನಿವಾಸದ ಮುಂದೆ ಇಂದು ಶುಕ್ರವಾರ ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರ ಒಂದು ಗುಂಪು ಜಮಾಯಿಸಿ ಘೋಷಣೆ ಕೂಗಿದುದನ್ನು ಅನುಸರಿಸಿ ಪೊಲೀಸರು 30 ಮಂದಿಯನ್ನು ವಶಕ್ಕೆ ತೆಗೆದುಕೊಂಡರು.
ಬಹುಮತ ಇಲ್ಲದಿದ್ದರೂ ಏಕೈಕ ದೊಡ್ಡ ಪಕ್ಷವೆಂಬ ಕಾರಣಕ್ಕೆ ಕರ್ನಾಟಕದಲ್ಲಿ ಬಿಜೆಪಿಯನ್ನು ಸರಕಾರ ರಚಿಸುವಂತೆ ಆಹ್ವಾನಿಸಿದ ರಾಜ್ಯಪಾಲ ವಜೂಭಾಯಿ ವಾಲಾ ಅವರ ನಿರ್ಧಾರವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಲು ಅವರ ನಿವಾಸದ ಮುಂದೆ ಜಮಾಯಿಸಿದ್ದರು.
ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರ ನಿರ್ಧಾರವು ಪ್ರಜಾಸತ್ತೆಯ ಮೇಲಿನ ಒಂದು ಕಪ್ಪು ಚುಕ್ಕೆ ಎಂದು ಕಾಂಗ್ರೆಸ್ ನಗರ ಘಟಕದ ಮುಖ್ಯಸ್ಥ ಮಹೇಶ್ ರಾಜಪೂತ್ ಅವರು ಹೇಳಿದರು. ವಜೂಭಾಯಿ ವಾಲಾ ಅವರ ನಿವಾಸವು ಇಲ್ಲಿನ ಕಳವಾಡ ರಸ್ತೆಗೆ ಸಮೀಪದ ನೂತನ ನಗರ ಸೊಸೈಟಿಯಲ್ಲಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ