ಪಾಕ್ ಶೆಲ್ ದಾಳಿ: ಐವರ ಸಾವು
Team Udayavani, May 19, 2018, 6:00 AM IST
ಜಮ್ಮು: ಭಾರತ-ಪಾಕ್ ಗಡಿಯಲ್ಲಿ ಮತ್ತೆ ಗುಂಡಿನ ಮೊರೆತ ಆರಂಭವಾಗಿದೆ. ಶುಕ್ರವಾರ ಜಮ್ಮುವಿನ ಗಡಿ ಠಾಣೆಗಳು ಹಾಗೂ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನಾಪಡೆ ಶೆಲ್ ದಾಳಿ ನಡೆಸಿದ್ದು, ಪರಿಣಾಮ ಒಬ್ಬ ಯೋಧ ಹುತಾತ್ಮನಾದರೆ, ನಾಲ್ವರು ನಾಗರಿಕರೂ ಮೃತಪಟ್ಟಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುವ ಮುನ್ನಾ ದಿನವೇ ಈ ಗುಂಡಿನ ಚಕಮಕಿ ನಡೆದಿದೆ.
ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಸತತ 4ನೇ ದಿನ ಪಾಕಿಸ್ತಾನವು ಗುಂಡಿನ ದಾಳಿ ನಡೆಸಿದೆ. ಹೀಗಾಗಿ, ಗಡಿ ಗ್ರಾಮದ ಜನರು ಭೀತಿಯಿಂದ ಕಾಲಕಳೆಯಬೇಕಾಗಿದೆ. ಈ ಕುರಿತು ಮಾತನಾಡಿರುವ ಬಿಎಸ್ಎಫ್ ಐಜಿ ರಾಮ್ ಅವತಾರ್, “ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ನಮ್ಮ ಸೇನೆಯೂ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡುತ್ತಿದೆ. ಆ ಭಾಗದಲ್ಲೂ ಭಾರೀ ಹಾನಿ ಉಂಟುಮಾಡ ಲಾಗಿದೆ’ ಎಂದು ಹೇಳಿದ್ದಾರೆ. ಪಾಕ್ನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯೋಧ 28 ವರ್ಷದ ಸೀತಾರಾಂ ಉಪಾಧ್ಯಾಯ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಇವರು ಜಾರ್ಖಂಡ್ನವರಾಗಿದ್ದು, 2011ರಲ್ಲಿ ಸೇನೆಗೆ ಸೇರಿದ್ದರು.
ನಮ್ಮ ದೇಶವು ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದರೆ, ಪಾಕಿಸ್ತಾ ನವು ಗುಂಡಿನ ದಾಳಿ ನಡೆಸುವ ಮೂಲಕ ಈ ಪವಿತ್ರ ರಂಜಾನ್ ಮಾಸದ ಮೇಲೆಯೂ ಗೌರವ ತೋರಿಸಿಲ್ಲ.
ಮೆಹಬೂಬಾ ಮುಫ್ತಿ, ಜಮ್ಮು-ಕಾಶ್ಮೀರ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು