ವಿಶ್ವಾಸಮತ ಬಗ್ಗೆ ನನಗೂ ಕುತೂಹಲವಿದೆ: ಎಚ್.ಡಿ.ದೇವೇಗೌಡ
Team Udayavani, May 19, 2018, 6:55 AM IST
ಬೆಂಗಳೂರು: “ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಿಶ್ವಾಸಮತ ಸಾಬೀತುಪಡಿಸುವ
ವಿಚಾರದಲ್ಲಿ ನಾನೂ ಉತ್ಸುಕನಾಗಿದ್ದೇನೆ’ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ
ಹೇಳಿದ್ದಾರೆ.
ಶುಕ್ರವಾರ ತಮ್ಮ ನಿವಾಸದಲ್ಲಿ 86ನೇ ಹುಟ್ಟುಹಬ್ಬ ಆಚರಿಸಿಕೊಂಡ ವೇಳೆ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು,”ಸಂಖ್ಯಾಬಲದ ಆಧಾರದ ಮೇಲೆ ಏನಾಗುತ್ತದೋ ಗೊತ್ತಿಲ್ಲ.ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶ್ವಾಸಮತ ಸಾಬೀತುಪಡಿಸುವ ವಿಚಾರ ನೋಡಲು ನಾನೂ ಉತ್ಸುಕನಾಗಿದ್ದೇನೆ. ಬಹುಮತ ಸಿಕ್ಕಿದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಇಲ್ಲವಾದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ’ ಎಂದರು.
ರಾಜಕೀಯವಾಗಿ ಹೆಚ್ಚು ಮಾತನಾಡಲು ಬಯಸದ ದೇವೇಗೌಡರು, “ಇಂದು ನನ್ನ ಹುಟ್ಟುಹಬ್ಬ. ಹೀಗಾಗಿ,
ಹೆಚ್ಚೇನೂ ಮಾತನಾಡುವುದಿಲ್ಲ. ರಾಜಕೀಯವಾಗಿ ನಾಳೆ ಮಾತನಾಡೋಣ’ ಎಂದಷ್ಟೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ